<p><strong>ಕೆಜಿಎಫ್</strong>: ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನಿಷ್ಠ ನಾಲ್ಕು ಕೆರೆಗಳ ಸುತ್ತ ಸಸಿಗಳನ್ನು ನೆಡಬೇಕಿದೆ. ಕೆಜಿಎಫ್ ತಾಲ್ಲೂಕಿನಲ್ಲಿ ನೆಡಲು ಅರಣ್ಯ ಇಲಾಖೆ 3.50 ಲಕ್ಷ ಸಸಿಗಳನ್ನು ಸಿದ್ಧಗೊಳಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಹೇಳಿದರು.</p>.<p>ನಗರಸಭೆ ಸಭಾಂಗಣದಲ್ಲಿ ಶನಿವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>2024 ವೇಳೆಗೆ ಎಲ್ಲ ಮನೆಗಳಿಗೂ ಪ್ರತ್ಯೇಕ ನಲ್ಲಿ ನೀರಿನ ಸಂಪರ್ಕ ಕೊಡಬೇಕಿದೆ. ಆರ್ಥಿಕವಾಗಿ ಸಬಲರಾಗಿರುವ ಜನರ ಮನೆಗಳ ನೀರು ಪೂರೈಕೆಗೆ ಮೀಟರ್ ಅಳವಡಿಸಬೇಕು. ಪಂಚಾಯಿತಿಗಳು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.</p>.<p>ಉದ್ಯೋಗ ಖಾತ್ರಿ ಯೋಜನೆಯಡಿ ಗಿಡ ಬೆಳೆಸುವುದು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಆದ್ಯತೆ ನೀಡಲಾಗುತ್ತಿದೆ. ಕೆಜಿಎಫ್ ಪ್ರತ್ಯೇಕ ತಾಲ್ಲೂಕಾಗಿದ್ದರೂ, ಕೆಲವೊಂದು ಅನುದಾನ ಇನ್ನೂ ಬಂಗಾರಪೇಟೆ ತಾಲ್ಲೂಕಿನ ಹೆಸರಿನಲ್ಲಿ ಬರುತ್ತಿದೆ. ಅದನ್ನು 50:50 ಅನುಪಾತದಲ್ಲಿ ವಿತರಣೆ ಮಾಡಲಾಗುವುದು ಎಂದು ದರ್ಶನ್ ಹೇಳಿದರು.</p>.<p>ಶಾಸಕಿ ಎಂ.ರೂಪಕಲಾ ಮಾತನಾಡಿ, ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ವಾಟರ್ ಮನ್ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರೆಲ್ಲರೂ ನಿಗದಿತ ಆದಾಯಕ್ಕೆ ದಾರಿ ಕಂಡುಕೊಂಡಿದ್ದಾರೆ. ಅವರ ವಿರುದ್ಧ ಪಿಡಿಒಗಳು ಕ್ರಮ ಜರುಗಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೇರೆ ತಾಲ್ಲೂಕುಗಳಿಗೆ ಕೆ.ಸಿ. ವ್ಯಾಲಿ ಯೋಜನೆ ನೀರು ಬರುತ್ತಿರುವುದರಿಂದ ಅಂತರ್ಜಲ ಹೆಚ್ಚಾಗಿದೆ. ನಮ್ಮಲ್ಲಿ 1,400 ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ನೀರಿನ ಸಮಸ್ಯೆ ನಿವಾರಿಸಲು ಮತ್ತಷ್ಟು ಅನುದಾನ ತರಲಾಗುವುದು ಎಂದರು.</p>.<p>ರಾಮಸಾಗರ ಕೆರೆ ಅಂಚಿನಲ್ಲಿ ಕನಿಷ್ಠ 3,000 ಗಿಡಗಳನ್ನು ನೆಡಬೇಕು ಎಂದು ರಾಮಸಾಗರ ಪಿಡಿಒಗೆ ದರ್ಶನ್ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ತಹಶೀಲ್ದಾರ್ ಕೆ.ರಮೇಶ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನಿಷ್ಠ ನಾಲ್ಕು ಕೆರೆಗಳ ಸುತ್ತ ಸಸಿಗಳನ್ನು ನೆಡಬೇಕಿದೆ. ಕೆಜಿಎಫ್ ತಾಲ್ಲೂಕಿನಲ್ಲಿ ನೆಡಲು ಅರಣ್ಯ ಇಲಾಖೆ 3.50 ಲಕ್ಷ ಸಸಿಗಳನ್ನು ಸಿದ್ಧಗೊಳಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಹೇಳಿದರು.</p>.<p>ನಗರಸಭೆ ಸಭಾಂಗಣದಲ್ಲಿ ಶನಿವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>2024 ವೇಳೆಗೆ ಎಲ್ಲ ಮನೆಗಳಿಗೂ ಪ್ರತ್ಯೇಕ ನಲ್ಲಿ ನೀರಿನ ಸಂಪರ್ಕ ಕೊಡಬೇಕಿದೆ. ಆರ್ಥಿಕವಾಗಿ ಸಬಲರಾಗಿರುವ ಜನರ ಮನೆಗಳ ನೀರು ಪೂರೈಕೆಗೆ ಮೀಟರ್ ಅಳವಡಿಸಬೇಕು. ಪಂಚಾಯಿತಿಗಳು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.</p>.<p>ಉದ್ಯೋಗ ಖಾತ್ರಿ ಯೋಜನೆಯಡಿ ಗಿಡ ಬೆಳೆಸುವುದು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಆದ್ಯತೆ ನೀಡಲಾಗುತ್ತಿದೆ. ಕೆಜಿಎಫ್ ಪ್ರತ್ಯೇಕ ತಾಲ್ಲೂಕಾಗಿದ್ದರೂ, ಕೆಲವೊಂದು ಅನುದಾನ ಇನ್ನೂ ಬಂಗಾರಪೇಟೆ ತಾಲ್ಲೂಕಿನ ಹೆಸರಿನಲ್ಲಿ ಬರುತ್ತಿದೆ. ಅದನ್ನು 50:50 ಅನುಪಾತದಲ್ಲಿ ವಿತರಣೆ ಮಾಡಲಾಗುವುದು ಎಂದು ದರ್ಶನ್ ಹೇಳಿದರು.</p>.<p>ಶಾಸಕಿ ಎಂ.ರೂಪಕಲಾ ಮಾತನಾಡಿ, ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ವಾಟರ್ ಮನ್ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರೆಲ್ಲರೂ ನಿಗದಿತ ಆದಾಯಕ್ಕೆ ದಾರಿ ಕಂಡುಕೊಂಡಿದ್ದಾರೆ. ಅವರ ವಿರುದ್ಧ ಪಿಡಿಒಗಳು ಕ್ರಮ ಜರುಗಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೇರೆ ತಾಲ್ಲೂಕುಗಳಿಗೆ ಕೆ.ಸಿ. ವ್ಯಾಲಿ ಯೋಜನೆ ನೀರು ಬರುತ್ತಿರುವುದರಿಂದ ಅಂತರ್ಜಲ ಹೆಚ್ಚಾಗಿದೆ. ನಮ್ಮಲ್ಲಿ 1,400 ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ನೀರಿನ ಸಮಸ್ಯೆ ನಿವಾರಿಸಲು ಮತ್ತಷ್ಟು ಅನುದಾನ ತರಲಾಗುವುದು ಎಂದರು.</p>.<p>ರಾಮಸಾಗರ ಕೆರೆ ಅಂಚಿನಲ್ಲಿ ಕನಿಷ್ಠ 3,000 ಗಿಡಗಳನ್ನು ನೆಡಬೇಕು ಎಂದು ರಾಮಸಾಗರ ಪಿಡಿಒಗೆ ದರ್ಶನ್ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ತಹಶೀಲ್ದಾರ್ ಕೆ.ರಮೇಶ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>