ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಗಣಿ ಕಳ್ಳತನಕ್ಕೆ ಯತ್ನ

Last Updated 20 ಜೂನ್ 2020, 10:41 IST
ಅಕ್ಷರ ಗಾತ್ರ

ಕೆಜಿಎಫ್‌: ಬಿಜಿಎಂಎಲ್‌ (ಚಿನ್ನದ ಗಣಿ)ಗೆ ಸೇರಿದ ನಂದಿ ದುರ್ಗ ಮೈನ್ಸ್‌ನಲ್ಲಿ ಕಳ್ಳತನ ಮಾಡಲು ವಿಫಲ ಯತ್ನ ನಡೆದಿದೆ.

ನಂದಿ ದುರ್ಗ ಮೈನ್ಸ್‌ಗೆ ಬುಧವಾರ ಚಿನ್ನದ ಮಿಶ್ರಿತ ಮಣ್ಣನ್ನು ಕದಿಯಲು ಕಳ್ಳರ ಒಂದು ತಂಡ ಬಂದಿತ್ತು. ಚಿನ್ನದ ಅದಿರನ್ನು ಕೊರೆಯಲು ತಮ್ಮೊಂದಿಗೆ ವಿದ್ಯುತ್ ಚಾಲಿತ ಡ್ರಿಲ್ಲಿಂಗ್ ಯಂತ್ರವನ್ನು ಸಹ ತಂದಿದ್ದರು. ಗಣಿಯೊಳಗೆ ತಂದಿದ್ದ ಬುತ್ತಿಯನ್ನು ಸೇವಿಸಿ ಕಳ್ಳತನಕ್ಕೆ ಯತ್ನ ನಡೆಸಿತ್ತು. ಮಾಹಿತಿ ತಿಳಿದ ಹಿರಿಯ ಅಧಿಕಾರಿಗಳು ಮಿಲ್‌ಗೆ ಹೋಗುವಷ್ಟರಲ್ಲಿ ಅವರು ಓಡಿಹೋಗಿದ್ದಾರೆ ಎಂದು ಭದ್ರತಾ ವಲಯದ ಮೂಲಗಳು ತಿಳಿಸಿವೆ.

ಈಚೆಗೆ ಇದೇ ರೀತಿ ಮಾರಿಕುಪ್ಪಂನಲ್ಲಿರುವ ಚಿನ್ನದ ಗಣಿಗೆ ಇಳಿದಿದ್ದ ಕಳ್ಳರ ತಂಡದ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದರು. ಒಬ್ಬನ ಶವ ಇನ್ನೂ ಗಣಿಯೊಳಗೆ ಇದೆ. ಇಂತಹ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಇದ್ದರೂ, ಕಳ್ಳರು ಗಣಿಗೆ ನುಗ್ಗಿರುವುದು ಆಶ್ವರ್ಯ ತಂದಿದೆ. ಬಿಜಿಎಂಎಲ್ ಮುಖ್ಯ ಭದ್ರತಾ ಅಧಿಕಾರಿ ಪನ್ಸಂಬಾಲ್‌ ಊರಿಗಾಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT