ಈಚೆಗೆ ಇದೇ ರೀತಿ ಮಾರಿಕುಪ್ಪಂನಲ್ಲಿರುವ ಚಿನ್ನದ ಗಣಿಗೆ ಇಳಿದಿದ್ದ ಕಳ್ಳರ ತಂಡದ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದರು. ಒಬ್ಬನ ಶವ ಇನ್ನೂ ಗಣಿಯೊಳಗೆ ಇದೆ. ಇಂತಹ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಇದ್ದರೂ, ಕಳ್ಳರು ಗಣಿಗೆ ನುಗ್ಗಿರುವುದು ಆಶ್ವರ್ಯ ತಂದಿದೆ. ಬಿಜಿಎಂಎಲ್ ಮುಖ್ಯ ಭದ್ರತಾ ಅಧಿಕಾರಿ ಪನ್ಸಂಬಾಲ್ ಊರಿಗಾಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.