‘ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಎಂಬ ಭೇದ ಭಾವವಿಲ್ಲದೆ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರಿಗೆ ಆರ್ಥಿಕ ನೆರವು ನೀಡುತ್ತಿದ್ದೇನೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾ ಪ್ರೋತ್ಸಾಹಧನ ನೀಡುತ್ತಿದ್ದು, ಜನಪರವಾಗಿ ಕೆಲಸ ಮಾಡುತ್ತಿದ್ದೇನೆ. ಜನಸೇವೆಗಾಗಿಯೇ ವರ್ಷಕ್ಕೆ ₹ 35 ಕೋಟಿ ಮೀಸಲಿಟ್ಟಿದ್ದೇನೆ. ಕ್ಷೇತ್ರದ 2.40 ಲಕ್ಷ ಜನರ ಮನೆ ಬಾಗಿಲಿಗೆ ಹಣಕಾಸು ನೆರವು ಕಲ್ಪಿಸುವ ಯೋಜನೆಯಿದೆ’ ಎಂದು ಬಾಬು ಅವರು ಸುರ್ಜೇವಾಲ ಅವರ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.