<p><strong>ಕೆಜಿಎಫ್</strong>: ಹಾಡುಹಗಲೇ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಅ.27 ರಂದು ಬೇತಮಂಗಲ-ಕ್ಯಾಸಂಬಳ್ಳಿ ರಸ್ತೆಯಲ್ಲಿರುವ ಶ್ರೀನಗರ ಬಡಾವಣೆಯಲ್ಲಿ ಕೃಷ್ಣಮೂರ್ತಿ ಎಂಬುವರಿಗೆ ಸೇರಿದ ಮನೆಯಲ್ಲಿ ಬಾಲಕಿಯೊಬ್ಬಳು ಕಳ್ಳತನಕ್ಕೆ ಯತ್ನಿಸಿದ್ದಳು. ಮನೆಯ ಮಾಲೀಕರು ಸ್ನಾನಕ್ಕೆ ಹೋಗಿದ್ದಾಗ, ಬಾಲಕಿ ಈ ಕೃತ್ಯಕ್ಕೆ ಯತ್ನಿಸಿದ್ದಳು. ಸಮಯಪ್ರಜ್ಞೆ ಮೆರೆದ ಕೃಷ್ಣಮೂರ್ತಿ ಅವರು ಬಾಲಕಿಯನ್ನು ಹಿಡಿದು ಪೊಲೀಸರಿಗೆ ಹಸ್ತಾಂತರಿದ್ದರು. ಈ ಸಂದರ್ಭದಲ್ಲಿ ಬಾಲಕಿಯ ಜೊತೆಗೆ ಬಂದಿದ್ದ ಉಳಿದವರು ಓಡಿ ಹೋದರು.</p>.<p>ಮನೆಗಳ್ಳತನದ ಪ್ರಕರಣದ ಬಗ್ಗೆ ಸಬ್ ಇನ್ಸ್ಪೆಕ್ಟರ್ ಗುರುರಾಜ ಚಿಂತಾಕಲ ಅವರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ಬಿಟ್ಟು ಕಳಿಸಿದ್ದರು. ಉಳಿದ ಆರೋಪಿಗಳನ್ನು ಸಬ್ ಇನ್ಸ್ಪೆಕ್ಟರ್ ಬಂಧಿಸಲಿಲ್ಲ ಎಂದು ಆರೋಪಿಸಿ ಕೃಷ್ಣಮೂರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು.</p>.<p>ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಅಪರಿಚಿತರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಸಬ್ ಇನ್ಸ್ಪೆಕ್ಟರ್ ಅವರ ನಿರ್ಲಕ್ಷ್ಯತೆ ಬಗ್ಗೆ ಕೂಡ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಹಾಡುಹಗಲೇ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಅ.27 ರಂದು ಬೇತಮಂಗಲ-ಕ್ಯಾಸಂಬಳ್ಳಿ ರಸ್ತೆಯಲ್ಲಿರುವ ಶ್ರೀನಗರ ಬಡಾವಣೆಯಲ್ಲಿ ಕೃಷ್ಣಮೂರ್ತಿ ಎಂಬುವರಿಗೆ ಸೇರಿದ ಮನೆಯಲ್ಲಿ ಬಾಲಕಿಯೊಬ್ಬಳು ಕಳ್ಳತನಕ್ಕೆ ಯತ್ನಿಸಿದ್ದಳು. ಮನೆಯ ಮಾಲೀಕರು ಸ್ನಾನಕ್ಕೆ ಹೋಗಿದ್ದಾಗ, ಬಾಲಕಿ ಈ ಕೃತ್ಯಕ್ಕೆ ಯತ್ನಿಸಿದ್ದಳು. ಸಮಯಪ್ರಜ್ಞೆ ಮೆರೆದ ಕೃಷ್ಣಮೂರ್ತಿ ಅವರು ಬಾಲಕಿಯನ್ನು ಹಿಡಿದು ಪೊಲೀಸರಿಗೆ ಹಸ್ತಾಂತರಿದ್ದರು. ಈ ಸಂದರ್ಭದಲ್ಲಿ ಬಾಲಕಿಯ ಜೊತೆಗೆ ಬಂದಿದ್ದ ಉಳಿದವರು ಓಡಿ ಹೋದರು.</p>.<p>ಮನೆಗಳ್ಳತನದ ಪ್ರಕರಣದ ಬಗ್ಗೆ ಸಬ್ ಇನ್ಸ್ಪೆಕ್ಟರ್ ಗುರುರಾಜ ಚಿಂತಾಕಲ ಅವರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ಬಿಟ್ಟು ಕಳಿಸಿದ್ದರು. ಉಳಿದ ಆರೋಪಿಗಳನ್ನು ಸಬ್ ಇನ್ಸ್ಪೆಕ್ಟರ್ ಬಂಧಿಸಲಿಲ್ಲ ಎಂದು ಆರೋಪಿಸಿ ಕೃಷ್ಣಮೂರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು.</p>.<p>ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಅಪರಿಚಿತರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಸಬ್ ಇನ್ಸ್ಪೆಕ್ಟರ್ ಅವರ ನಿರ್ಲಕ್ಷ್ಯತೆ ಬಗ್ಗೆ ಕೂಡ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>