<p>ಕೆಜಿಎಫ್: ಬಿಹಾರದಿಂದ ಅಕ್ರಮವಾಗಿ ಮಕ್ಕಳನ್ನು ಸಾಗಾಣಿಕೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಬಂಗಾರಪೇಟೆ ಪೊಲೀಸರು ಆರೋಪಿಗಳನ್ನು ಸುರಕ್ಷಿತವಾಗಿ ಬಿಹಾರಕ್ಕೆ ಕಳಿಸಿಕೊಟ್ಟಿದ್ದಾರೆಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರಿಗೆ ಶುಕ್ರವಾರ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಏ.29 ರಂದು 42 ಮಕ್ಕಳು ಪತ್ತೆಯಾಗಿದ್ದರು. ಅವರನ್ನು ಬಂಗಾರಪೇಟೆ ರೈಲ್ವೆ ಪೊಲೀಸರು ಕೆಜಿಎಫ್ ಬಾಲಮಂದಿರಕ್ಕೆ ಕಳಿಸಿದ್ದರು. ಈ ಬಗ್ಗೆ ಮೇ 5ರಂದು ಶ್ರೀರಾಮಸೇನೆಯಿಂದ ಜಿಲ್ಲಾಡಳಿತಕ್ಕೆ ಮನವಿ ನೀಡಿ, ಅಕ್ರಮವಾಗಿ ಮಕ್ಕಳನ್ನು ಕರೆತಂದವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ಮಕ್ಕಳನ್ನು ಅಕ್ರಮವಾಗಿ ರೈಲಿನಲ್ಲಿ ಕರೆದುಕೊಂಡು ಬಂದವರ ಮೇಲೆ ಅಪಹರಣದ ದೂರು ದಾಖಲಾಗಬೇಕೆಂದು ಮನವಿ ಸಲ್ಲಿಸಲಾಗಿತ್ತು.</p>.<p>ಆದರೆ, ನಮ್ಮ ಮನವಿಯನ್ನು ಪುರಸ್ಕರಿಸಿದ ಪೊಲೀಸರು, ರಾಜಕೀಯ ಒತ್ತಡದಿಂದ ಆರೋಪಿಗಳನ್ನು ಅದೇ ರಾತ್ರಿ ರೈಲಿನಲ್ಲಿ ಬಿಹಾರಕ್ಕೆ ವಾಪಸ್ ಕಳಿಸಿಕೊಟ್ಟು, ಆರೋಪಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿದರು.</p>.<p>ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ದೂರು ನೀಡಲಾಗಿದೆ. ಪೊಲೀಸರಿಗೆ ಒಂದು ವಾರದ ಸಮಯಾವಕಾಶ ನೀಡಲಾಗುವುದು. ಅಷ್ಟರೊಳಗೆ ಪೊಲೀಸರು ಕ್ರಮ ಕೈಗೊಳ್ಳದೆ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಶ್ರೀಧರರಾವ್ ಶಿಂಧೆ, ಉಮೇಶ್, ಡಾ.ಮಂಜುನಾಥ್, ರಾಜೇಶ್, ರಾಜಣ್ಣ, ಲೋಕೇಶ್, ಪಾಂಡವ ಮೂರ್ತಿ, ಜಯಪ್ರಕಾಶ್, ಸುಬ್ಬಣ್ಣ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-429169901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಬಿಹಾರದಿಂದ ಅಕ್ರಮವಾಗಿ ಮಕ್ಕಳನ್ನು ಸಾಗಾಣಿಕೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಬಂಗಾರಪೇಟೆ ಪೊಲೀಸರು ಆರೋಪಿಗಳನ್ನು ಸುರಕ್ಷಿತವಾಗಿ ಬಿಹಾರಕ್ಕೆ ಕಳಿಸಿಕೊಟ್ಟಿದ್ದಾರೆಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರಿಗೆ ಶುಕ್ರವಾರ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಏ.29 ರಂದು 42 ಮಕ್ಕಳು ಪತ್ತೆಯಾಗಿದ್ದರು. ಅವರನ್ನು ಬಂಗಾರಪೇಟೆ ರೈಲ್ವೆ ಪೊಲೀಸರು ಕೆಜಿಎಫ್ ಬಾಲಮಂದಿರಕ್ಕೆ ಕಳಿಸಿದ್ದರು. ಈ ಬಗ್ಗೆ ಮೇ 5ರಂದು ಶ್ರೀರಾಮಸೇನೆಯಿಂದ ಜಿಲ್ಲಾಡಳಿತಕ್ಕೆ ಮನವಿ ನೀಡಿ, ಅಕ್ರಮವಾಗಿ ಮಕ್ಕಳನ್ನು ಕರೆತಂದವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ಮಕ್ಕಳನ್ನು ಅಕ್ರಮವಾಗಿ ರೈಲಿನಲ್ಲಿ ಕರೆದುಕೊಂಡು ಬಂದವರ ಮೇಲೆ ಅಪಹರಣದ ದೂರು ದಾಖಲಾಗಬೇಕೆಂದು ಮನವಿ ಸಲ್ಲಿಸಲಾಗಿತ್ತು.</p>.<p>ಆದರೆ, ನಮ್ಮ ಮನವಿಯನ್ನು ಪುರಸ್ಕರಿಸಿದ ಪೊಲೀಸರು, ರಾಜಕೀಯ ಒತ್ತಡದಿಂದ ಆರೋಪಿಗಳನ್ನು ಅದೇ ರಾತ್ರಿ ರೈಲಿನಲ್ಲಿ ಬಿಹಾರಕ್ಕೆ ವಾಪಸ್ ಕಳಿಸಿಕೊಟ್ಟು, ಆರೋಪಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿದರು.</p>.<p>ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ದೂರು ನೀಡಲಾಗಿದೆ. ಪೊಲೀಸರಿಗೆ ಒಂದು ವಾರದ ಸಮಯಾವಕಾಶ ನೀಡಲಾಗುವುದು. ಅಷ್ಟರೊಳಗೆ ಪೊಲೀಸರು ಕ್ರಮ ಕೈಗೊಳ್ಳದೆ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಶ್ರೀಧರರಾವ್ ಶಿಂಧೆ, ಉಮೇಶ್, ಡಾ.ಮಂಜುನಾಥ್, ರಾಜೇಶ್, ರಾಜಣ್ಣ, ಲೋಕೇಶ್, ಪಾಂಡವ ಮೂರ್ತಿ, ಜಯಪ್ರಕಾಶ್, ಸುಬ್ಬಣ್ಣ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-429169901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>