ಮಕ್ಕಳು ಚಟುವಟಿಕೆಯಿಂದ ಇದ್ದಾರೆ. ಹೊರನೋಟಕ್ಕೆ ಯಾವುದೇ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಗ್ರಾಮವನ್ನು ಸಂಪೂರ್ಣವಾಗಿ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಸೋಂಕಿತರನ್ನು ಬಿಜಿಎಂಎಲ್ ಆಸ್ಪತ್ರೆ ಮತ್ತು ಸಂಭ್ರಂ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದೆ. ಪೆದ್ದಪಲ್ಲಿ ಗ್ರಾಮದಲ್ಲಿ ಶನಿವಾರ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರಮಣಪ್ಪ, ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಗ್ರಾಮಕ್ಕೆ ಭೇಟಿ ನೀಡಿದರು.