<p>ಕೆಜಿಎಫ್: ನೆರೆ ರಾಜ್ಯದಿಂದ ಗಾಂಜಾವನ್ನು ತಂದು ಗಡಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಮೂವರನ್ನು ರಾಬರ್ಟಸನ್ಪೇಟೆ ಪೊಲೀಸರು ಬಂಧಿಸಿ, ಅವರಿಂದ ಸುಮಾರು 5 ಲಕ್ಷ ಮೌಲ್ಯದ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕ್ಯಾಸಂಬಳ್ಳಿ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ರಾಬರ್ಟಸನ್ಪೇಟೆ ಪೊಲೀಸರು ದಾಳಿ ಮಾಡಿದ್ದರು.</p>.<p>ಆಂಧ್ರಪ್ರದೇಶದ ಕುಪ್ಪಂ ತಾಲ್ಲೂಕಿನ ಅನಿಗಾನೂರು ನಿವಾಸಿ ವೆಂಕಟಾಚಲಪತಿ, ವಿಜಿಲಾಪುರ ಗ್ರಾಮದ ಹಂಸಗಿರಿ ಮತ್ತು ಕೆಂಚನಬಲ್ಲ ಗ್ರಾಮದ ನಿಖಿಲ್ ಎಂಬುವರನ್ನು ಬಂಧಿಸಿದರು. ಆವರಿಂದ 6 ಕೆಜಿ 340 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡರು. ಕೃತ್ಯಕ್ಕೆ ಬಳಸಿದ್ದ ಬೈಕನ್ನು ಸಹ ವಶಪಡಿಸಿಕೊಳ್ಳಲಾಗಿದೆ.</p>.<p>ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ರಾಬರ್ಟಸನ್ಪೇಟೆ ಸಬ್ ಇನ್ಸ್ಪೆಕ್ಟರ್ ಯತೀಶ್, ಸಿಬ್ಬಂದಿಗಳಾದ ಗೋಪಿನಾಥ್, ಮಂಜುನಾಥ ರೆಡ್ಡಿ, ಬಸವರಾಜ ಕಾಂಬ್ಳೆ, ರಘು, ಮುರಳಿ ಮತ್ತು ಚಾಲಕ ಮನೋಹರ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ನೆರೆ ರಾಜ್ಯದಿಂದ ಗಾಂಜಾವನ್ನು ತಂದು ಗಡಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಮೂವರನ್ನು ರಾಬರ್ಟಸನ್ಪೇಟೆ ಪೊಲೀಸರು ಬಂಧಿಸಿ, ಅವರಿಂದ ಸುಮಾರು 5 ಲಕ್ಷ ಮೌಲ್ಯದ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕ್ಯಾಸಂಬಳ್ಳಿ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ರಾಬರ್ಟಸನ್ಪೇಟೆ ಪೊಲೀಸರು ದಾಳಿ ಮಾಡಿದ್ದರು.</p>.<p>ಆಂಧ್ರಪ್ರದೇಶದ ಕುಪ್ಪಂ ತಾಲ್ಲೂಕಿನ ಅನಿಗಾನೂರು ನಿವಾಸಿ ವೆಂಕಟಾಚಲಪತಿ, ವಿಜಿಲಾಪುರ ಗ್ರಾಮದ ಹಂಸಗಿರಿ ಮತ್ತು ಕೆಂಚನಬಲ್ಲ ಗ್ರಾಮದ ನಿಖಿಲ್ ಎಂಬುವರನ್ನು ಬಂಧಿಸಿದರು. ಆವರಿಂದ 6 ಕೆಜಿ 340 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡರು. ಕೃತ್ಯಕ್ಕೆ ಬಳಸಿದ್ದ ಬೈಕನ್ನು ಸಹ ವಶಪಡಿಸಿಕೊಳ್ಳಲಾಗಿದೆ.</p>.<p>ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ರಾಬರ್ಟಸನ್ಪೇಟೆ ಸಬ್ ಇನ್ಸ್ಪೆಕ್ಟರ್ ಯತೀಶ್, ಸಿಬ್ಬಂದಿಗಳಾದ ಗೋಪಿನಾಥ್, ಮಂಜುನಾಥ ರೆಡ್ಡಿ, ಬಸವರಾಜ ಕಾಂಬ್ಳೆ, ರಘು, ಮುರಳಿ ಮತ್ತು ಚಾಲಕ ಮನೋಹರ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>