<p>ಕೆಜಿಎಫ್: ತಾಲ್ಲೂಕಿನ ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಯ ಕೆಂಪಾಪುರ ಗ್ರಾಮದಿಂದ ಕೆ.ಗೊಲ್ಲಹಳ್ಳಿ (ಆಂಧ್ರದ ಗಡಿ) ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಎಂ.ರೂಪಕಲಾ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, 2023-24ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ ಈ ರಸ್ತೆ ಮಂಜೂರಿಯಾಗಿದೆ. ಆದರೆ, ಹಲವು ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ಪ್ರಾರಂಭ ವಿಳಂಬವಾಗಿದೆ. ರಸ್ತೆಯನ್ನು ₹ 60 ಲಕ್ಷ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.</p>.<p>ಗಡಿ ಭಾಗದಲ್ಲಿರುವ ಈ ರಸ್ತೆಯು ಆಂಧ್ರಪ್ರದೇಶದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಈ ರಸ್ತೆಯು ತೀರಾ ಹಾಳಾಗಿದ್ದು, ಅಭಿವೃದ್ಧಿ ಪಡಿಸಲು ಸಾರ್ವಜನಿಕರು ಒತ್ತಾಯಿಸಿದ್ದರು. ಅವರ ಕೋರಿಕೆಯ ಆದ್ಯತೆ ಮೇರೆಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-1329495912</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ತಾಲ್ಲೂಕಿನ ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಯ ಕೆಂಪಾಪುರ ಗ್ರಾಮದಿಂದ ಕೆ.ಗೊಲ್ಲಹಳ್ಳಿ (ಆಂಧ್ರದ ಗಡಿ) ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಎಂ.ರೂಪಕಲಾ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, 2023-24ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ ಈ ರಸ್ತೆ ಮಂಜೂರಿಯಾಗಿದೆ. ಆದರೆ, ಹಲವು ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ಪ್ರಾರಂಭ ವಿಳಂಬವಾಗಿದೆ. ರಸ್ತೆಯನ್ನು ₹ 60 ಲಕ್ಷ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.</p>.<p>ಗಡಿ ಭಾಗದಲ್ಲಿರುವ ಈ ರಸ್ತೆಯು ಆಂಧ್ರಪ್ರದೇಶದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಈ ರಸ್ತೆಯು ತೀರಾ ಹಾಳಾಗಿದ್ದು, ಅಭಿವೃದ್ಧಿ ಪಡಿಸಲು ಸಾರ್ವಜನಿಕರು ಒತ್ತಾಯಿಸಿದ್ದರು. ಅವರ ಕೋರಿಕೆಯ ಆದ್ಯತೆ ಮೇರೆಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-1329495912</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>