<p><strong>ಕೆಜಿಎಫ್:</strong> ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸಮತಾದಳದ ಕಾರ್ಯಕರ್ತರು ಬುಧವಾರ ತಾಲ್ಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಬೇತಮಂಗಲದ ಸಾರ್ವಜನಿಕ ಶೌಚಾಲಯ ಸ್ಥಳದಲ್ಲಿ ಕೆಲವರು ಅಕ್ರಮವಾಗಿ ಕೊಠಡಿ ನಿರ್ಮಿಸಿ ಬಾಡಿಗೆ ನೀಡಿದ್ದಾರೆ. ಸರ್ಕಾರಿ ಜಾಗವನ್ನು ಉಳಿಸಬೇಕಾದ ಅಧಿಕಾರಿಗಳೇ ಶಾಮೀಲಾಗಿದ್ದಾರೆ. ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿಯಲ್ಲಿ ಸರ್ಕಾರಿ ಗೋಮಾಳ ಜಮೀನು 15 ಎಕರೆಯಲ್ಲಿ ಅಕ್ರಮವಾಗಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ದಾಖಲೆ ಸಮೇತ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಸರ್ಕಾರಿ ಜಾಗವನ್ನು ಕಾಪಾಡುವ ಜವಾಬ್ದಾರಿ ಮತ್ತು ಪ್ರಾಮಾಣಿಕತೆ ಅಧಿಕಾರಿಗಳಲ್ಲಿ ಇಲ್ಲ ಎಂದು ಸಂದಾ ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನಲ್ಲಿ ಬಡವರಿಗೆ ಜಮೀನು ಹಂಚಿಕೆಗೆ ಜಮೀನು ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ, ಬಲಾಢ್ಯರು ಸರ್ಕಾರಿ ಜಮೀನನ್ನು ಗುರುತಿಸಿ ಒತ್ತುವರಿ ಮಾಡಿಕೊಳ್ಳುತ್ತಾರೆ. ಅವರಿಗೆ ಅಧಿಕಾರಿಗಳು ಸಹಕಾರ ನೀಡುತ್ತಾರೆ ಎಂದು ದೂರಿದರು.</p>.<p>ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ತಹಶೀಲ್ದಾರ್ ಭರತ್, ಸಮೀಕ್ಷೆ ಕಾರಣದಿಂದಾಗಿ ಅಧಿಕಾರಿಗಳು ಕಾರ್ಯನಿಮಿತ್ತರಾಗಿದ್ದಾರೆ. ಸಮೀಕ್ಷೆ ಕಾರ್ಯ ಮುಗಿದ ನಂತರ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.</p>.<p>ಮುಖಂಡರಾದ ಭಾರತಮ್ಮ, ಬಾರ್ಲಿ ಮುನಿ ವೆಂಕಟಸ್ವಾಮಿ, ಬಾಲಸುಬ್ರಮಣಿ, ಆನಂದಪ್ಪ, ಅರುಣ್ ಕುಮಾರ್, ವೆಂಕಟಮನಿ, ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸಮತಾದಳದ ಕಾರ್ಯಕರ್ತರು ಬುಧವಾರ ತಾಲ್ಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಬೇತಮಂಗಲದ ಸಾರ್ವಜನಿಕ ಶೌಚಾಲಯ ಸ್ಥಳದಲ್ಲಿ ಕೆಲವರು ಅಕ್ರಮವಾಗಿ ಕೊಠಡಿ ನಿರ್ಮಿಸಿ ಬಾಡಿಗೆ ನೀಡಿದ್ದಾರೆ. ಸರ್ಕಾರಿ ಜಾಗವನ್ನು ಉಳಿಸಬೇಕಾದ ಅಧಿಕಾರಿಗಳೇ ಶಾಮೀಲಾಗಿದ್ದಾರೆ. ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿಯಲ್ಲಿ ಸರ್ಕಾರಿ ಗೋಮಾಳ ಜಮೀನು 15 ಎಕರೆಯಲ್ಲಿ ಅಕ್ರಮವಾಗಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ದಾಖಲೆ ಸಮೇತ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಸರ್ಕಾರಿ ಜಾಗವನ್ನು ಕಾಪಾಡುವ ಜವಾಬ್ದಾರಿ ಮತ್ತು ಪ್ರಾಮಾಣಿಕತೆ ಅಧಿಕಾರಿಗಳಲ್ಲಿ ಇಲ್ಲ ಎಂದು ಸಂದಾ ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನಲ್ಲಿ ಬಡವರಿಗೆ ಜಮೀನು ಹಂಚಿಕೆಗೆ ಜಮೀನು ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ, ಬಲಾಢ್ಯರು ಸರ್ಕಾರಿ ಜಮೀನನ್ನು ಗುರುತಿಸಿ ಒತ್ತುವರಿ ಮಾಡಿಕೊಳ್ಳುತ್ತಾರೆ. ಅವರಿಗೆ ಅಧಿಕಾರಿಗಳು ಸಹಕಾರ ನೀಡುತ್ತಾರೆ ಎಂದು ದೂರಿದರು.</p>.<p>ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ತಹಶೀಲ್ದಾರ್ ಭರತ್, ಸಮೀಕ್ಷೆ ಕಾರಣದಿಂದಾಗಿ ಅಧಿಕಾರಿಗಳು ಕಾರ್ಯನಿಮಿತ್ತರಾಗಿದ್ದಾರೆ. ಸಮೀಕ್ಷೆ ಕಾರ್ಯ ಮುಗಿದ ನಂತರ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.</p>.<p>ಮುಖಂಡರಾದ ಭಾರತಮ್ಮ, ಬಾರ್ಲಿ ಮುನಿ ವೆಂಕಟಸ್ವಾಮಿ, ಬಾಲಸುಬ್ರಮಣಿ, ಆನಂದಪ್ಪ, ಅರುಣ್ ಕುಮಾರ್, ವೆಂಕಟಮನಿ, ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>