<p><strong>ಕೆಜಿಎಫ್:</strong> ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸದಿದ್ದಲ್ಲಿ ಶಾಸಕಿ ರೂಪಕಲಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿದೆ.</p>.<p>ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಸದಸ್ಯರು, ಹಳ್ಳಿಗಳ ಅಂಗಡಿಗಳಲ್ಲಿ, ರಸ್ತೆ ಬದಿಯ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಮದ್ಯದ ಅಂಗಡಿಗಳು ಬಾಗಿಲು ತೆಗೆಯುತ್ತಿವೆ. ಇದರಿಂದಾಗಿ ದುಡಿಯುವ ಗಂಡಸರು ಮದ್ಯಕ್ಕೆ ದಾಸರಾಗುವ ಪರಿಸ್ಥಿತಿ ಉದ್ಘವಿಸಿದೆ. ಗಂಡಸರ ಸಂಪಾದನೆಯಲ್ಲವೂ ಮದ್ಯದ ಖರೀದಿಗೆ ಹೋಗುತ್ತಿದೆ. ಈ ಸಂಬಂಧ ಅಬಕಾರಿ ಇಲಾಖೆಗೆ ಹಲವು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಈಗಲಾದರೂ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.</p>.<p>ವೇಣು, ಶೈಲಜ, ಕೆ.ನಾರಾಯಣಗೌಡ, ಈಕಂಬಳ್ಳಿ ಮಂಜುನಾಥ್, ಸುರೇಶ್ ಬಾಬು, ಪುತ್ತೇರಿ ರಾಜು, ಗಿರೀಶ, ರತ್ನಮ್ಮ, ಗೌರಮ್ಮ, ಚೌಡಮ್ಮ, ಸುಶೀಲಮ್ಮ, ಪವಿತ್ರ, ವೆಂಕಟಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-1403409747</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸದಿದ್ದಲ್ಲಿ ಶಾಸಕಿ ರೂಪಕಲಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿದೆ.</p>.<p>ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಸದಸ್ಯರು, ಹಳ್ಳಿಗಳ ಅಂಗಡಿಗಳಲ್ಲಿ, ರಸ್ತೆ ಬದಿಯ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಮದ್ಯದ ಅಂಗಡಿಗಳು ಬಾಗಿಲು ತೆಗೆಯುತ್ತಿವೆ. ಇದರಿಂದಾಗಿ ದುಡಿಯುವ ಗಂಡಸರು ಮದ್ಯಕ್ಕೆ ದಾಸರಾಗುವ ಪರಿಸ್ಥಿತಿ ಉದ್ಘವಿಸಿದೆ. ಗಂಡಸರ ಸಂಪಾದನೆಯಲ್ಲವೂ ಮದ್ಯದ ಖರೀದಿಗೆ ಹೋಗುತ್ತಿದೆ. ಈ ಸಂಬಂಧ ಅಬಕಾರಿ ಇಲಾಖೆಗೆ ಹಲವು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಈಗಲಾದರೂ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.</p>.<p>ವೇಣು, ಶೈಲಜ, ಕೆ.ನಾರಾಯಣಗೌಡ, ಈಕಂಬಳ್ಳಿ ಮಂಜುನಾಥ್, ಸುರೇಶ್ ಬಾಬು, ಪುತ್ತೇರಿ ರಾಜು, ಗಿರೀಶ, ರತ್ನಮ್ಮ, ಗೌರಮ್ಮ, ಚೌಡಮ್ಮ, ಸುಶೀಲಮ್ಮ, ಪವಿತ್ರ, ವೆಂಕಟಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-1403409747</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>