<p><strong>ಕೆಜಿಎಫ್:</strong> ಮಾರಿಕುಪ್ಪಂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಅವರ ಜಾತಿ ಪ್ರಮಾಣಪತ್ರವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ರದ್ದುಗೊಳಿಸಿ, ಆದೇಶ ಹೊರಡಿಸಲಾಗಿದೆ. </p>.<p>ಕೃಷ್ಣಪ್ಪ ಅವರು ನಾಯ್ಡು ಜನಾಂಗಕ್ಕೆ ಸೇರಿದ್ದು, ‘ನಾಯಕ’ ಎಂಬ ಜಾತಿ ಪ್ರಮಾಣ ಪತ್ರ ಪಡೆದಿದ್ದರು ಎಂಬ ಆರೋಪವಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸಮಿತಿಯು, ಅವರು ಪಡೆದಿದ್ದ ‘ನಾಯಕ’ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿದೆ. </p>.<p>ಹೂಹಳ್ಳಿ ಪ್ರಕಾಶ್ ಮತ್ತು ಗೊಲ್ಲಹಳ್ಳಿ ವೆಂಕಟೇಶಗೌಡ ಎಂಬುವರು ಈ ಕುರಿತು ಸಮಿತಿಗೆ ದೂರು ಸಲ್ಲಿಸಿದ್ದರು. ಕೃಷ್ಣಪ್ಪ ಅವರು ಮೂಲತಃ ನಾಯ್ಡು ಸಮುದಾಯಕ್ಕೆ ಸೇರಿದ್ದು, ಸರ್ಕಾರದ ಸೌಲಭ್ಯ ಪಡೆಯಲು ಎಸ್ಟಿ ಪ್ರಮಾಣ ಪತ್ರ ಪಡೆದಿದ್ದಾರೆ. ಎಸ್ಟಿ ಕೋಟಾದ ಅಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೂಡ ಆಗಿ ಆಯ್ಕೆಯಾಗಿದ್ದರು. ಈ ಪ್ರಕಾರ ಕೃಷ್ಣಪ್ಪ ಅವರು ಓದಿದ ಗೋಣಮಾಕನಹಳ್ಳಿ ಶಾಲೆ ದಾಖಲೆ ಮತ್ತು ಸರ್ಕಾರಿ ಪಿಯು ಕಾಲೇಜಿನ ದಾಖಲೆ ಪರಿಶೀಲಿಸಲಾಗಿದ್ದು, ಈ ಪ್ರಕಾರ ಅವರ ಜಾತಿ ಕಲಾಂನಲ್ಲಿ ನಾಯ್ಡು ಎಂದು ನಮೂದಾಗಿರುವುದು ಸಮಿತಿಯ ತನಿಖೆಯಲ್ಲಿ ದೃಢಪಟ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಮಾರಿಕುಪ್ಪಂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಅವರ ಜಾತಿ ಪ್ರಮಾಣಪತ್ರವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ರದ್ದುಗೊಳಿಸಿ, ಆದೇಶ ಹೊರಡಿಸಲಾಗಿದೆ. </p>.<p>ಕೃಷ್ಣಪ್ಪ ಅವರು ನಾಯ್ಡು ಜನಾಂಗಕ್ಕೆ ಸೇರಿದ್ದು, ‘ನಾಯಕ’ ಎಂಬ ಜಾತಿ ಪ್ರಮಾಣ ಪತ್ರ ಪಡೆದಿದ್ದರು ಎಂಬ ಆರೋಪವಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸಮಿತಿಯು, ಅವರು ಪಡೆದಿದ್ದ ‘ನಾಯಕ’ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿದೆ. </p>.<p>ಹೂಹಳ್ಳಿ ಪ್ರಕಾಶ್ ಮತ್ತು ಗೊಲ್ಲಹಳ್ಳಿ ವೆಂಕಟೇಶಗೌಡ ಎಂಬುವರು ಈ ಕುರಿತು ಸಮಿತಿಗೆ ದೂರು ಸಲ್ಲಿಸಿದ್ದರು. ಕೃಷ್ಣಪ್ಪ ಅವರು ಮೂಲತಃ ನಾಯ್ಡು ಸಮುದಾಯಕ್ಕೆ ಸೇರಿದ್ದು, ಸರ್ಕಾರದ ಸೌಲಭ್ಯ ಪಡೆಯಲು ಎಸ್ಟಿ ಪ್ರಮಾಣ ಪತ್ರ ಪಡೆದಿದ್ದಾರೆ. ಎಸ್ಟಿ ಕೋಟಾದ ಅಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೂಡ ಆಗಿ ಆಯ್ಕೆಯಾಗಿದ್ದರು. ಈ ಪ್ರಕಾರ ಕೃಷ್ಣಪ್ಪ ಅವರು ಓದಿದ ಗೋಣಮಾಕನಹಳ್ಳಿ ಶಾಲೆ ದಾಖಲೆ ಮತ್ತು ಸರ್ಕಾರಿ ಪಿಯು ಕಾಲೇಜಿನ ದಾಖಲೆ ಪರಿಶೀಲಿಸಲಾಗಿದ್ದು, ಈ ಪ್ರಕಾರ ಅವರ ಜಾತಿ ಕಲಾಂನಲ್ಲಿ ನಾಯ್ಡು ಎಂದು ನಮೂದಾಗಿರುವುದು ಸಮಿತಿಯ ತನಿಖೆಯಲ್ಲಿ ದೃಢಪಟ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>