<p><strong>ಕೆಜಿಎಫ್</strong>: ಕೆಲ ಖಾಸಗಿ ವ್ಯಕ್ತಿಗಳು ಬಂಗಾರದ ಗಣಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರೆಂಬ ಸಾರ್ವಜನಿಕರ ದೂರಿನ ಹಿನ್ನೆಲೆ ತಹಶೀಲ್ದಾರ್ ಎಚ್.ಜೆ.ಭರತ್ ಶನಿವಾರ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಮಲ್ ನಗರದ ಬೆಮಲ್ ಕಾರ್ಖಾನೆಯ ಎಚ್ ಅಂಡ್ ಪಿ ವಿಭಾಗದ ಹಿಂಭಾಗದ ಪ್ರದೇಶವನ್ನು ಅಕ್ರಮವಾಗಿ ಯಂತ್ರಗಳ ಮೂಲಕ ಸಮತಟ್ಟು ಮಾಡಲಾಗುತ್ತಿತ್ತು. ಅಲ್ಲಿದ್ದ ಮರಗಳನ್ನು ಕಟಾವು ಮಾಡುವ ಕಾರ್ಯ ನಡೆದಿತ್ತು.</p>.<p>ಈ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಭರತ್, ಕಂದಾಯ ಇನ್ಸ್ಪೆಕ್ಟರ್ ಚಂದ್ರಮೋಹನ್ ಮತ್ತು ಗ್ರಾಮ ಆಡಳಿತಾಧಿಕಾರಿ ವಿನೀತ್ ದಾಖಲೆಗಳ ಪರಿಶೀಲನೆ ನಡೆಸಿದರು.</p>.<p>ಬಿಜಿಎಂಎಲ್ ಮತ್ತು ಕಂದಾಯ ಇಲಾಖೆಗಳ ಜಮೀನುಗಳ ನಡುವೆ ಕೊಂಚ ಗೊಂದಲಗಳಿವೆ. ಈನಿಟ್ಟಿನಲ್ಲಿ ಸರ್ವೆ ಕಾರ್ಯ ಒಂದು ವಾರದಿಂದ ನಡೆಯುತ್ತಿದೆ. ಹೈಕೋರ್ಟ್ ಕೂಡ ಈ ಸಂಬಂಧ ಸೂಚನೆ ನೀಡಿದೆ. ಸರ್ಕಾರಿ ಜಮೀನನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಭರತ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-146062437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಕೆಲ ಖಾಸಗಿ ವ್ಯಕ್ತಿಗಳು ಬಂಗಾರದ ಗಣಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರೆಂಬ ಸಾರ್ವಜನಿಕರ ದೂರಿನ ಹಿನ್ನೆಲೆ ತಹಶೀಲ್ದಾರ್ ಎಚ್.ಜೆ.ಭರತ್ ಶನಿವಾರ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಮಲ್ ನಗರದ ಬೆಮಲ್ ಕಾರ್ಖಾನೆಯ ಎಚ್ ಅಂಡ್ ಪಿ ವಿಭಾಗದ ಹಿಂಭಾಗದ ಪ್ರದೇಶವನ್ನು ಅಕ್ರಮವಾಗಿ ಯಂತ್ರಗಳ ಮೂಲಕ ಸಮತಟ್ಟು ಮಾಡಲಾಗುತ್ತಿತ್ತು. ಅಲ್ಲಿದ್ದ ಮರಗಳನ್ನು ಕಟಾವು ಮಾಡುವ ಕಾರ್ಯ ನಡೆದಿತ್ತು.</p>.<p>ಈ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಭರತ್, ಕಂದಾಯ ಇನ್ಸ್ಪೆಕ್ಟರ್ ಚಂದ್ರಮೋಹನ್ ಮತ್ತು ಗ್ರಾಮ ಆಡಳಿತಾಧಿಕಾರಿ ವಿನೀತ್ ದಾಖಲೆಗಳ ಪರಿಶೀಲನೆ ನಡೆಸಿದರು.</p>.<p>ಬಿಜಿಎಂಎಲ್ ಮತ್ತು ಕಂದಾಯ ಇಲಾಖೆಗಳ ಜಮೀನುಗಳ ನಡುವೆ ಕೊಂಚ ಗೊಂದಲಗಳಿವೆ. ಈನಿಟ್ಟಿನಲ್ಲಿ ಸರ್ವೆ ಕಾರ್ಯ ಒಂದು ವಾರದಿಂದ ನಡೆಯುತ್ತಿದೆ. ಹೈಕೋರ್ಟ್ ಕೂಡ ಈ ಸಂಬಂಧ ಸೂಚನೆ ನೀಡಿದೆ. ಸರ್ಕಾರಿ ಜಮೀನನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಭರತ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-146062437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>