<p><strong>ಕೆಜಿಎಫ್:</strong> ರಾಬರ್ಟ್ಸನ್ಪೇಟೆಯ ಹುಲ್ಲು ಮಾರುಕಟ್ಟೆಯಲ್ಲಿರುವ ನಗರಸಭೆಗೆ ಸೇರಿದ ಅಂಗಡಿಗಳನ್ನು ಮುಂಜಾನೆ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.</p>.<p>ಹುಲ್ಲಿನ ಮಾರುಕಟ್ಟೆ ಜಾಗದಲ್ಲಿ ಕಾರು ಮತ್ತು ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಅಭಿವೃದ್ಧಿಪಡಿಸಲು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯಾವುದೇ ಮುನ್ಸೂಚನೆ ನೀಡದೆ ಅಥವಾ ವಸ್ತುಗಳನ್ನು ತೆಗೆದುಕೊಳ್ಳಲು ವರ್ತಕರಿಗೆ ಅವಕಾಶ ನೀಡದೆ ಅಂಗಡಿಗಳ ಶೆಟ್ಟರ್ಗಳನ್ನು ಒಡೆದು ಹಾಕಿರುವುದಕ್ಕೆ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಮಾರುಕಟ್ಟೆಯಲ್ಲಿರುವ ಸುಮಾರು ಹತ್ತಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ನಗರಸಭೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತಿದ್ದೇವೆ. ಈ ಜಾಗ ನಗರಸಭೆಗೆ ಬೇಕಿದ್ದರೆ, ನಮಗೆ ಬೇರೆ ಸ್ಥಳಾವಕಾಶ ಮಾಡಿಕೊಟ್ಟು ಖಾಲಿ ಮಾಡಿಸಬಹುದಿತ್ತು. ತಿನ್ನುವ ಅನ್ನಕ್ಕೆ ಕಲ್ಲು ಹಾಕಲಾಗಿದೆ. ಇದರ ಬದಲು ವಿಷ ಕೊಡಿ’ ಎಂದು ವರ್ತಕರು ಗೋಗೆರೆದಿದ್ದಾರೆ.</p>.<p>ತೆರವು ಕಾರ್ಯಾಚರಣೆಯಲ್ಲಿ ಮುಂದಾಳತ್ವ ವಹಿಸಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ವರ್ತಕರಿಗೆ ಅವಾಚ್ಯ ಭಾಷೆ ಬಳಸಿದ್ದಾರೆ. ಅಂಗಡಿ ತೆರವಿನಿಂದ ಜೀವನವೇ ಹೋಗಿದೆ. ನಮಗೆ ಹೆಚ್ಚು ಕಡಿಮೆಯಾದರೆ ಶಾಸಕಿ, ನಗರಸಭೆ ಅಧ್ಯಕ್ಷರೇ ಕಾರಣ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ರಾಬರ್ಟ್ಸನ್ಪೇಟೆಯ ಹುಲ್ಲು ಮಾರುಕಟ್ಟೆಯಲ್ಲಿರುವ ನಗರಸಭೆಗೆ ಸೇರಿದ ಅಂಗಡಿಗಳನ್ನು ಮುಂಜಾನೆ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.</p>.<p>ಹುಲ್ಲಿನ ಮಾರುಕಟ್ಟೆ ಜಾಗದಲ್ಲಿ ಕಾರು ಮತ್ತು ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಅಭಿವೃದ್ಧಿಪಡಿಸಲು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯಾವುದೇ ಮುನ್ಸೂಚನೆ ನೀಡದೆ ಅಥವಾ ವಸ್ತುಗಳನ್ನು ತೆಗೆದುಕೊಳ್ಳಲು ವರ್ತಕರಿಗೆ ಅವಕಾಶ ನೀಡದೆ ಅಂಗಡಿಗಳ ಶೆಟ್ಟರ್ಗಳನ್ನು ಒಡೆದು ಹಾಕಿರುವುದಕ್ಕೆ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಮಾರುಕಟ್ಟೆಯಲ್ಲಿರುವ ಸುಮಾರು ಹತ್ತಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ನಗರಸಭೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತಿದ್ದೇವೆ. ಈ ಜಾಗ ನಗರಸಭೆಗೆ ಬೇಕಿದ್ದರೆ, ನಮಗೆ ಬೇರೆ ಸ್ಥಳಾವಕಾಶ ಮಾಡಿಕೊಟ್ಟು ಖಾಲಿ ಮಾಡಿಸಬಹುದಿತ್ತು. ತಿನ್ನುವ ಅನ್ನಕ್ಕೆ ಕಲ್ಲು ಹಾಕಲಾಗಿದೆ. ಇದರ ಬದಲು ವಿಷ ಕೊಡಿ’ ಎಂದು ವರ್ತಕರು ಗೋಗೆರೆದಿದ್ದಾರೆ.</p>.<p>ತೆರವು ಕಾರ್ಯಾಚರಣೆಯಲ್ಲಿ ಮುಂದಾಳತ್ವ ವಹಿಸಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ವರ್ತಕರಿಗೆ ಅವಾಚ್ಯ ಭಾಷೆ ಬಳಸಿದ್ದಾರೆ. ಅಂಗಡಿ ತೆರವಿನಿಂದ ಜೀವನವೇ ಹೋಗಿದೆ. ನಮಗೆ ಹೆಚ್ಚು ಕಡಿಮೆಯಾದರೆ ಶಾಸಕಿ, ನಗರಸಭೆ ಅಧ್ಯಕ್ಷರೇ ಕಾರಣ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>