<p><strong>ಕೆಜಿಎಫ್</strong>: ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ಎರಡು ಜೋಡಿಗಳು ಒಂದಾದವು.</p>.<p>ನ್ಯಾಯಾಧೀಶ ವಿನೋದ್ ಕುಮಾರ್ ಅವರ ಕಚೇರಿಯಲ್ಲಿ ಎರಡು ಜೋಡಿಗಳು ವಿಚ್ಛೇದನ ವಾಪಸ್ ಪಡೆದು ಪುನಃ ಒಂದಾದರು. ನ್ಯಾಯಾಧೀಶರ ಮುಂದೆ ಎರಡೂ ಜೋಡಿಗಳು ಪರಸ್ಪರ ಹೂಮಾಲೆ ಬದಲಾಯಿಸಿಕೊಂಡು ಇನ್ನು ಮುಂದೆ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸುತ್ತೇವೆ ಎಂದು ವಾಗ್ದಾನ ಮಾಡಿದರು.</p>.<p>ನ್ಯಾಯಾಲಯದಲ್ಲಿ ಒಟ್ಟು 7,176 ಪ್ರಕರಣಗಳು ಬಾಕಿ ಇದ್ದು, ಅವುಗಳ ಪೈಕಿ 3,518 ಪ್ರಕರಣಗಳ ವಿಚಾರಣೆ ನಡೆಸಲಾಯಿತು. ಅವುಗಳ ಪೈಕಿ 34,44 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ಒಟ್ಟು ₹2,95,24,728 ರಾಜಿ ಸಂಧಾನದ ಮೂಲಕ ಇತ್ಯರ್ಥವಾಯಿತು.</p>.<p>ಜೋಡಿ ಒಂದುಗೂಡಿಸಿದ ಬಳಿಕ ಮಾತನಾಡಿದ, ನ್ಯಾಯಾಧೀಶ ಆರ್. ಎಂ. ನದಾಫ್, ಜೀವನದಲ್ಲಿ ಕೆಲವೊಂದು ಕಹಿ ಘಟನೆಗಳು ನಡೆಯುತ್ತದೆ. ಅವುಗಳನ್ನು ಸೂಕ್ತವಾಗಿ ನಿಭಾಯಿಸಿಕೊಂಡು ಉತ್ತಮ ಸಂಸಾರ ನಡೆಸಬೇಕು ಎಂದರು.</p>.<p>ಮದುವೆಯಾದ ಮೇಲೆ ಹೆಂಡತಿ ಮತ್ತು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಅವರ ಮನಸ್ಸಿಗೆ ನೋವನ್ನು ಉಂಟು ಮಾಡಬಾರದು. ಸಂಸಾರದಲ್ಲಿ ಹೊಂದಾಣಿಕೆಯನ್ನು ಇಟ್ಟುಕೊಂಡು ಜೀವನ ಮಾಡಬೇಕು. ಮುಂದೆ ಯಾವುದೇ ಕಾರಣಕ್ಕೂ ನ್ಯಾಯಾಲಯದ ಮೆಟ್ಟಿಲು ಹತ್ತಬಾರದು. ಒಳ್ಳೆಯ ದಂಪತಿಗಳಾಗಿ ಜೀವನ ನಡೆಸಿ ಎಂದು ಬುದ್ಧಿವಾದ ಹೇಳಿದರು</p>.<p>ಲೋಕ ಅದಾಲತ್ನಲ್ಲಿ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿ, ಮುಜಾಫರ್ ಎ.ಮಾಂಜರಿ, ಎಂ.ಮಂಜು ಮತ್ತು ಶಮೀದಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ಎರಡು ಜೋಡಿಗಳು ಒಂದಾದವು.</p>.<p>ನ್ಯಾಯಾಧೀಶ ವಿನೋದ್ ಕುಮಾರ್ ಅವರ ಕಚೇರಿಯಲ್ಲಿ ಎರಡು ಜೋಡಿಗಳು ವಿಚ್ಛೇದನ ವಾಪಸ್ ಪಡೆದು ಪುನಃ ಒಂದಾದರು. ನ್ಯಾಯಾಧೀಶರ ಮುಂದೆ ಎರಡೂ ಜೋಡಿಗಳು ಪರಸ್ಪರ ಹೂಮಾಲೆ ಬದಲಾಯಿಸಿಕೊಂಡು ಇನ್ನು ಮುಂದೆ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸುತ್ತೇವೆ ಎಂದು ವಾಗ್ದಾನ ಮಾಡಿದರು.</p>.<p>ನ್ಯಾಯಾಲಯದಲ್ಲಿ ಒಟ್ಟು 7,176 ಪ್ರಕರಣಗಳು ಬಾಕಿ ಇದ್ದು, ಅವುಗಳ ಪೈಕಿ 3,518 ಪ್ರಕರಣಗಳ ವಿಚಾರಣೆ ನಡೆಸಲಾಯಿತು. ಅವುಗಳ ಪೈಕಿ 34,44 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ಒಟ್ಟು ₹2,95,24,728 ರಾಜಿ ಸಂಧಾನದ ಮೂಲಕ ಇತ್ಯರ್ಥವಾಯಿತು.</p>.<p>ಜೋಡಿ ಒಂದುಗೂಡಿಸಿದ ಬಳಿಕ ಮಾತನಾಡಿದ, ನ್ಯಾಯಾಧೀಶ ಆರ್. ಎಂ. ನದಾಫ್, ಜೀವನದಲ್ಲಿ ಕೆಲವೊಂದು ಕಹಿ ಘಟನೆಗಳು ನಡೆಯುತ್ತದೆ. ಅವುಗಳನ್ನು ಸೂಕ್ತವಾಗಿ ನಿಭಾಯಿಸಿಕೊಂಡು ಉತ್ತಮ ಸಂಸಾರ ನಡೆಸಬೇಕು ಎಂದರು.</p>.<p>ಮದುವೆಯಾದ ಮೇಲೆ ಹೆಂಡತಿ ಮತ್ತು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಅವರ ಮನಸ್ಸಿಗೆ ನೋವನ್ನು ಉಂಟು ಮಾಡಬಾರದು. ಸಂಸಾರದಲ್ಲಿ ಹೊಂದಾಣಿಕೆಯನ್ನು ಇಟ್ಟುಕೊಂಡು ಜೀವನ ಮಾಡಬೇಕು. ಮುಂದೆ ಯಾವುದೇ ಕಾರಣಕ್ಕೂ ನ್ಯಾಯಾಲಯದ ಮೆಟ್ಟಿಲು ಹತ್ತಬಾರದು. ಒಳ್ಳೆಯ ದಂಪತಿಗಳಾಗಿ ಜೀವನ ನಡೆಸಿ ಎಂದು ಬುದ್ಧಿವಾದ ಹೇಳಿದರು</p>.<p>ಲೋಕ ಅದಾಲತ್ನಲ್ಲಿ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿ, ಮುಜಾಫರ್ ಎ.ಮಾಂಜರಿ, ಎಂ.ಮಂಜು ಮತ್ತು ಶಮೀದಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>