<p><strong>ಕೆಜಿಎಫ್:</strong> ತಾಲ್ಲೂಕಿನ ಪ್ರತ್ಯೇಕ ಮೂರು ಕಳ್ಳತನ ಪ್ರಕರಣಗಳಲ್ಲಿ ಆಂಡರಸನ್ಪೇಟೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ₹1.66 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಘಟ್ಟಮಾದಮಂಗಲ ಗ್ರಾಮದ ಹೊರವಲಯದಲ್ಲಿರುವ ಉದ್ದಂಡಮ್ಮ ದೇವಾಲಯ ಮತ್ತು ಬಾಣಗಿರಿಯ ಗುರುಮೂರ್ತಿ ಯಲ್ಲಮ್ಮ ದೇವಾಲಯಗಳಲ್ಲಿ ಈಚೆಗೆ ಕಳ್ಳತನ ನಡೆದಿತ್ತು. ಈ ಸಂಬಂಧ ಪ್ರಭಾಕರ್ ಮತ್ತು ಶಿವರಾಮರೆಡ್ಡಿ ಎಂಬುವರು ದೂರು ನೀಡಿದ್ದರು. ದೂರಿನ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರು ಆಂಧ್ರಪ್ರದೇಶದ ಮುರುಗೇಶ್, ರಾಜುವೇಲು ಮತ್ತು ಸುರೇಶ್ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹85 ಸಾವಿರ ಮೌಲ್ಯದ ಆಭರಣ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಆಂಡರಸನ್ಪೇಟೆಯ ಸೈಯದ್ ಸದಾಕತ್ ಎಂಬುವರ ಮನೆಯಲ್ಲಿ ಈಚೆಗೆ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೂರ್ದ್ ನಗರದ ನಿವಾಸಿ ಅರವಿಂದ್ ಎಂಬಾತನನ್ನು ಬಂಧಿಸಿ, ಆತನಿಂದ ₹25 ಸಾವಿರ ಮೌಲ್ಯದ ಚಿನ್ನಾಭರಣ ಮತ್ತು ₹20 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಮತ್ತೊಂದು ಪ್ರಕರಣದಲ್ಲಿ ಮಸ್ಕಂ ದಾಮೋದರನ್ ಎಂಬುವರ ಮನೆಯಲ್ಲಿ ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಇಟಿ ಬ್ಲಾಕ್ ನಿವಾಸಿ ರವಿಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಒಂದು ಬೈಕ್, ಸೈಕಲ್ ಮತ್ತು ಹಿತ್ತಾಳೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಎಂ.ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ವೇಣುಗೋಪಾಲ್, ರಾಜೇಂದ್ರ, ಸತೀಶ್, ಗೋಪಿ, ರಮೇಶ್ ಜಂಬರಗಿ, ಲೋಕೇಶ್ ಮತ್ತು ಮನೋಹರ್ ಕಾರ್ಯಾಚರಣೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ತಾಲ್ಲೂಕಿನ ಪ್ರತ್ಯೇಕ ಮೂರು ಕಳ್ಳತನ ಪ್ರಕರಣಗಳಲ್ಲಿ ಆಂಡರಸನ್ಪೇಟೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ₹1.66 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಘಟ್ಟಮಾದಮಂಗಲ ಗ್ರಾಮದ ಹೊರವಲಯದಲ್ಲಿರುವ ಉದ್ದಂಡಮ್ಮ ದೇವಾಲಯ ಮತ್ತು ಬಾಣಗಿರಿಯ ಗುರುಮೂರ್ತಿ ಯಲ್ಲಮ್ಮ ದೇವಾಲಯಗಳಲ್ಲಿ ಈಚೆಗೆ ಕಳ್ಳತನ ನಡೆದಿತ್ತು. ಈ ಸಂಬಂಧ ಪ್ರಭಾಕರ್ ಮತ್ತು ಶಿವರಾಮರೆಡ್ಡಿ ಎಂಬುವರು ದೂರು ನೀಡಿದ್ದರು. ದೂರಿನ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರು ಆಂಧ್ರಪ್ರದೇಶದ ಮುರುಗೇಶ್, ರಾಜುವೇಲು ಮತ್ತು ಸುರೇಶ್ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹85 ಸಾವಿರ ಮೌಲ್ಯದ ಆಭರಣ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಆಂಡರಸನ್ಪೇಟೆಯ ಸೈಯದ್ ಸದಾಕತ್ ಎಂಬುವರ ಮನೆಯಲ್ಲಿ ಈಚೆಗೆ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೂರ್ದ್ ನಗರದ ನಿವಾಸಿ ಅರವಿಂದ್ ಎಂಬಾತನನ್ನು ಬಂಧಿಸಿ, ಆತನಿಂದ ₹25 ಸಾವಿರ ಮೌಲ್ಯದ ಚಿನ್ನಾಭರಣ ಮತ್ತು ₹20 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಮತ್ತೊಂದು ಪ್ರಕರಣದಲ್ಲಿ ಮಸ್ಕಂ ದಾಮೋದರನ್ ಎಂಬುವರ ಮನೆಯಲ್ಲಿ ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಇಟಿ ಬ್ಲಾಕ್ ನಿವಾಸಿ ರವಿಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಒಂದು ಬೈಕ್, ಸೈಕಲ್ ಮತ್ತು ಹಿತ್ತಾಳೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಎಂ.ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ವೇಣುಗೋಪಾಲ್, ರಾಜೇಂದ್ರ, ಸತೀಶ್, ಗೋಪಿ, ರಮೇಶ್ ಜಂಬರಗಿ, ಲೋಕೇಶ್ ಮತ್ತು ಮನೋಹರ್ ಕಾರ್ಯಾಚರಣೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>