<p><strong>ಕೆಜಿಎಫ್:</strong> ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಶಾಂತಿ ಮತ್ತು ಸೌಹಾರ್ದತೆ ಸಭೆ ಆಯೋಜಿಸಲಾಯಿತು. </p>.<p>ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಶಾಂತಿಯಿಂದ ಹಬ್ಬ ಆಚರಿಸಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುವ ಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕು’ ಎಂದರು.</p>.<p>ಗಣೇಶೋತ್ಸವ ಆಚರಣೆಗೆ ಸಂಘಟನೆಗಳು ಪೊಲೀಸರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಂಬಂಧಿಸಿದ ಇತರ ಕಚೇರಿಗಳಿಂದಲೂ ಅನುಮತಿ ಹೊಂದಿರಬೇಕು ಎಂದರು. </p>.<p>ಡಿವೈಎಸ್ಪಿ ಪಾಂಡುರಂಗ ಹಬ್ಬದ ಬಗ್ಗೆ ಸಂಘಟನೆಗಳು ನಡೆದುಕೊಳ್ಳಬೇಕಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ಗಳಾದ ನವೀನ್, ವೈ.ಆರ್.ರಂಗಸ್ವಾಮಯ್ಯ, ಮಾರ್ಕೊಂಡಯ್ಯ, ದಯಾನಂದ್, ಜಿ.ಸಿ.ನಾರಾಯಣಸ್ವಾಮಿ, ಲಕ್ಷ್ಮಿನಾರಾಯಣ, ಆರ್ಪಿಐ ಸೋಮಶೇಖರ್ ಸೇರಿದಂತೆ ಇಲಾಖೆಯ ವಿವಿಧ ದರ್ಜೆಯ ಅಧಿಕಾರಿಗಳು ಭಾಗವಹಿಸಿದ್ದರು. ಕೆಜಿಎಫ್ ಮತ್ತು ಬಂಗಾರಪೇಟೆ ತಾಲ್ಲೂಕಿನ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಶಾಂತಿ ಮತ್ತು ಸೌಹಾರ್ದತೆ ಸಭೆ ಆಯೋಜಿಸಲಾಯಿತು. </p>.<p>ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಶಾಂತಿಯಿಂದ ಹಬ್ಬ ಆಚರಿಸಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುವ ಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕು’ ಎಂದರು.</p>.<p>ಗಣೇಶೋತ್ಸವ ಆಚರಣೆಗೆ ಸಂಘಟನೆಗಳು ಪೊಲೀಸರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಂಬಂಧಿಸಿದ ಇತರ ಕಚೇರಿಗಳಿಂದಲೂ ಅನುಮತಿ ಹೊಂದಿರಬೇಕು ಎಂದರು. </p>.<p>ಡಿವೈಎಸ್ಪಿ ಪಾಂಡುರಂಗ ಹಬ್ಬದ ಬಗ್ಗೆ ಸಂಘಟನೆಗಳು ನಡೆದುಕೊಳ್ಳಬೇಕಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ಗಳಾದ ನವೀನ್, ವೈ.ಆರ್.ರಂಗಸ್ವಾಮಯ್ಯ, ಮಾರ್ಕೊಂಡಯ್ಯ, ದಯಾನಂದ್, ಜಿ.ಸಿ.ನಾರಾಯಣಸ್ವಾಮಿ, ಲಕ್ಷ್ಮಿನಾರಾಯಣ, ಆರ್ಪಿಐ ಸೋಮಶೇಖರ್ ಸೇರಿದಂತೆ ಇಲಾಖೆಯ ವಿವಿಧ ದರ್ಜೆಯ ಅಧಿಕಾರಿಗಳು ಭಾಗವಹಿಸಿದ್ದರು. ಕೆಜಿಎಫ್ ಮತ್ತು ಬಂಗಾರಪೇಟೆ ತಾಲ್ಲೂಕಿನ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>