<p><strong>ಕೆಜಿಎಫ್:</strong> ಪಡಿತರ ಪಡೆಯಲು ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಜಾತಿ ಪ್ರಮಾಣಪತ್ರವನ್ನು ಜೋಡಣೆ ಮಾಡುವ ಆದೇಶ ಹಿನ್ನಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ಮಂಗಳವಾರ ನೂಕು ನುಗ್ಗಲು ಉಂಟಾಯಿತು.</p>.<p>ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನನ ಜತೆಗೆ ಪಟ್ಟಿಯಲ್ಲಿರುವ ಎಲ್ಲಾ ಸದಸ್ಯರ ಜಾತಿಪ್ರಮಾಣ ಪತ್ರವನ್ನು ಕೂಡ ಪಡಿತರ ಅಂಗಡಿಯಲ್ಲಿ ನೀಡಬೇಕೆಂದು ರೇಷನ್ ಅಂಗಡಿಯವರು ಹೇಳುತ್ತಿದ್ದಾರೆ. ಹಾಗಾಗಿ ಬೆಳಿಗ್ಗೆಯಿಂದಲೇ ಸರದಿಯಲ್ಲಿ ಅರ್ಜಿ ಸಲ್ಲಿಸಲು ನಿಂತಿದ್ದೇನೆ ಎಂಬುದು ಪಡಿತರದಾರರೊಬ್ಬರ ಮಾತಾಗಿದೆ.</p>.<p>ಕುಟುಂಬದ ಸದಸ್ಯರ ಹೆಸರನ್ನು ಕಡ್ಡಾಯವಾಗಿ ನೀಡಬೇಕೆಂದು ಪಡಿತರ ಅಂಗಡಿಯವರು ಒತ್ತಡ ಹೇರುತ್ತಿದ್ದಾರೆ. ಸರ್ವರ್ ಸಮಸ್ಯೆ ಕೂಡ ಇದೆ. ಇದರಿಂದಾಗಿ ಪಡಿತರದಾರರಲ್ಲಿ ಆತಂಕ ಉಂಟಾಗಿದೆ ಎಂಬುದು ಕಂದಾಯ ಅಧಿಕಾರಿಗಳ ಮಾತಾಗಿದೆ.</p>.<p>ನಗರದಲ್ಲಿ ಒಟ್ಟು 20,446 ಪಡಿತರ ಕಾರ್ಡ್ದಾರರಿದ್ದಾರೆ. ಅದರಲ್ಲಿ 893 ಅಂತ್ಯೋದಯ ಕಾರ್ಡ್ದಾರರಿದ್ದಾರೆ. 2,138 ಕಾರ್ಡ್ದಾರರು ರಾಜ್ಯ ಸರ್ಕಾರ ನೀಡುವ ಹೆಚ್ಚುವರಿ ಪಡಿತರ ಪಡೆಯುತ್ತಿದ್ದಾರೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಹೇಳಿದ್ದಾರೆ.</p>.<p>ಪಡಿತರದಾರು ಕಡ್ಡಾಯವಾಗಿ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಪಡಿತರ ಅಂಗಡಿಯವರಿಗೆ ಕೊಟ್ಟು ಜೋಡಣೆ ಮಾಡಿಸಬೇಕು ಎಂಬುದು ಎಲ್ಲೂ ಕಡ್ಡಾಯ ಮಾಡಿಲ್ಲ. ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದನ್ನೇ ಪಡಿತರ ಅಂಗಡಿಯವರಿಗೆ ತಿಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಪಡಿತರ ಪಡೆಯಲು ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಜಾತಿ ಪ್ರಮಾಣಪತ್ರವನ್ನು ಜೋಡಣೆ ಮಾಡುವ ಆದೇಶ ಹಿನ್ನಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ಮಂಗಳವಾರ ನೂಕು ನುಗ್ಗಲು ಉಂಟಾಯಿತು.</p>.<p>ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನನ ಜತೆಗೆ ಪಟ್ಟಿಯಲ್ಲಿರುವ ಎಲ್ಲಾ ಸದಸ್ಯರ ಜಾತಿಪ್ರಮಾಣ ಪತ್ರವನ್ನು ಕೂಡ ಪಡಿತರ ಅಂಗಡಿಯಲ್ಲಿ ನೀಡಬೇಕೆಂದು ರೇಷನ್ ಅಂಗಡಿಯವರು ಹೇಳುತ್ತಿದ್ದಾರೆ. ಹಾಗಾಗಿ ಬೆಳಿಗ್ಗೆಯಿಂದಲೇ ಸರದಿಯಲ್ಲಿ ಅರ್ಜಿ ಸಲ್ಲಿಸಲು ನಿಂತಿದ್ದೇನೆ ಎಂಬುದು ಪಡಿತರದಾರರೊಬ್ಬರ ಮಾತಾಗಿದೆ.</p>.<p>ಕುಟುಂಬದ ಸದಸ್ಯರ ಹೆಸರನ್ನು ಕಡ್ಡಾಯವಾಗಿ ನೀಡಬೇಕೆಂದು ಪಡಿತರ ಅಂಗಡಿಯವರು ಒತ್ತಡ ಹೇರುತ್ತಿದ್ದಾರೆ. ಸರ್ವರ್ ಸಮಸ್ಯೆ ಕೂಡ ಇದೆ. ಇದರಿಂದಾಗಿ ಪಡಿತರದಾರರಲ್ಲಿ ಆತಂಕ ಉಂಟಾಗಿದೆ ಎಂಬುದು ಕಂದಾಯ ಅಧಿಕಾರಿಗಳ ಮಾತಾಗಿದೆ.</p>.<p>ನಗರದಲ್ಲಿ ಒಟ್ಟು 20,446 ಪಡಿತರ ಕಾರ್ಡ್ದಾರರಿದ್ದಾರೆ. ಅದರಲ್ಲಿ 893 ಅಂತ್ಯೋದಯ ಕಾರ್ಡ್ದಾರರಿದ್ದಾರೆ. 2,138 ಕಾರ್ಡ್ದಾರರು ರಾಜ್ಯ ಸರ್ಕಾರ ನೀಡುವ ಹೆಚ್ಚುವರಿ ಪಡಿತರ ಪಡೆಯುತ್ತಿದ್ದಾರೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಹೇಳಿದ್ದಾರೆ.</p>.<p>ಪಡಿತರದಾರು ಕಡ್ಡಾಯವಾಗಿ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಪಡಿತರ ಅಂಗಡಿಯವರಿಗೆ ಕೊಟ್ಟು ಜೋಡಣೆ ಮಾಡಿಸಬೇಕು ಎಂಬುದು ಎಲ್ಲೂ ಕಡ್ಡಾಯ ಮಾಡಿಲ್ಲ. ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದನ್ನೇ ಪಡಿತರ ಅಂಗಡಿಯವರಿಗೆ ತಿಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>