<p><strong>ಮಾಲೂರು: </strong>ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಸರ್ಕಾರ ಅವರನ್ನು ಗುರ್ತಿಸಿ ದಿನಸಿ ಕಿಟ್ ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ಪಟ್ಟಣದಲ್ಲಿ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ಮಂಡಳಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಸುಮಾರು 16 ಸಾವಿರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿಯಾಗಿದ್ದಾರೆ. ಸರ್ಕಾರ ಕೇವಲ 2 ಸಾವಿರ ದಿನಸಿ ಕಿಟ್ ನೀಡಿ ಹಂಚುವ ಜವಾಬ್ದಾರಿಯನ್ನು ನನಗೆ ನೀಡಿತ್ತು. ಆದರೆ, ಸರ್ಕಾರದ ಮೇಲೆ ಒತ್ತಡ ಹಾಕಿದ್ದರಿಂದ ಮತ್ತೆ 2 ಸಾವಿರ ಕಿಟ್ ನೀಡಿದ್ದಾರೆ ಎಂದರು.</p>.<p>ಹಲವಾರು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಪಟ್ಟಿ ನೀಡಿದ್ದಾರೆ. ಅದರಲ್ಲಿ ಕೆಲವರನ್ನು ಆಯ್ಕೆ ಮಾಡಿ ದಿನಸಿ ಕಿಟ್ ನೀಡಲಾಗುತ್ತಿದೆ. ಕಾರ್ಮಿಕರು ಯಾವುದೇ ಕಾರಣಕ್ಕೂ ಬೇಸರಪಡಬಾರದು. ಮುಂದಿನ ದಿನಗಳಲ್ಲಿ ದಿನಸಿ ಕಿಟ್ ವಂಚಿತರನ್ನು ಗುರ್ತಿಸಿ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಕಾರ್ಮಿಕರಿಗೆ ₹ 3 ಸಾವಿರ ಪರಿಹಾರ ಧನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಈ ಹಣ ಕೆಲವರ ಬ್ಯಾಂಕ್ ಖಾತೆಗಳಿಗೆ ಮಾತ್ರ ಪಾವತಿಯಾಗಿದೆ. ಉಳಿದವರಿಗೆ ಇನ್ನೂ ಪಾವತಿಯಾಗಿಲ್ಲ. ಅಧಿಕಾರಿಗಳು ಎಲ್ಲಾ ಕಾರ್ಮಿಕರಿಗೂ ಸರ್ಕಾರದ ಹಣ ತಲುಪವಂತೆ ಮಾಡಬೇಕು ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಉಪಾಧ್ಯಕ್ಷ ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನದೀಮ್, ಕಾರ್ಮಿಕ ಇಲಾಖೆಯ ಮಂಜುನಾಥ್, ಮಾರುತಿ ಮರ ಕೆಲಸಗಾರರ ಸಂಘದ ಅಧ್ಯಕ್ಷ ಮಾವೆ ಪ್ರಕಾಶ್, ರವಿಚಂದ್ರ, ಕೆ. ವೇಣು, ಕೊಪ್ಪ ಚಂದ್ರು, ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಸರ್ಕಾರ ಅವರನ್ನು ಗುರ್ತಿಸಿ ದಿನಸಿ ಕಿಟ್ ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ಪಟ್ಟಣದಲ್ಲಿ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ಮಂಡಳಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಸುಮಾರು 16 ಸಾವಿರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿಯಾಗಿದ್ದಾರೆ. ಸರ್ಕಾರ ಕೇವಲ 2 ಸಾವಿರ ದಿನಸಿ ಕಿಟ್ ನೀಡಿ ಹಂಚುವ ಜವಾಬ್ದಾರಿಯನ್ನು ನನಗೆ ನೀಡಿತ್ತು. ಆದರೆ, ಸರ್ಕಾರದ ಮೇಲೆ ಒತ್ತಡ ಹಾಕಿದ್ದರಿಂದ ಮತ್ತೆ 2 ಸಾವಿರ ಕಿಟ್ ನೀಡಿದ್ದಾರೆ ಎಂದರು.</p>.<p>ಹಲವಾರು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಪಟ್ಟಿ ನೀಡಿದ್ದಾರೆ. ಅದರಲ್ಲಿ ಕೆಲವರನ್ನು ಆಯ್ಕೆ ಮಾಡಿ ದಿನಸಿ ಕಿಟ್ ನೀಡಲಾಗುತ್ತಿದೆ. ಕಾರ್ಮಿಕರು ಯಾವುದೇ ಕಾರಣಕ್ಕೂ ಬೇಸರಪಡಬಾರದು. ಮುಂದಿನ ದಿನಗಳಲ್ಲಿ ದಿನಸಿ ಕಿಟ್ ವಂಚಿತರನ್ನು ಗುರ್ತಿಸಿ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಕಾರ್ಮಿಕರಿಗೆ ₹ 3 ಸಾವಿರ ಪರಿಹಾರ ಧನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಈ ಹಣ ಕೆಲವರ ಬ್ಯಾಂಕ್ ಖಾತೆಗಳಿಗೆ ಮಾತ್ರ ಪಾವತಿಯಾಗಿದೆ. ಉಳಿದವರಿಗೆ ಇನ್ನೂ ಪಾವತಿಯಾಗಿಲ್ಲ. ಅಧಿಕಾರಿಗಳು ಎಲ್ಲಾ ಕಾರ್ಮಿಕರಿಗೂ ಸರ್ಕಾರದ ಹಣ ತಲುಪವಂತೆ ಮಾಡಬೇಕು ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಉಪಾಧ್ಯಕ್ಷ ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನದೀಮ್, ಕಾರ್ಮಿಕ ಇಲಾಖೆಯ ಮಂಜುನಾಥ್, ಮಾರುತಿ ಮರ ಕೆಲಸಗಾರರ ಸಂಘದ ಅಧ್ಯಕ್ಷ ಮಾವೆ ಪ್ರಕಾಶ್, ರವಿಚಂದ್ರ, ಕೆ. ವೇಣು, ಕೊಪ್ಪ ಚಂದ್ರು, ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>