<p><strong>ಕೋಲಾರ:</strong> ತಾಲ್ಲೂಕಿನ ತೇರಹಳ್ಳಿ ಬೆಟ್ಟದ ಹಳ್ಳಿಗಳಲ್ಲಿ ಪದೇಪದೇ ಉದ್ಭವಿಸುವ ನೀರಿನ ಬವಣೆ, ಶುದ್ಧ ಕುಡಿಯುವ ನೀರಿನ ಮರೀಚಿಕೆ ಕುರಿತಂತೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಂಗಳವಾರ ಪ್ರಸ್ತಾಪಿಸಿದ್ದಾರೆ.</p>.<p>‘ತೇರಹಳ್ಳಿ ಬೆಟ್ಟದಲ್ಲಿ ನೀರಿನ ಬವಣೆ, ಜನರ ಪರದಾಟ!’ ಕುರಿತ ವಿಶೇಷ ವರದಿ ‘ಪ್ರಜಾವಾಣಿ’ಯಲ್ಲಿ ಡಿ.8ರಂದು ಪ್ರಕಟವಾಗಿತ್ತು.</p>.<p>ಈ ವರದಿಯನ್ನು ಓದಿ, ಬೆಟ್ಟದಲ್ಲಿರುವ ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅನುದಾನ ಕಲ್ಪಿಸಬೇಕೆಂದು ಅವರು ಶೂನ್ಯ ವೇಳೆಯಲ್ಲಿ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ ಸಚಿವರ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಇರಲಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು ಎಂದು ಪರಿಷತ್ತಿನ ಸಭಾ ನಾಯಕ ಎನ್.ಎಸ್.ಬೋಸರಾಜು ಹೇಳಿದ್ದಾರೆ.</p>.<p>ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಅನಿಲ್ ಕುಮಾರ್, ‘ಸ್ವಾತಂತ್ರ್ಯ ಬಂದು 78 ವರ್ಷವಾದರೂ ತೇರಹಳ್ಳಿ ಬೆಟ್ಟದ ಕೊಂಡರಾಜನಹಳ್ಳಿ ವ್ಯಾಪ್ತಿಯ ಆರೇಳು ಹಳ್ಳಿಗಳ ಜನರು ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 500 ಮನೆಗಳಿದ್ದು, 2 ಸಾವಿರ ಜನರು ವಾಸಿಸುತ್ತಿದ್ದಾರೆ. ನೀರು ಹಸಿರು ಬಣಕ್ಕೆ ತಿರುಗಿದ್ದು, ಒಂಥರಾ ವಾಸನೆ ಬರುತ್ತದೆ. ಬಾವಿ ಕುಂಟೆ ಆಶ್ರಯಿಸುತ್ತಿದ್ದಾರೆ. ಇದರಿಂದ ಹಲವಾರು ರೋಗರುಜಿನ ಬರುವ ಆತಂಕವಿದೆ. ಈಗಲೇ ಈ ಸಮಸ್ಯೆ ಇದ್ದು, ಇನ್ನು ಬೇಸಿಗೆ ಕಾಲದಲ್ಲಿ ಮತ್ತಷ್ಟು ತೊಂದರೆ ಆಗುವ ಸಾಧ್ಯತೆ ಇರುತ್ತದೆ’ ಎಂದಿದ್ದಾರೆ.</p>.<p>ಹೀಗಾಗಿ, ಆ ಭಾಗದ ಜನರಿಗೆ ಸೌಲಭ್ಯ ಹಾಗೂ ಶುದ್ಧ ನೀರು ದೊರಕಿಸಿಕೊಡಲು ಅತ್ಯವಶ್ಯಕವಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ತೇರಹಳ್ಳಿ ಬೆಟ್ಟದ ಹಳ್ಳಿಗಳಲ್ಲಿ ಪದೇಪದೇ ಉದ್ಭವಿಸುವ ನೀರಿನ ಬವಣೆ, ಶುದ್ಧ ಕುಡಿಯುವ ನೀರಿನ ಮರೀಚಿಕೆ ಕುರಿತಂತೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಂಗಳವಾರ ಪ್ರಸ್ತಾಪಿಸಿದ್ದಾರೆ.</p>.<p>‘ತೇರಹಳ್ಳಿ ಬೆಟ್ಟದಲ್ಲಿ ನೀರಿನ ಬವಣೆ, ಜನರ ಪರದಾಟ!’ ಕುರಿತ ವಿಶೇಷ ವರದಿ ‘ಪ್ರಜಾವಾಣಿ’ಯಲ್ಲಿ ಡಿ.8ರಂದು ಪ್ರಕಟವಾಗಿತ್ತು.</p>.<p>ಈ ವರದಿಯನ್ನು ಓದಿ, ಬೆಟ್ಟದಲ್ಲಿರುವ ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅನುದಾನ ಕಲ್ಪಿಸಬೇಕೆಂದು ಅವರು ಶೂನ್ಯ ವೇಳೆಯಲ್ಲಿ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ ಸಚಿವರ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಇರಲಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು ಎಂದು ಪರಿಷತ್ತಿನ ಸಭಾ ನಾಯಕ ಎನ್.ಎಸ್.ಬೋಸರಾಜು ಹೇಳಿದ್ದಾರೆ.</p>.<p>ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಅನಿಲ್ ಕುಮಾರ್, ‘ಸ್ವಾತಂತ್ರ್ಯ ಬಂದು 78 ವರ್ಷವಾದರೂ ತೇರಹಳ್ಳಿ ಬೆಟ್ಟದ ಕೊಂಡರಾಜನಹಳ್ಳಿ ವ್ಯಾಪ್ತಿಯ ಆರೇಳು ಹಳ್ಳಿಗಳ ಜನರು ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 500 ಮನೆಗಳಿದ್ದು, 2 ಸಾವಿರ ಜನರು ವಾಸಿಸುತ್ತಿದ್ದಾರೆ. ನೀರು ಹಸಿರು ಬಣಕ್ಕೆ ತಿರುಗಿದ್ದು, ಒಂಥರಾ ವಾಸನೆ ಬರುತ್ತದೆ. ಬಾವಿ ಕುಂಟೆ ಆಶ್ರಯಿಸುತ್ತಿದ್ದಾರೆ. ಇದರಿಂದ ಹಲವಾರು ರೋಗರುಜಿನ ಬರುವ ಆತಂಕವಿದೆ. ಈಗಲೇ ಈ ಸಮಸ್ಯೆ ಇದ್ದು, ಇನ್ನು ಬೇಸಿಗೆ ಕಾಲದಲ್ಲಿ ಮತ್ತಷ್ಟು ತೊಂದರೆ ಆಗುವ ಸಾಧ್ಯತೆ ಇರುತ್ತದೆ’ ಎಂದಿದ್ದಾರೆ.</p>.<p>ಹೀಗಾಗಿ, ಆ ಭಾಗದ ಜನರಿಗೆ ಸೌಲಭ್ಯ ಹಾಗೂ ಶುದ್ಧ ನೀರು ದೊರಕಿಸಿಕೊಡಲು ಅತ್ಯವಶ್ಯಕವಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>