<p><strong>ಕೋಲಾರ: </strong>ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಓಮವಾರ (ಮೇ.13) ನಡೆಯಲಿರುವ ಚುನಾವಣೆಯಲ್ಲಿ 21 ಮಂದಿ ಕಣದಲ್ಲಿದ್ದು, ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಮತದಾನ ನಡೆಯಲಿದೆ.</p>.<p>13 ಮಂದಿ ನಿರ್ದೇಶಕರ ಪೈಕಿ 4 ಮಂದಿ ಅವಿರೋಧಿವಾಗಿ ಆಯ್ಕೆಯಾಗಿದ್ದು, ಬಂಗಾರಪೇಟೆ ಜಯಸಿಂಹ ಕೃಷ್ಣಪ್ಪ, ಗೌರಿಬಿದನೂರು ಕಾಂತರಾಜ್, ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದ ಸುನಂದಮ್ಮ, ಬಾಗೇಪಲ್ಲಿ ಅಶ್ವಥ್ಥರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದು, 9 ಸ್ಥಾನಗಳಿಗೆ ಮಾತ್ರ ಚುನಾವಣೆಯ ನಡೆಯುತ್ತಿದ್ದು, 1,200 ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.</p>.<p>ಕೋಲಾರ ಜಿಲ್ಲೆಯ 5 ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿದ್ದಾಜಿದ್ದಿನ ಪೈಪೋಟಿಯ ನಡುವೆ ಹಣ, ಉಡುಗೊರೆಗಳು, ಬೈಕ್ ಮತ್ತಿತರ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂಬ ವ್ಯಾಪಕವಾಗಿ ಕೇಳಿ ಬರುತ್ತಿವೆ.</p>.<p>9 ಕ್ಷೇತ್ರಗಳ ಮತದಾನಕ್ಕಾಗಿ ಹಾರೋಹಳ್ಳಿ ಜಯನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ 9 ಕೊಠಡಿಗಳನ್ನು ಆಯ್ಕೆ ಮಾಡಲಾಗಿದ್ದು, ಮತದಾರರಿಗೆ ಹೊರತುಪಡಿಸಿ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಲೇಜಿನ ಸುತ್ತ ಸುಮಾರು 200 ಮೀ.ದೂರದಲ್ಲಿ ವಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಈಗಾಗಲೇ ಆಯಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದ್ದು, ಅವರಿಗೆ ಮಾತ್ರ ಮತದಾನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.</p>.<p>ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, ಮತದಾನ ಮುಗಿದ ನಂತರ ಸಂಜೆ 4ಕ್ಕೆ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಫಲಿತಾಂಶ ಚುನಾವಣಾಧಿಕಾರಿ ಸೋಮಶೇಖರ್ ಪ್ರಕಟಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಓಮವಾರ (ಮೇ.13) ನಡೆಯಲಿರುವ ಚುನಾವಣೆಯಲ್ಲಿ 21 ಮಂದಿ ಕಣದಲ್ಲಿದ್ದು, ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಮತದಾನ ನಡೆಯಲಿದೆ.</p>.<p>13 ಮಂದಿ ನಿರ್ದೇಶಕರ ಪೈಕಿ 4 ಮಂದಿ ಅವಿರೋಧಿವಾಗಿ ಆಯ್ಕೆಯಾಗಿದ್ದು, ಬಂಗಾರಪೇಟೆ ಜಯಸಿಂಹ ಕೃಷ್ಣಪ್ಪ, ಗೌರಿಬಿದನೂರು ಕಾಂತರಾಜ್, ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದ ಸುನಂದಮ್ಮ, ಬಾಗೇಪಲ್ಲಿ ಅಶ್ವಥ್ಥರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದು, 9 ಸ್ಥಾನಗಳಿಗೆ ಮಾತ್ರ ಚುನಾವಣೆಯ ನಡೆಯುತ್ತಿದ್ದು, 1,200 ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.</p>.<p>ಕೋಲಾರ ಜಿಲ್ಲೆಯ 5 ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿದ್ದಾಜಿದ್ದಿನ ಪೈಪೋಟಿಯ ನಡುವೆ ಹಣ, ಉಡುಗೊರೆಗಳು, ಬೈಕ್ ಮತ್ತಿತರ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂಬ ವ್ಯಾಪಕವಾಗಿ ಕೇಳಿ ಬರುತ್ತಿವೆ.</p>.<p>9 ಕ್ಷೇತ್ರಗಳ ಮತದಾನಕ್ಕಾಗಿ ಹಾರೋಹಳ್ಳಿ ಜಯನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ 9 ಕೊಠಡಿಗಳನ್ನು ಆಯ್ಕೆ ಮಾಡಲಾಗಿದ್ದು, ಮತದಾರರಿಗೆ ಹೊರತುಪಡಿಸಿ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಲೇಜಿನ ಸುತ್ತ ಸುಮಾರು 200 ಮೀ.ದೂರದಲ್ಲಿ ವಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಈಗಾಗಲೇ ಆಯಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದ್ದು, ಅವರಿಗೆ ಮಾತ್ರ ಮತದಾನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.</p>.<p>ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, ಮತದಾನ ಮುಗಿದ ನಂತರ ಸಂಜೆ 4ಕ್ಕೆ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಫಲಿತಾಂಶ ಚುನಾವಣಾಧಿಕಾರಿ ಸೋಮಶೇಖರ್ ಪ್ರಕಟಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>