<p><strong>ಕೋಲಾರ: </strong>ತಾಲ್ಲೂಕಿನ ಮಠಪುರ ಗೇಟ್ ಬಳಿ ಗುರುವಾರ ರಾತ್ರಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಲ್ಯಾಣಮೂರ್ತಿ (60) ಎಂಬುವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ತಿಪ್ಪೇನಹಳ್ಳಿಯ ಕಲ್ಯಾಣಮೂರ್ತಿ ಅವರು ಪತ್ನಿ ಭ್ರಮರಾಂಬಿಕ ಜತೆ ಬೈಕ್ನಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದರು. ದಂಪತಿ ವೇಮಗಲ್ನಲ್ಲಿ ಮದುವೆ ಮುಗಿಸಿಕೊಂಡು ಊರಿಗೆ ಹಿಂದಿರುಗು ತ್ತಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ಕಲ್ಯಾಣಮೂರ್ತಿ ಅವರು ಟ್ರ್ಯಾಕ್ಟರ್ಗೆ ಹಿಂದಿನಿಂದ ಬೈಕ್ ಗುದ್ದಿಸಿದ್ದಾರೆ. ಈ ವೇಳೆ ವಾಹನದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭ್ರಮರಾಂಬಿಕ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ವೇಮಗಲ್ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.</p>.<p class="Briefhead">ಅಂಬ್ಲಿಕಲ್: ವ್ಯಕ್ತಿ ಸಾವು</p>.<p>ನಂಗಲಿ: ಅಂಬ್ಲಿಕಲ್ ಗ್ರಾಮದ ಹೊರವಲಯದ ಅಶ್ವತ್ಥ ಕಟ್ಟೆಬಳಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.</p>.<p>ಕುರುಡುಮಲೆ ಗ್ರಾಮದ ವೆಂಕಟೇಶಪ್ಪ (65) ಮೃತ ವ್ಯಕ್ತಿ. ಅವರು ಪ್ಲಾಸ್ಟಿಕ್ ಬಿಂದಿಗೆಗಳ ವ್ಯಾಪಾರಿಯಾಗಿದ್ದು, ಅಂಬ್ಲಿಕಲ್ ಗ್ರಾಮದಲ್ಲಿ ವ್ಯಾಪಾರಕ್ಕೆಂದು ಬಂದು ಗ್ರಾಮದ ಹೊರವಲಯದ ಅಶ್ವತ್ಥ ಕಟ್ಟೆ ಬಳಿ ರಾತ್ರಿ ತಂಗಿದ್ದರು ಎಂದು ತಿಳಿದುಬಂದಿದೆ.</p>.<p>ಗುರುವಾರ ಬೆಳಿಗ್ಗೆ ಪ್ಲಾಸ್ಟಿಕ್ ನೀರಿನ ಬಾಟಲಿ ತೆಗೆದುಕೊಂಡು ಬಹಿರ್ದೆಸೆಗೆಂದು ಅಶ್ವತ್ಥ ಕಟ್ಟೆಯಿಂದ ಸ್ವಲ್ಪ ದೂರ ಹೋದವರು ಸ್ಥಳದಲ್ಲಿಯೇ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.</p>.<p>ನಂಗಲಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಎನ್.ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಮಠಪುರ ಗೇಟ್ ಬಳಿ ಗುರುವಾರ ರಾತ್ರಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಲ್ಯಾಣಮೂರ್ತಿ (60) ಎಂಬುವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ತಿಪ್ಪೇನಹಳ್ಳಿಯ ಕಲ್ಯಾಣಮೂರ್ತಿ ಅವರು ಪತ್ನಿ ಭ್ರಮರಾಂಬಿಕ ಜತೆ ಬೈಕ್ನಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದರು. ದಂಪತಿ ವೇಮಗಲ್ನಲ್ಲಿ ಮದುವೆ ಮುಗಿಸಿಕೊಂಡು ಊರಿಗೆ ಹಿಂದಿರುಗು ತ್ತಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ಕಲ್ಯಾಣಮೂರ್ತಿ ಅವರು ಟ್ರ್ಯಾಕ್ಟರ್ಗೆ ಹಿಂದಿನಿಂದ ಬೈಕ್ ಗುದ್ದಿಸಿದ್ದಾರೆ. ಈ ವೇಳೆ ವಾಹನದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭ್ರಮರಾಂಬಿಕ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ವೇಮಗಲ್ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.</p>.<p class="Briefhead">ಅಂಬ್ಲಿಕಲ್: ವ್ಯಕ್ತಿ ಸಾವು</p>.<p>ನಂಗಲಿ: ಅಂಬ್ಲಿಕಲ್ ಗ್ರಾಮದ ಹೊರವಲಯದ ಅಶ್ವತ್ಥ ಕಟ್ಟೆಬಳಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.</p>.<p>ಕುರುಡುಮಲೆ ಗ್ರಾಮದ ವೆಂಕಟೇಶಪ್ಪ (65) ಮೃತ ವ್ಯಕ್ತಿ. ಅವರು ಪ್ಲಾಸ್ಟಿಕ್ ಬಿಂದಿಗೆಗಳ ವ್ಯಾಪಾರಿಯಾಗಿದ್ದು, ಅಂಬ್ಲಿಕಲ್ ಗ್ರಾಮದಲ್ಲಿ ವ್ಯಾಪಾರಕ್ಕೆಂದು ಬಂದು ಗ್ರಾಮದ ಹೊರವಲಯದ ಅಶ್ವತ್ಥ ಕಟ್ಟೆ ಬಳಿ ರಾತ್ರಿ ತಂಗಿದ್ದರು ಎಂದು ತಿಳಿದುಬಂದಿದೆ.</p>.<p>ಗುರುವಾರ ಬೆಳಿಗ್ಗೆ ಪ್ಲಾಸ್ಟಿಕ್ ನೀರಿನ ಬಾಟಲಿ ತೆಗೆದುಕೊಂಡು ಬಹಿರ್ದೆಸೆಗೆಂದು ಅಶ್ವತ್ಥ ಕಟ್ಟೆಯಿಂದ ಸ್ವಲ್ಪ ದೂರ ಹೋದವರು ಸ್ಥಳದಲ್ಲಿಯೇ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.</p>.<p>ನಂಗಲಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಎನ್.ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>