<p><strong>ಕೋಲಾರ:</strong> 14ರ ಹರೆಯದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜಿಲ್ಲೆಯ ಕೆಜಿಎಫ್ ಉಪವಿಭಾಗದ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರಂ ಪೊಲೀಸ್ ಠಾಣೆ ಸರಹದ್ದಿನ ನಾಲ್ವರು ಅಪರಾಧಿಗಳಿಗೆ ಪೋಕ್ಸೊ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. </p>.<p>ಬಂಗಾರಪೇಟೆ ತಾಲ್ಲೂಕಿನ ಹೊಸಕೋಟೆ ಗ್ರಾಮದ ವಾಸಿ ಆನಂದ್, ಕೆಜಿಎಫ್ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಕಾಂತರಾಜ್, ಬಂಗಾರಪೇಟೆ ತಾಲ್ಲೂಕಿನ ಕಾಮಸಮದ್ರಂ ಎ.ಕೆ.ಕಾಲೋನಿ ನಿವಾಸಿ ಪ್ರವೀಣ್ ಮತ್ತು ಬೆಂಗನೂರು ಗ್ರಾಮದ ವೇಣು ಶಿಕ್ಷೆಗೆ ಒಳಗಾದವರು. </p>.<p>2022ರ ಫೆಬ್ರುವರಿ 18ರಂದು ಬಾಲಕಿಯು ತನ್ನ ಜನ್ಮದಿನದ ಪ್ರಯುಕ್ತ ಹೊಸ ಬಟ್ಟೆ ಕೊಡಿಸುವಂತೆ ತಾಯಿ ಬಳಿ ಕೇಳಿದ್ದಳು. ಬಟ್ಟೆ ಕೊಡಿಸದ ಕಾರಣ ಮುನಿಸಿಕೊಂಡು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದಳು. ಈ ಸಂದರ್ಭದಲ್ಲಿ ಆ ಬಾಲಕಿಯನ್ನು ಅಪಹರಿಸಿದ ಯುವಕರು ತನಿಮಡುಗು ಗ್ರಾಮದ ಬಾರ್ ಹಿಂಭಾಗದಲ್ಲಿರುವ ಸರ್ವೆ ನಂ 17ರ ಬೀಡು ಜಮೀನಿನಲ್ಲಿ ಬಿಯರ್ ಕುಡಿಸಿ, ಎಗ್ ರೈಸ್ ತಿನ್ನಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಸಂಬಂಧ ದೂರು ದಾಖಲಾಗಿತ್ತು. </p>.<p>ಕಲಂ 363, 376 (ಡಿಎ), 376 (3), 34 ಐಪಿಸಿ ಮತ್ತು ಕಲಂ 6 ಪೋಕ್ಸೊ ಕಾಯ್ದೆ ರೀತಿ ಪ್ರಕರಣ ದಾಖಲಿಸಿಕೊಂಡ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರಂ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಮೂಹಿಕ ಅತ್ಯಾಚಾರವೆಸಗಿರುವುದು ತನಿಖೆಯಿಂದ ಸಾಬೀತಾಗಿದ್ದು, ಸರ್ಕಲ್ ಇನ್ಸ್ಪೆಕ್ಟರ್ ಜೆ.ಎನ್.ಆನಂದ್ ಕುಮಾರ್ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶುಕ್ರವಾರ ಅಪರಾಧಿಗಳಾದ ಆನಂದ್ (ಎ1), ಕಾಂತರಾಜ್ (ಎ2), ಪ್ರವೀಣ್ (ಎ3) ಮತ್ತು ವೇಣು (ಎ4) ಅವರಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ ₹ 25 ಸಾವಿರ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> 14ರ ಹರೆಯದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜಿಲ್ಲೆಯ ಕೆಜಿಎಫ್ ಉಪವಿಭಾಗದ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರಂ ಪೊಲೀಸ್ ಠಾಣೆ ಸರಹದ್ದಿನ ನಾಲ್ವರು ಅಪರಾಧಿಗಳಿಗೆ ಪೋಕ್ಸೊ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. </p>.<p>ಬಂಗಾರಪೇಟೆ ತಾಲ್ಲೂಕಿನ ಹೊಸಕೋಟೆ ಗ್ರಾಮದ ವಾಸಿ ಆನಂದ್, ಕೆಜಿಎಫ್ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಕಾಂತರಾಜ್, ಬಂಗಾರಪೇಟೆ ತಾಲ್ಲೂಕಿನ ಕಾಮಸಮದ್ರಂ ಎ.ಕೆ.ಕಾಲೋನಿ ನಿವಾಸಿ ಪ್ರವೀಣ್ ಮತ್ತು ಬೆಂಗನೂರು ಗ್ರಾಮದ ವೇಣು ಶಿಕ್ಷೆಗೆ ಒಳಗಾದವರು. </p>.<p>2022ರ ಫೆಬ್ರುವರಿ 18ರಂದು ಬಾಲಕಿಯು ತನ್ನ ಜನ್ಮದಿನದ ಪ್ರಯುಕ್ತ ಹೊಸ ಬಟ್ಟೆ ಕೊಡಿಸುವಂತೆ ತಾಯಿ ಬಳಿ ಕೇಳಿದ್ದಳು. ಬಟ್ಟೆ ಕೊಡಿಸದ ಕಾರಣ ಮುನಿಸಿಕೊಂಡು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದಳು. ಈ ಸಂದರ್ಭದಲ್ಲಿ ಆ ಬಾಲಕಿಯನ್ನು ಅಪಹರಿಸಿದ ಯುವಕರು ತನಿಮಡುಗು ಗ್ರಾಮದ ಬಾರ್ ಹಿಂಭಾಗದಲ್ಲಿರುವ ಸರ್ವೆ ನಂ 17ರ ಬೀಡು ಜಮೀನಿನಲ್ಲಿ ಬಿಯರ್ ಕುಡಿಸಿ, ಎಗ್ ರೈಸ್ ತಿನ್ನಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಸಂಬಂಧ ದೂರು ದಾಖಲಾಗಿತ್ತು. </p>.<p>ಕಲಂ 363, 376 (ಡಿಎ), 376 (3), 34 ಐಪಿಸಿ ಮತ್ತು ಕಲಂ 6 ಪೋಕ್ಸೊ ಕಾಯ್ದೆ ರೀತಿ ಪ್ರಕರಣ ದಾಖಲಿಸಿಕೊಂಡ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರಂ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಮೂಹಿಕ ಅತ್ಯಾಚಾರವೆಸಗಿರುವುದು ತನಿಖೆಯಿಂದ ಸಾಬೀತಾಗಿದ್ದು, ಸರ್ಕಲ್ ಇನ್ಸ್ಪೆಕ್ಟರ್ ಜೆ.ಎನ್.ಆನಂದ್ ಕುಮಾರ್ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶುಕ್ರವಾರ ಅಪರಾಧಿಗಳಾದ ಆನಂದ್ (ಎ1), ಕಾಂತರಾಜ್ (ಎ2), ಪ್ರವೀಣ್ (ಎ3) ಮತ್ತು ವೇಣು (ಎ4) ಅವರಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ ₹ 25 ಸಾವಿರ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>