ಕೆಜಿಎಫ್: ಜಿಲ್ಲೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಗಾಂಜಾವನ್ನು ದಾಬಸ್ಪೇಟೆ ಬಳಿಯ ಸೋಂಪುರ ಕೈಗಾರಿಕಾ ಪ್ರಾಂಗಣದ ಕೈಗಾರಿಕೆಯೊಂದರಲ್ಲಿ ಶುಕ್ರವಾರ ವೈಜ್ಞಾನಿಕವಾಗಿ ನಾಶ ಪಡಿಸಲಾಯಿತು.
ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ₹29,65,880 ಮೌಲ್ಯದ 53 ಕೆಜಿ ಗಾಂಜಾವನ್ನು 27 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಅವುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ನಾಶಪಡಿಸಿದರು.
ರಾಬರ್ಟಸನ್ಪೇಟೆ ಸರ್ಕಲ್ ಇನ್ಸ್ಪೆಕ್ಟರ್ ರಾಮಕೃಷ್ಣಯ್ಯ, ಡಿಸಿಆರ್ಬಿ ಇನ್ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.