<p>ಕೋಲಾರ: ತಡೆಗೋಡೆ ಹಾಗೂ ಸರಿಯಾದ ಸೂಚನಾ ಫಲಕವಿಲ್ಲದೆ ಮುದುವಾಡಿ ಕೆರೆಗೆ ಕಾರು ಬಿದ್ದು ಸಂಭವಿಸಿದ ಅಪಘಾತದಲ್ಲಿ ಮೃತರಾದ ಸಿಪಿಎಂ ಹಾಗೂ ರೈತ ಮುಖಂಡ ಟಿ.ಎಂ.ವೆಂಕಟೇಶ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಿಕೊಡುವಂತೆ ಕುಟುಂಬದವರು ಗುರುವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರಿಗೆ ಮನವಿ ಮಾಡಿದರು,</p>.<p>ಪತ್ನಿ ಮುನಿರತ್ನಮ್ಮ ಮಾತನಾಡಿ, ‘ತಾಲ್ಲೂಕಿನ ವ್ಯಾಪ್ತಿಯ ಈ ರಸ್ತೆಯು ರಾಜ್ಯ ಹೆದ್ದಾರಿಯಾಗಿದ್ದು, ರಸ್ತೆ ವಿಸ್ತೀರ್ಣ ಮಾಡಿಲ್ಲ. ಕೆರೆಗೆ ತಡೆಗೋಡೆಯನ್ನೂ ನಿರ್ಮಿಸಿಲ್ಲ. ಹೆಚ್ಚು ವಾಹನಗಳು ಸಂಚಾರವಿರುವ ರಸ್ತೆಯಾಗಿದ್ದು, ಈ ಭಾಗದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪದ ವ್ಯವಸ್ಥೆಯೂ ಇಲ್ಲ. ಈ ಕಾರಣ ಅಪಘಾತ ನಡೆದ ಪತಿ ಮೃತಪಟ್ಟಿದ್ದಾರೆ’ ಎಂದರು.</p>.<p>ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ದಯಮಾಡಿ ನನ್ನ ಪತಿಗೆ ಜಿಲ್ಲಾಡಳಿತದಿಂದ ಹಾಗೂ ರಾಜ್ಯ ಸರ್ಕಾರದಿಂದ ಮಾನವೀಯತೆ ದೃಷ್ಟಿಯಿಂದ ಪರಿಹಾರ ಕೊಡಿಸಿಕೊಡಬೇಕೆಂದು ಕೋರಿದರು.</p>.<p>ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜನವಾದಿ ಮಹಿಳಾ ಸಂಘಟನೆಯ ವಿ.ಗೀತಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲ್ಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ವೆಂಕಟೇಶ್ ಅವರ ಪುತ್ರ ಯಶವಂತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-1913284801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ತಡೆಗೋಡೆ ಹಾಗೂ ಸರಿಯಾದ ಸೂಚನಾ ಫಲಕವಿಲ್ಲದೆ ಮುದುವಾಡಿ ಕೆರೆಗೆ ಕಾರು ಬಿದ್ದು ಸಂಭವಿಸಿದ ಅಪಘಾತದಲ್ಲಿ ಮೃತರಾದ ಸಿಪಿಎಂ ಹಾಗೂ ರೈತ ಮುಖಂಡ ಟಿ.ಎಂ.ವೆಂಕಟೇಶ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಿಕೊಡುವಂತೆ ಕುಟುಂಬದವರು ಗುರುವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರಿಗೆ ಮನವಿ ಮಾಡಿದರು,</p>.<p>ಪತ್ನಿ ಮುನಿರತ್ನಮ್ಮ ಮಾತನಾಡಿ, ‘ತಾಲ್ಲೂಕಿನ ವ್ಯಾಪ್ತಿಯ ಈ ರಸ್ತೆಯು ರಾಜ್ಯ ಹೆದ್ದಾರಿಯಾಗಿದ್ದು, ರಸ್ತೆ ವಿಸ್ತೀರ್ಣ ಮಾಡಿಲ್ಲ. ಕೆರೆಗೆ ತಡೆಗೋಡೆಯನ್ನೂ ನಿರ್ಮಿಸಿಲ್ಲ. ಹೆಚ್ಚು ವಾಹನಗಳು ಸಂಚಾರವಿರುವ ರಸ್ತೆಯಾಗಿದ್ದು, ಈ ಭಾಗದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪದ ವ್ಯವಸ್ಥೆಯೂ ಇಲ್ಲ. ಈ ಕಾರಣ ಅಪಘಾತ ನಡೆದ ಪತಿ ಮೃತಪಟ್ಟಿದ್ದಾರೆ’ ಎಂದರು.</p>.<p>ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ದಯಮಾಡಿ ನನ್ನ ಪತಿಗೆ ಜಿಲ್ಲಾಡಳಿತದಿಂದ ಹಾಗೂ ರಾಜ್ಯ ಸರ್ಕಾರದಿಂದ ಮಾನವೀಯತೆ ದೃಷ್ಟಿಯಿಂದ ಪರಿಹಾರ ಕೊಡಿಸಿಕೊಡಬೇಕೆಂದು ಕೋರಿದರು.</p>.<p>ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜನವಾದಿ ಮಹಿಳಾ ಸಂಘಟನೆಯ ವಿ.ಗೀತಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲ್ಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ವೆಂಕಟೇಶ್ ಅವರ ಪುತ್ರ ಯಶವಂತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-1913284801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>