<p><strong>ಕೋಲಾರ</strong>: ಒಂದು ವಾರದೊಳಗೆ ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ಅಳವಡಿಸದಿದ್ದರೆ ಅಂತಹ ಹೊಂಡಗಳನ್ನು ಸರ್ಕಾರದಿಂದಲೇ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಕೃಷಿಕರ ಪಾಲಿಗೆ ವರದಾನವಾಗುವ ಬದಲು ಸಾವಿನ ಕೂಪಗಳಾಗಿ ಪರಿಣಮಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಜಿಲ್ಲೆಯ ಎಲ್ಲಾ ರೈತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಮಕ್ಕಳು ಆಟವಾಡುವಾಗ ಅಥವಾ ಈಜಲು ಹೋಗಿ ಕೃಷಿ ಹೊಂಡಗಳಲ್ಲಿ ಮುಳುಗಿ ಮೃತಪಡುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ.</p>.<p>ರೈತರ ಅಭಿವೃದ್ಧಿಗಾಗಿ ಸರ್ಕಾರ ಕೃಷಿ ಹೊಂಡ ನಿರ್ಮಿಸಿಕೊಡುತ್ತಿದೆ. ಆದರೆ, ಕನಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಮಾಯಕ ಮಕ್ಕಳ ಸಾವಿಗೆ ಕಾರಣವಾಗುವುದು ಅಕ್ಷಮ್ಯ ಅಪರಾಧ. ಕೃಷಿ ಹೊಂಡ ನಿರ್ಮಿಸಿದ ರೈತರು ಅದರ ಸುತ್ತ ಬೇಲಿ ಹಾಕುವುದು ಆದ್ಯ ಕರ್ತವ್ಯ ಎಂದಿದ್ದಾರೆ.</p>.<p>ಯಾವ ರೈತರು ಮುಂದಿನ 7 ದಿನಗಳ ಒಳಗಾಗಿ ತಮ್ಮ ಕೃಷಿ ಹೊಂಡಕ್ಕೆ ತಂತಿ ಬೇಲಿ ಅಥವಾ ರಕ್ಷಣಾ ಗೋಡೆ ನಿರ್ಮಿಸುವುದಿಲ್ಲವೋ, ಅಂತಹ ಹೊಂಡಗಳನ್ನು ಕೃಷಿ ಇಲಾಖೆಯ ಮೂಲಕ ಮುಲಾಜಿಲ್ಲದೆ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರತಿ ಗ್ರಾಮ ಮಟ್ಟದಲ್ಲಿ ಕೃಷಿ ಅಧಿಕಾರಿಗಳು ಹೊಂಡಗಳ ಪರಿಶೀಲನೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೇವಲ ಬೇಲಿ ಮಾತ್ರವಲ್ಲದೇ; ಹೊಂಡಕ್ಕೆ ಇಳಿಯದಂತೆ ಎಚ್ಚರಿಕೆ ಫಲಕಗಳನ್ನು ಹಾಕಬೇಕು. ಹೊಂಡದ ಪ್ಲಾಸ್ಟಿಕ್ ಶೀಟ್ ಜಾರುವಂತಿರುವುದರಿಂದ ಯಾರೂ ಅದರಲ್ಲಿ ಇಳಿಯದಂತೆ ಹೆಚ್ಚು ಜಾಗರೂಕತೆ ವಹಿಸಬೇಕು ಎಂದೂ ಹೇಳಿದ್ದಾರೆ.</p>.<p>ಜಿಲ್ಲಾಡಳಿತವು ಕೃಷಿ ಚಟುವಟಿಕೆಗಳಿಗೆ ಸರ್ವ ರೀತಿಯ ಸಹಕಾರ ನೀಡಲಿದೆ. ಆದರೆ ಸಾರ್ವಜನಿಕರ, ವಿಶೇಷವಾಗಿ ಮಕ್ಕಳ ಪ್ರಾಣದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಅಸುರಕ್ಷಿತ ಕೃಷಿ ಹೊಂಡಗಳ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಕ್ರಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-1708130150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಒಂದು ವಾರದೊಳಗೆ ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ಅಳವಡಿಸದಿದ್ದರೆ ಅಂತಹ ಹೊಂಡಗಳನ್ನು ಸರ್ಕಾರದಿಂದಲೇ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಕೃಷಿಕರ ಪಾಲಿಗೆ ವರದಾನವಾಗುವ ಬದಲು ಸಾವಿನ ಕೂಪಗಳಾಗಿ ಪರಿಣಮಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಜಿಲ್ಲೆಯ ಎಲ್ಲಾ ರೈತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಮಕ್ಕಳು ಆಟವಾಡುವಾಗ ಅಥವಾ ಈಜಲು ಹೋಗಿ ಕೃಷಿ ಹೊಂಡಗಳಲ್ಲಿ ಮುಳುಗಿ ಮೃತಪಡುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ.</p>.<p>ರೈತರ ಅಭಿವೃದ್ಧಿಗಾಗಿ ಸರ್ಕಾರ ಕೃಷಿ ಹೊಂಡ ನಿರ್ಮಿಸಿಕೊಡುತ್ತಿದೆ. ಆದರೆ, ಕನಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಮಾಯಕ ಮಕ್ಕಳ ಸಾವಿಗೆ ಕಾರಣವಾಗುವುದು ಅಕ್ಷಮ್ಯ ಅಪರಾಧ. ಕೃಷಿ ಹೊಂಡ ನಿರ್ಮಿಸಿದ ರೈತರು ಅದರ ಸುತ್ತ ಬೇಲಿ ಹಾಕುವುದು ಆದ್ಯ ಕರ್ತವ್ಯ ಎಂದಿದ್ದಾರೆ.</p>.<p>ಯಾವ ರೈತರು ಮುಂದಿನ 7 ದಿನಗಳ ಒಳಗಾಗಿ ತಮ್ಮ ಕೃಷಿ ಹೊಂಡಕ್ಕೆ ತಂತಿ ಬೇಲಿ ಅಥವಾ ರಕ್ಷಣಾ ಗೋಡೆ ನಿರ್ಮಿಸುವುದಿಲ್ಲವೋ, ಅಂತಹ ಹೊಂಡಗಳನ್ನು ಕೃಷಿ ಇಲಾಖೆಯ ಮೂಲಕ ಮುಲಾಜಿಲ್ಲದೆ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರತಿ ಗ್ರಾಮ ಮಟ್ಟದಲ್ಲಿ ಕೃಷಿ ಅಧಿಕಾರಿಗಳು ಹೊಂಡಗಳ ಪರಿಶೀಲನೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೇವಲ ಬೇಲಿ ಮಾತ್ರವಲ್ಲದೇ; ಹೊಂಡಕ್ಕೆ ಇಳಿಯದಂತೆ ಎಚ್ಚರಿಕೆ ಫಲಕಗಳನ್ನು ಹಾಕಬೇಕು. ಹೊಂಡದ ಪ್ಲಾಸ್ಟಿಕ್ ಶೀಟ್ ಜಾರುವಂತಿರುವುದರಿಂದ ಯಾರೂ ಅದರಲ್ಲಿ ಇಳಿಯದಂತೆ ಹೆಚ್ಚು ಜಾಗರೂಕತೆ ವಹಿಸಬೇಕು ಎಂದೂ ಹೇಳಿದ್ದಾರೆ.</p>.<p>ಜಿಲ್ಲಾಡಳಿತವು ಕೃಷಿ ಚಟುವಟಿಕೆಗಳಿಗೆ ಸರ್ವ ರೀತಿಯ ಸಹಕಾರ ನೀಡಲಿದೆ. ಆದರೆ ಸಾರ್ವಜನಿಕರ, ವಿಶೇಷವಾಗಿ ಮಕ್ಕಳ ಪ್ರಾಣದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಅಸುರಕ್ಷಿತ ಕೃಷಿ ಹೊಂಡಗಳ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಕ್ರಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-1708130150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>