<p>ಶ್ರೀನಿವಾಸಪುರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಉದ್ವಿಗ್ನ ವಾತಾವರಣ ಉಂಟಾಯಿತು.</p>.<p>ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಗೆ ಹಾಜರಾಗಬೇಕಾದ ಅಧಿಕಾರಿಗಳು ಗೈರಾಗುವ ಮೂಲಕ ನಿರ್ಲಕ್ಷ್ಯತೆ ವಹಿಸಿದ್ದಾರೆ ಎಂದು ದಲಿತ ಮುಖಂಡ ತಿಮ್ಮರಾಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ಹಾಜರಾಗದೆ, ಬೇಜವಾಬ್ದಾರಿ ಪ್ರದರ್ಶಿಸುತ್ತದ್ದಾರೆ. ಪ್ರತಿ ವರ್ಷವೂ ಅಂಬೇಡ್ಕರ್ ಜಯಂತಿ ಪೂರ್ವಸಭೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯತೆ ವಹಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಮುಖಂಡರು ಆರೋಪಿಸಿದರು.</p>.<p>ಸಭೆಗಳನ್ನು ಕೇವಲ ರೂಪಕದಂತೆ ನಡೆಸಲಾಗುತ್ತಿದೆ. ಯಾವುದೇ ಸ್ಪಷ್ಟ ಯೋಜನೆಗಳಿಲ್ಲದೆ, ಕಾರ್ಯಕ್ರಮದ ಸಿದ್ಧತೆಗಳಲ್ಲಿ ಗೊಂದಲ ಉಂಟಾಗಿದೆ ಎಂದರು.</p>.<p>ಕಾರ್ಯಕ್ರಮಕ್ಕೆ ಅಗತ್ಯ ಮೂಲ ವ್ಯವಸ್ಥೆ, ವೇದಿಕೆ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸೇರಿದಂತೆ ಹಲವು ಸೌಲಭ್ಯಗಳ ಬಗ್ಗೆ ಯಾವುದೇ ಸಮರ್ಪಕ ಯೋಜನೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಜಯಂತಿ ಸಮೀಪಿಸುತ್ತಿದ್ದರೂ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿಲ್ಲ ಎಂದು ದೂರಿದರು.</p>.<p>ತಹಶೀಲ್ದಾರ್ ಸುಧೀಂದ್ರ ಮಾತನಾಡಿ, ಅಂಬೇಡ್ಕರ್ ಜಯಂತಿಯನ್ನು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಈ ಸಭೆಯಲ್ಲಿ ಇ.ಒ ಸರ್ವೇಶ್, ತಾಲ್ಲೂಕು ಇಲಾಖೆಯ ಅಧಿಕಾರಿಗಳು, ಉಪ್ಪರಪಲ್ಲಿ ತಿಮ್ಮರಾಯಪ್ಪ, ಚಲ್ದಿಗಾನಹಳ್ಳಿ ನರಸಿಂಹಯ್ಯ, ಕಲ್ಲೂರು ವೆಂಕಟೇಶ್, ಆವಲಕುಪ್ಪ ಹನುಮಂತಪ್ಪ, ಆರ್.ವಿ.ನರಸಿಂಹ, ರಾಮಂಜಮ್ಮ, ಹೆಬ್ಬಟ ಆನಂದ, ಗಾಡ್ಲಹಳ್ಳಿ ಚಲಪತಿ, ಶ್ರೀನಿವಾಸ, ಮುನಿವೆಂಕಟಪ್ಪ ಉಪಸ್ಥತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-18-1487623496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಉದ್ವಿಗ್ನ ವಾತಾವರಣ ಉಂಟಾಯಿತು.</p>.<p>ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಗೆ ಹಾಜರಾಗಬೇಕಾದ ಅಧಿಕಾರಿಗಳು ಗೈರಾಗುವ ಮೂಲಕ ನಿರ್ಲಕ್ಷ್ಯತೆ ವಹಿಸಿದ್ದಾರೆ ಎಂದು ದಲಿತ ಮುಖಂಡ ತಿಮ್ಮರಾಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ಹಾಜರಾಗದೆ, ಬೇಜವಾಬ್ದಾರಿ ಪ್ರದರ್ಶಿಸುತ್ತದ್ದಾರೆ. ಪ್ರತಿ ವರ್ಷವೂ ಅಂಬೇಡ್ಕರ್ ಜಯಂತಿ ಪೂರ್ವಸಭೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯತೆ ವಹಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಮುಖಂಡರು ಆರೋಪಿಸಿದರು.</p>.<p>ಸಭೆಗಳನ್ನು ಕೇವಲ ರೂಪಕದಂತೆ ನಡೆಸಲಾಗುತ್ತಿದೆ. ಯಾವುದೇ ಸ್ಪಷ್ಟ ಯೋಜನೆಗಳಿಲ್ಲದೆ, ಕಾರ್ಯಕ್ರಮದ ಸಿದ್ಧತೆಗಳಲ್ಲಿ ಗೊಂದಲ ಉಂಟಾಗಿದೆ ಎಂದರು.</p>.<p>ಕಾರ್ಯಕ್ರಮಕ್ಕೆ ಅಗತ್ಯ ಮೂಲ ವ್ಯವಸ್ಥೆ, ವೇದಿಕೆ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸೇರಿದಂತೆ ಹಲವು ಸೌಲಭ್ಯಗಳ ಬಗ್ಗೆ ಯಾವುದೇ ಸಮರ್ಪಕ ಯೋಜನೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಜಯಂತಿ ಸಮೀಪಿಸುತ್ತಿದ್ದರೂ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿಲ್ಲ ಎಂದು ದೂರಿದರು.</p>.<p>ತಹಶೀಲ್ದಾರ್ ಸುಧೀಂದ್ರ ಮಾತನಾಡಿ, ಅಂಬೇಡ್ಕರ್ ಜಯಂತಿಯನ್ನು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಈ ಸಭೆಯಲ್ಲಿ ಇ.ಒ ಸರ್ವೇಶ್, ತಾಲ್ಲೂಕು ಇಲಾಖೆಯ ಅಧಿಕಾರಿಗಳು, ಉಪ್ಪರಪಲ್ಲಿ ತಿಮ್ಮರಾಯಪ್ಪ, ಚಲ್ದಿಗಾನಹಳ್ಳಿ ನರಸಿಂಹಯ್ಯ, ಕಲ್ಲೂರು ವೆಂಕಟೇಶ್, ಆವಲಕುಪ್ಪ ಹನುಮಂತಪ್ಪ, ಆರ್.ವಿ.ನರಸಿಂಹ, ರಾಮಂಜಮ್ಮ, ಹೆಬ್ಬಟ ಆನಂದ, ಗಾಡ್ಲಹಳ್ಳಿ ಚಲಪತಿ, ಶ್ರೀನಿವಾಸ, ಮುನಿವೆಂಕಟಪ್ಪ ಉಪಸ್ಥತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-18-1487623496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>