ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಚಿತ್ರಕ್ಕೆ ಮಸಿ: ಗ್ರಾಮ ಪ್ರಕ್ಷುಬ್ಧ

Last Updated 16 ಏಪ್ರಿಲ್ 2023, 17:52 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿ‌ನ ನರಸಾಪುರ ಹೋಬಳಿಯ ದಿನ್ನೆ ಹೊಸಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರವಿದ್ದ ಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಫಲಕವನ್ನು ಬಟ್ಟೆಯಲ್ಲಿ ಮುಚ್ಚಲಾಗಿದೆ.

ಭಾನುವಾರ ವೇಮಗಲ್ ಠಾಣೆಗೆ ಧಾವಿಸಿದ ಗ್ರಾಮಸ್ಥರು, ದಲಿತ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು,
ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ನಂತರ ದೂರು ಸಲ್ಲಿಸಿದರು.

‘ಕಿಡಿಗೇಡಿಗಳು ಯಾರೇ ಆಗಿರಲಿ ಹಳ್ಳಿಗಳಲ್ಲಿ ನೆಲೆಸಿರುವ ಶಾಂತಿ ಸುವ್ಯವಸ್ಥೆ ಹಾಳು ಮಾಡುವವರನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು. ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮು ಶಿವಣ್ಣ, ದಲಿತ ಸಂಘರ್ಷ ಸಮಿತಿಯ ಮೇಡಿಯಾಳ ಮುನಿ ಆಂಜಿನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT