<p><strong>ಬಂಗಾರಪೇಟೆ:</strong> ತಾಲ್ಲೂಕಿನ ತ್ಯಾರನಹಳ್ಳಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಬೀರೇಶ್ವರ ದೇವಾಲಯದ ವಿಗ್ರಹಗಳ ಪುನರ್ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವು ವೈಭವ ಹಾಗೂ ಭಕ್ತಿಪೂರ್ವಕವಾಗಿ ಗುರುವಾರ ಜರುಗಿತು.</p>.<p>ಊಸರಳ್ಳಿ ಮಠದ ರೇವಣಾರಾಧ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿರೇಶ್ವರ, ಪಾರ್ವತಾಂಬೆ, ಮಹಾಗಣಪತಿ ಹಾಗೂ ಬಸವೇಶ್ವರ ಸ್ವಾಮಿಯ ನೂತನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನ ನಡೆದ ಈ ಧಾರ್ಮಿಕ ಕಾರ್ಯದಲ್ಲಿ ಆಗಮಿಕರು ವೇದಘೋಷ ಹಾಗೂ ಮಂತ್ರೋಚ್ಛಾರಗಳ ಮೂಲಕ ಹೋಮ-ಹವನಗಳನ್ನು ನೆರವೇರಿಸಿದರು.</p>.<p>ಸಿದ್ದೇಶ್ವರ, ಬೀರೇಶ್ವರ ಮತ್ತು ವೀರ ಮುದ್ದಮ್ಮ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಾಲುಮತ (ಕುರುಬ) ಸಮುದಾಯದ ನೂರಾರು ಭಕ್ತರು ಪಾಲ್ಗೊಂಡಿದ್ದರು. ವಿಶೇಷವಾಗಿ ಹತ್ತಾರು ದಂಪತಿಗಳು ಹೋಮ-ಹವನಗಳಲ್ಲಿ ಪಾಲ್ಗೊಂಡರು.</p>.<p>ಟ್ರಸ್ಟ್ನ ಪ್ರಮುಖ ಮುಖಂಡರು, ಕೋಲಕಾರರು, ಕಂಬಿ ಯಜಮಾನರು ಹಾಗೂ ಗ್ರಾಮದ ಸಮಸ್ತ ಮುಖಂಡರ ನೇತೃತ್ವದಲ್ಲಿ ಇಡೀ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1918688107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ತ್ಯಾರನಹಳ್ಳಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಬೀರೇಶ್ವರ ದೇವಾಲಯದ ವಿಗ್ರಹಗಳ ಪುನರ್ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವು ವೈಭವ ಹಾಗೂ ಭಕ್ತಿಪೂರ್ವಕವಾಗಿ ಗುರುವಾರ ಜರುಗಿತು.</p>.<p>ಊಸರಳ್ಳಿ ಮಠದ ರೇವಣಾರಾಧ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿರೇಶ್ವರ, ಪಾರ್ವತಾಂಬೆ, ಮಹಾಗಣಪತಿ ಹಾಗೂ ಬಸವೇಶ್ವರ ಸ್ವಾಮಿಯ ನೂತನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನ ನಡೆದ ಈ ಧಾರ್ಮಿಕ ಕಾರ್ಯದಲ್ಲಿ ಆಗಮಿಕರು ವೇದಘೋಷ ಹಾಗೂ ಮಂತ್ರೋಚ್ಛಾರಗಳ ಮೂಲಕ ಹೋಮ-ಹವನಗಳನ್ನು ನೆರವೇರಿಸಿದರು.</p>.<p>ಸಿದ್ದೇಶ್ವರ, ಬೀರೇಶ್ವರ ಮತ್ತು ವೀರ ಮುದ್ದಮ್ಮ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಾಲುಮತ (ಕುರುಬ) ಸಮುದಾಯದ ನೂರಾರು ಭಕ್ತರು ಪಾಲ್ಗೊಂಡಿದ್ದರು. ವಿಶೇಷವಾಗಿ ಹತ್ತಾರು ದಂಪತಿಗಳು ಹೋಮ-ಹವನಗಳಲ್ಲಿ ಪಾಲ್ಗೊಂಡರು.</p>.<p>ಟ್ರಸ್ಟ್ನ ಪ್ರಮುಖ ಮುಖಂಡರು, ಕೋಲಕಾರರು, ಕಂಬಿ ಯಜಮಾನರು ಹಾಗೂ ಗ್ರಾಮದ ಸಮಸ್ತ ಮುಖಂಡರ ನೇತೃತ್ವದಲ್ಲಿ ಇಡೀ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1918688107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>