<p>ಬಂಗಾರಪೇಟೆ: ತಾಲ್ಲೂಕಿನ ವಡಿಗೇರಿ ರೈತರೊಬ್ಬರ ಜಮೀನಿನ ಹದ್ದುಬಸ್ತು ಮಾಡಿಕೊಡುವಲ್ಲಿ ಭೂಮಾಪನ ಇಲಾಖೆ ಅಧಿಕಾರಿಗಳ ವಿಳಂಬ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದ ಆದೇಶವಿದ್ದರೂ ಗಡಿ ಗುರುತಿಸಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ನಡೆ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ವಡಿಗೇರಿ ಗ್ರಾಮದ ನಂಜಪ್ಪ ಅವರು ಸುಮಾರು 14 ವರ್ಷಗಳ ಹಿಂದೆ ಮುನಿರಾಜು ಎಂಬುವವರಿಂದ ಸರ್ವೆ ನಂಬರ್ 152/2ರಲ್ಲಿ 4 ಬೆಳ್ಳಿ 35 ಗುಂಟೆ ಜಮೀನನ್ನು ಜಿಪಿಎ ಮೂಲಕ ನೋಂದಣಿ ಮಾಡಿಸಿಕೊಂಡಿದ್ದರು. ಅಂದಿನಿಂದಲೂ ಅವರೇ ಜಮೀನಿನ ಸ್ವಾಧೀನದಲ್ಲಿದ್ದು, ಬೆಳೆ ಬೆಳೆಯುತ್ತಿದ್ದಾರೆ. ಆದರೆ, ಮೂಲ ಕುಟುಂಬದವರು ಈ ಜಮೀನು ತಮಗೆ ಸೇರಿದ್ದೆಂದು ತಹಶೀಲ್ದಾರ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.</p>.<p>ಸುದೀರ್ಘ ಕಾನೂನು ಹೋರಾಟದ ಬಳಿಕ ಉಪ ವಿಭಾಗಾಧಿಕಾರಿ ನ್ಯಾಯಾಲಯವು ಜಮೀನಿನ ದಾಖಲೆಗಳನ್ನು ಪರಿಶೀಲಿಸಿ ಸದರಿ ಜಮೀನು ನಂಜಪ್ಪ ಅವರಿಗೆ ಸೇರಿದ್ದೆಂದು ಅಂತಿಮ ಆದೇಶ ಹೊರಡಿಸಿದೆ. ಪ್ರಸ್ತುತ ನಂಜಪ್ಪ ಅವರ ಹೆಸರಿನಲ್ಲಿ 11ಇ ಸ್ಕೆಚ್, ಪಹಣಿ, ಪಟ್ಟಾ ಸೇರಿದಂತೆ ಎಲ್ಲ ಅಧಿಕೃತ ದಾಖಲೆಗಳಿವೆ.</p>.<p>ನ್ಯಾಯಾಲಯದ ಆದೇಶ ಮತ್ತು ದಾಖಲೆಗಳಿದ್ದರೂ ಭೂಮಾಪನ ಇಲಾಖೆ ಅಧಿಕಾರಿಗಳು ಜಮೀನಿನ ಹದ್ದುಬಸ್ತು ಮಾಡಿಕೊಡಲು ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಪದೇ ಪದೇ ದಿನಾಂಕಗಳನ್ನು ಮುಂದೂಡುತ್ತಿರುವುದು ಶಂಕೆಗೆ ಎಡೆಮಾಡಿಕೊಟ್ಟಿದೆ ಎಂದು ಸಂತ್ರಸ್ತರು ದೂರಿದ್ದಾರೆ.</p>.<p>‘ಒಂದು ಕಡೆ ದೌರ್ಜನ್ಯ. ಇನ್ನೊಂದು ಕಡೆ ಅಧಿಕಾರಿಗಳ ಅಸಡ್ಡೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ನನಗೆ ನ್ಯಾಯ ಸಿಗದಿದ್ದರೆ ದಯಾಮರಣ ಕೊಡಿ’ ಎಂದು ನಂಜಪ್ಪ ಅಳಲು ತೋಡಿಕೊಂಡಿದ್ದಾರೆ.</p>.<p>ರಿಪಬ್ಲಿಕನ್ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಚಿಕ್ಕನಾರಾಯಣ ಮಾತನಾಡಿ, ‘ಅಧಿಕಾರಿಗಳ ಈ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಗಲಭೆಯಾಗುವ ಸಾಧ್ಯತೆಯಿದೆ. ಕೂಡಲೇ ಎಡಿಎಲ್ಆರ್ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಹದ್ದುಬಸ್ತು ಮಾಡಿಕೊಡಬೇಕು. ತಪ್ಪಿದಲ್ಲಿ ತಾಲ್ಲೂಕು ಆಡಳಿತ ಕಚೇರಿಯ ಮುಂದೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಅಮರೇಶ್, ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ, ತಾಲ್ಲೂಕು ಮುಖಂಡ ತಿಪ್ಪರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-18-1374141336</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ವಡಿಗೇರಿ ರೈತರೊಬ್ಬರ ಜಮೀನಿನ ಹದ್ದುಬಸ್ತು ಮಾಡಿಕೊಡುವಲ್ಲಿ ಭೂಮಾಪನ ಇಲಾಖೆ ಅಧಿಕಾರಿಗಳ ವಿಳಂಬ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದ ಆದೇಶವಿದ್ದರೂ ಗಡಿ ಗುರುತಿಸಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ನಡೆ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ವಡಿಗೇರಿ ಗ್ರಾಮದ ನಂಜಪ್ಪ ಅವರು ಸುಮಾರು 14 ವರ್ಷಗಳ ಹಿಂದೆ ಮುನಿರಾಜು ಎಂಬುವವರಿಂದ ಸರ್ವೆ ನಂಬರ್ 152/2ರಲ್ಲಿ 4 ಬೆಳ್ಳಿ 35 ಗುಂಟೆ ಜಮೀನನ್ನು ಜಿಪಿಎ ಮೂಲಕ ನೋಂದಣಿ ಮಾಡಿಸಿಕೊಂಡಿದ್ದರು. ಅಂದಿನಿಂದಲೂ ಅವರೇ ಜಮೀನಿನ ಸ್ವಾಧೀನದಲ್ಲಿದ್ದು, ಬೆಳೆ ಬೆಳೆಯುತ್ತಿದ್ದಾರೆ. ಆದರೆ, ಮೂಲ ಕುಟುಂಬದವರು ಈ ಜಮೀನು ತಮಗೆ ಸೇರಿದ್ದೆಂದು ತಹಶೀಲ್ದಾರ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.</p>.<p>ಸುದೀರ್ಘ ಕಾನೂನು ಹೋರಾಟದ ಬಳಿಕ ಉಪ ವಿಭಾಗಾಧಿಕಾರಿ ನ್ಯಾಯಾಲಯವು ಜಮೀನಿನ ದಾಖಲೆಗಳನ್ನು ಪರಿಶೀಲಿಸಿ ಸದರಿ ಜಮೀನು ನಂಜಪ್ಪ ಅವರಿಗೆ ಸೇರಿದ್ದೆಂದು ಅಂತಿಮ ಆದೇಶ ಹೊರಡಿಸಿದೆ. ಪ್ರಸ್ತುತ ನಂಜಪ್ಪ ಅವರ ಹೆಸರಿನಲ್ಲಿ 11ಇ ಸ್ಕೆಚ್, ಪಹಣಿ, ಪಟ್ಟಾ ಸೇರಿದಂತೆ ಎಲ್ಲ ಅಧಿಕೃತ ದಾಖಲೆಗಳಿವೆ.</p>.<p>ನ್ಯಾಯಾಲಯದ ಆದೇಶ ಮತ್ತು ದಾಖಲೆಗಳಿದ್ದರೂ ಭೂಮಾಪನ ಇಲಾಖೆ ಅಧಿಕಾರಿಗಳು ಜಮೀನಿನ ಹದ್ದುಬಸ್ತು ಮಾಡಿಕೊಡಲು ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಪದೇ ಪದೇ ದಿನಾಂಕಗಳನ್ನು ಮುಂದೂಡುತ್ತಿರುವುದು ಶಂಕೆಗೆ ಎಡೆಮಾಡಿಕೊಟ್ಟಿದೆ ಎಂದು ಸಂತ್ರಸ್ತರು ದೂರಿದ್ದಾರೆ.</p>.<p>‘ಒಂದು ಕಡೆ ದೌರ್ಜನ್ಯ. ಇನ್ನೊಂದು ಕಡೆ ಅಧಿಕಾರಿಗಳ ಅಸಡ್ಡೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ನನಗೆ ನ್ಯಾಯ ಸಿಗದಿದ್ದರೆ ದಯಾಮರಣ ಕೊಡಿ’ ಎಂದು ನಂಜಪ್ಪ ಅಳಲು ತೋಡಿಕೊಂಡಿದ್ದಾರೆ.</p>.<p>ರಿಪಬ್ಲಿಕನ್ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಚಿಕ್ಕನಾರಾಯಣ ಮಾತನಾಡಿ, ‘ಅಧಿಕಾರಿಗಳ ಈ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಗಲಭೆಯಾಗುವ ಸಾಧ್ಯತೆಯಿದೆ. ಕೂಡಲೇ ಎಡಿಎಲ್ಆರ್ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಹದ್ದುಬಸ್ತು ಮಾಡಿಕೊಡಬೇಕು. ತಪ್ಪಿದಲ್ಲಿ ತಾಲ್ಲೂಕು ಆಡಳಿತ ಕಚೇರಿಯ ಮುಂದೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಅಮರೇಶ್, ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ, ತಾಲ್ಲೂಕು ಮುಖಂಡ ತಿಪ್ಪರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-18-1374141336</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>