<p>ಬಂಗಾರಪೇಟೆ: ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಪಲಮಡಗು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಿಯಮ್ಮ ದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಗುರುವಾರ ಅತ್ಯಂತ ಸಂಭ್ರಮದಿಂದ ಜರುಗಿತು.</p>.<p>ಗ್ರಾಮದ ದೇವಸ್ಥಾನದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಪ್ರತಿಷ್ಠಾಪನಾ ಅಂಗವಾಗಿ ಎರಡು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.</p>.<p>ದೇವಸ್ಥಾನವನ್ನು ವಿವಿಧ ಹೂ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ದೇವಿ ಉತ್ಸವ ಮೂರ್ತಿ ಮೆರವಣಿಗೆ ಉದ್ದಕ್ಕೂ ಮೇಳ, ಕರಗ ನೃತ್ಯ ಮತ್ತು ಮಂಗಳವಾದ್ಯಗಳು ಭಕ್ತರ ಗಮನ ಸೆಳೆದವು. ಗ್ರಾಮದ ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು.</p>.<p>ಭಕ್ತರಿಗೆ ಅನ್ನಸಂರ್ತಪಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಪುರಸಭೆ ಮಾಜಿ ಸದಸ್ಯ ಕಪಾಲಿ ಶಂಕರ್, ಹರ್ಷ ಎಸ್.ಮುನಿಸ್ವಾಮಿ, ಬೋಪ್ಪನಹಳ್ಳಿ ನಾರಾಯಣಪ್ಪ, ಮುರುಗೇಶ್, ಚೆನ್ನಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-18-677039232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಪಲಮಡಗು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಿಯಮ್ಮ ದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಗುರುವಾರ ಅತ್ಯಂತ ಸಂಭ್ರಮದಿಂದ ಜರುಗಿತು.</p>.<p>ಗ್ರಾಮದ ದೇವಸ್ಥಾನದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಪ್ರತಿಷ್ಠಾಪನಾ ಅಂಗವಾಗಿ ಎರಡು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.</p>.<p>ದೇವಸ್ಥಾನವನ್ನು ವಿವಿಧ ಹೂ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ದೇವಿ ಉತ್ಸವ ಮೂರ್ತಿ ಮೆರವಣಿಗೆ ಉದ್ದಕ್ಕೂ ಮೇಳ, ಕರಗ ನೃತ್ಯ ಮತ್ತು ಮಂಗಳವಾದ್ಯಗಳು ಭಕ್ತರ ಗಮನ ಸೆಳೆದವು. ಗ್ರಾಮದ ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು.</p>.<p>ಭಕ್ತರಿಗೆ ಅನ್ನಸಂರ್ತಪಣೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಪುರಸಭೆ ಮಾಜಿ ಸದಸ್ಯ ಕಪಾಲಿ ಶಂಕರ್, ಹರ್ಷ ಎಸ್.ಮುನಿಸ್ವಾಮಿ, ಬೋಪ್ಪನಹಳ್ಳಿ ನಾರಾಯಣಪ್ಪ, ಮುರುಗೇಶ್, ಚೆನ್ನಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-18-677039232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>