<p><strong>ಬಂಗಾರಪೇಟೆ: ಪ</strong>ಟ್ಟಣದ ಗಂಗಮ್ಮನಪಾಳ್ಯದ ಚಂದ್ರಾರೆಡ್ಡಿ ಲೇಔಟ್ನಲ್ಲಿರುವ ಖಾಲಿ ಜಾಗದಲ್ಲಿ ಕ್ರಿಕೆಟ್ ಆಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ನಡೆದ ಗಲಾಟೆಯಲ್ಲಿ ಮೂವರು ಗಾಯಗೊಂಡಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಗಂಗಮ್ಮನ ಪಾಳ್ಯದ ನಿವಾಸಿಗಳಾದ ಸುನೀಲ್ (33), ವಿನೋದ್ ಕುಮಾರ್ (33), ನವೀನ್ ಕುಮಾರ್ (35), ಸುದೀಪ್ (24) ಹಾಗೂ ಪವನ್ (23) ಬಂಧಿತ ಆರೋಪಿಗಳು. ಇವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗಂಗಮ್ಮನಪಾಳ್ಯದ ಚಂದ್ರಾರೆಡ್ಡಿ ಲೇಔಟ್ನಲ್ಲಿರುವ ಕೆಜಿಎಫ್ ಗಾಂಧಿ ಎಂಬುವವರಿಗೆ ಸೇರಿದ ಖಾಲಿ ಜಾಗದಲ್ಲಿ ಸೋಮವಾರ ಸ್ಥಳೀಯ ಯುವಕರು ಕ್ರಿಕ್ರೆಟ್ ಆಡುತ್ತಿದ್ದರು. ಈ ಸಮಯದಲ್ಲಿ ಇದೇ ಜಾಗದಲ್ಲಿ ಯುವಕರ ತಂಡವೊಂದು ಪದೇ ಪದೇ ಬೈಕಿನಲ್ಲಿ ಓಡಾಡುತ್ತಿತ್ತು. ಈ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ತೀವ್ರಗೊಂಡು ಕ್ರಿಕೆಟ್ ಆಡುತ್ತಿದ್ದ ಯುವಕರು ಬ್ಯಾಟ್ನಿಂದ ಮತ್ತೊಂದು ಗುಂಪಿನ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.</p>.<p>ಹಲ್ಲೆಗೊಳಗಾದ ಸಿ.ರಹೀಂ ಕಾಂಪೌಂಡ್ ನಿವಾಸಿಗಳಾದ ಟೆಂಪೊ ಚಾಲಕ ಇಮ್ರಾನ್ ಪಾಷಾ (31), ಸೈಯದ್ ಸಮೀರ್ (32) ಮತ್ತು ಸೈಯದ್ ಆರೀಫ್ (28) ಗಾಯಗೊಂಡಿದ್ದು, ಬಂಗಾರಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಘಟನಾ ಸ್ಥಳದಲ್ಲಿ ಸದ್ಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-18-1203217877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ: ಪ</strong>ಟ್ಟಣದ ಗಂಗಮ್ಮನಪಾಳ್ಯದ ಚಂದ್ರಾರೆಡ್ಡಿ ಲೇಔಟ್ನಲ್ಲಿರುವ ಖಾಲಿ ಜಾಗದಲ್ಲಿ ಕ್ರಿಕೆಟ್ ಆಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ನಡೆದ ಗಲಾಟೆಯಲ್ಲಿ ಮೂವರು ಗಾಯಗೊಂಡಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಗಂಗಮ್ಮನ ಪಾಳ್ಯದ ನಿವಾಸಿಗಳಾದ ಸುನೀಲ್ (33), ವಿನೋದ್ ಕುಮಾರ್ (33), ನವೀನ್ ಕುಮಾರ್ (35), ಸುದೀಪ್ (24) ಹಾಗೂ ಪವನ್ (23) ಬಂಧಿತ ಆರೋಪಿಗಳು. ಇವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗಂಗಮ್ಮನಪಾಳ್ಯದ ಚಂದ್ರಾರೆಡ್ಡಿ ಲೇಔಟ್ನಲ್ಲಿರುವ ಕೆಜಿಎಫ್ ಗಾಂಧಿ ಎಂಬುವವರಿಗೆ ಸೇರಿದ ಖಾಲಿ ಜಾಗದಲ್ಲಿ ಸೋಮವಾರ ಸ್ಥಳೀಯ ಯುವಕರು ಕ್ರಿಕ್ರೆಟ್ ಆಡುತ್ತಿದ್ದರು. ಈ ಸಮಯದಲ್ಲಿ ಇದೇ ಜಾಗದಲ್ಲಿ ಯುವಕರ ತಂಡವೊಂದು ಪದೇ ಪದೇ ಬೈಕಿನಲ್ಲಿ ಓಡಾಡುತ್ತಿತ್ತು. ಈ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ತೀವ್ರಗೊಂಡು ಕ್ರಿಕೆಟ್ ಆಡುತ್ತಿದ್ದ ಯುವಕರು ಬ್ಯಾಟ್ನಿಂದ ಮತ್ತೊಂದು ಗುಂಪಿನ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.</p>.<p>ಹಲ್ಲೆಗೊಳಗಾದ ಸಿ.ರಹೀಂ ಕಾಂಪೌಂಡ್ ನಿವಾಸಿಗಳಾದ ಟೆಂಪೊ ಚಾಲಕ ಇಮ್ರಾನ್ ಪಾಷಾ (31), ಸೈಯದ್ ಸಮೀರ್ (32) ಮತ್ತು ಸೈಯದ್ ಆರೀಫ್ (28) ಗಾಯಗೊಂಡಿದ್ದು, ಬಂಗಾರಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಘಟನಾ ಸ್ಥಳದಲ್ಲಿ ಸದ್ಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-18-1203217877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>