<p>ಬಂಗಾರಪೇಟೆ: ಇಲ್ಲಿನ ವಿವೇಕಾನಂದ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ₹37 ಲಕ್ಷ ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಮಾಲೂರು ತಾಲ್ಲೂಕಿನ ಎಳೇಸಂದ್ರ ಗ್ರಾಮದ ಕನಕರಾಜ್.ಡಿ (23), ಕೆಜಿಎಫ್ ನಗರದ ಆಂಡರ್ಸನ್ ಪೇಟೆಯ ಕ್ಸೇವಿಯರ್ ಅಲಿಯಾಸ್ ಅಪ್ಪಕುಟ್ಟಿ (22), ಮತ್ತು ರಾಬರ್ಟ್ಸನ್ ಪೇಟೆಯ ಲೋಕೇಶ್ ಅಲಿಯಾಸ್ ಬುಜ್ಜು (21) ಬಂಧಿತ ಆರೋಪಿಗಳು. ಅವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ವಿವೇಕಾನಂದ ನಗರದ 1ನೇ ಕ್ರಾಸ್ ನಿವಾಸಿ ಗೋವಿಂದಪ್ಪ ಎಂಬುವವರು ಫೆ. 12 ರಿಂದ 17ರವರೆಗೆ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಳ್ಳರು ಕನ್ನ ಹಾಕಿದ್ದರು. ಗೋವಿಂದಪ್ಪ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ವೇಣುಗೋಪಾಲ್, ವಿಜಯ್ಕುಮಾರ್, ಅನಿಲ್ ಕುಮಾರ್, ಮಂಜುನಾಥ್, ಶ್ರೀನಿವಾಸ ಮತ್ತು ಮುನೇಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-18-1927487664</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಇಲ್ಲಿನ ವಿವೇಕಾನಂದ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ₹37 ಲಕ್ಷ ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಮಾಲೂರು ತಾಲ್ಲೂಕಿನ ಎಳೇಸಂದ್ರ ಗ್ರಾಮದ ಕನಕರಾಜ್.ಡಿ (23), ಕೆಜಿಎಫ್ ನಗರದ ಆಂಡರ್ಸನ್ ಪೇಟೆಯ ಕ್ಸೇವಿಯರ್ ಅಲಿಯಾಸ್ ಅಪ್ಪಕುಟ್ಟಿ (22), ಮತ್ತು ರಾಬರ್ಟ್ಸನ್ ಪೇಟೆಯ ಲೋಕೇಶ್ ಅಲಿಯಾಸ್ ಬುಜ್ಜು (21) ಬಂಧಿತ ಆರೋಪಿಗಳು. ಅವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ವಿವೇಕಾನಂದ ನಗರದ 1ನೇ ಕ್ರಾಸ್ ನಿವಾಸಿ ಗೋವಿಂದಪ್ಪ ಎಂಬುವವರು ಫೆ. 12 ರಿಂದ 17ರವರೆಗೆ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಳ್ಳರು ಕನ್ನ ಹಾಕಿದ್ದರು. ಗೋವಿಂದಪ್ಪ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ವೇಣುಗೋಪಾಲ್, ವಿಜಯ್ಕುಮಾರ್, ಅನಿಲ್ ಕುಮಾರ್, ಮಂಜುನಾಥ್, ಶ್ರೀನಿವಾಸ ಮತ್ತು ಮುನೇಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-18-1927487664</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>