<p>ಬಂಗಾರಪೇಟೆ: ನಗರದ ಪ್ರಸಿದ್ಧ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸಂಸದರ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ಘೋಷಣೆಯಾಗಿದ್ದ ಅನುದಾನದ ಎರಡನೇ ಕಂತಿನ ಚೆಕ್ ಅನ್ನು ಗುರುವಾರ ಸಮುದಾಯದ ಮುಖಂಡರಿಗೆ ಹಸ್ತಾಂತರಿಸಲಾಯಿತು.</p>.<p>ಸಮುದಾಯ ಭವನದ ನಿರ್ಮಾಣಕ್ಕಾಗಿ ಒಟ್ಟು ₹11 ಲಕ್ಷ ಅನುದಾನ ಮಂಜೂರಾಗಿದೆ. ಈ ಯೋಜನೆಯಡಿ ಈಗಾಗಲೇ ಮೊದಲ ಹಂತದಲ್ಲಿ ₹ 1.98 ಲಕ್ಷ ನೀಡಲಾಗಿತ್ತು. 2ನೇ ಹಂತದಲ್ಲಿ ₹ 1 ಲಕ್ಷ ಚೆಕ್ ಅನ್ನು ವಿತರಿಸಲಾಗಿದೆ. ಸಂಸದರ ಪರವಾಗಿ ಶೈಲಜಾ ಮುನಿಸ್ವಾಮಿ ಅವರು ಗುರುವಾರ ದೇವಾಲಯದ ಆವರಣದಲ್ಲಿ ಮುಖಂಡರಿಗೆ ಚೆಕ್ ಅನ್ನು ಅಧಿಕೃತವಾಗಿ ಹಸ್ತಾಂತರಿಸಿದರು.</p>.<p>ಕಪಾಲಿ ಶಂಕರ್, ಬಿಂದು ಮಾಧವ್, ಸಂದೀಪ್, ದೇಶಿಹಳ್ಳಿ ಶ್ರೀನಿವಾಸ್, ಅಂಬರೀಶ್, ಷಣ್ಮುಗಂ, ಕುಮರೇಶನ್, ಜಯರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-18-679010380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ನಗರದ ಪ್ರಸಿದ್ಧ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸಂಸದರ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ಘೋಷಣೆಯಾಗಿದ್ದ ಅನುದಾನದ ಎರಡನೇ ಕಂತಿನ ಚೆಕ್ ಅನ್ನು ಗುರುವಾರ ಸಮುದಾಯದ ಮುಖಂಡರಿಗೆ ಹಸ್ತಾಂತರಿಸಲಾಯಿತು.</p>.<p>ಸಮುದಾಯ ಭವನದ ನಿರ್ಮಾಣಕ್ಕಾಗಿ ಒಟ್ಟು ₹11 ಲಕ್ಷ ಅನುದಾನ ಮಂಜೂರಾಗಿದೆ. ಈ ಯೋಜನೆಯಡಿ ಈಗಾಗಲೇ ಮೊದಲ ಹಂತದಲ್ಲಿ ₹ 1.98 ಲಕ್ಷ ನೀಡಲಾಗಿತ್ತು. 2ನೇ ಹಂತದಲ್ಲಿ ₹ 1 ಲಕ್ಷ ಚೆಕ್ ಅನ್ನು ವಿತರಿಸಲಾಗಿದೆ. ಸಂಸದರ ಪರವಾಗಿ ಶೈಲಜಾ ಮುನಿಸ್ವಾಮಿ ಅವರು ಗುರುವಾರ ದೇವಾಲಯದ ಆವರಣದಲ್ಲಿ ಮುಖಂಡರಿಗೆ ಚೆಕ್ ಅನ್ನು ಅಧಿಕೃತವಾಗಿ ಹಸ್ತಾಂತರಿಸಿದರು.</p>.<p>ಕಪಾಲಿ ಶಂಕರ್, ಬಿಂದು ಮಾಧವ್, ಸಂದೀಪ್, ದೇಶಿಹಳ್ಳಿ ಶ್ರೀನಿವಾಸ್, ಅಂಬರೀಶ್, ಷಣ್ಮುಗಂ, ಕುಮರೇಶನ್, ಜಯರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-18-679010380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>