<p><strong>ಬಂಗಾರಪೇಟೆ</strong>: ಸಾವಿರಾರು ಪ್ರಯಾಣಿಕರು ಮತ್ತು ಸ್ಥಳೀಯರು ನಿತ್ಯವೂ ಸಂಚರಿಸುವ ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜೊತೆಗೆ ಅಲ್ಲಲ್ಲಿ ಬಾಯಿ ತೆರೆದಿದ್ದು, ಸಾರ್ವಜನಿಕರ ಜೀವಕ್ಕೆ ಕಂಟಕವಾಗಿವೆ.</p>.<p>ಅಷ್ಟೇ ಅಲ್ಲದೆ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದ್ದು, ಗಬ್ಬು ನಾರುತ್ತಿದೆ. ಇದರಿಂದ ದಾರಿಹೋಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ನಿತ್ಯವೂ ಸಾವಿರಾರು ಮಂದಿ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ಬದಿಯಲ್ಲೇ ಸಾಗುತ್ತಾರೆ. ಬಾಯಿ ತೆರೆದಿರುವ ಚರಂಡಿಯಲ್ಲಿ ನಿಂತಿರುವ ಕೊಳಚೆ ನೀರಿನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಜೊತೆಗೆ ವ್ಯಾಪಾರಸ್ಥರು ಈ ದುರ್ವಾಸನೆಯ ನಡುವೆಯೇ ವ್ಯಾಪಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಜನನಿಬಿಡ ರಸ್ತೆಗಳಲ್ಲೇ ಚರಂಡಿ ಬಾಯ್ತೆರೆದಿದ್ದು, ರಾತ್ರಿ ವೇಳೆ ಪಾದಚಾರಿಗಳು ಹಾಗೂ ಬೈಕ್ ಸವಾರರು ಬಿದ್ದು ಗಾಯಗೊಳ್ಳುವ ಆತಂಕ ಎದುರಾಗಿದೆ. ಕಸದ ವಿಲೇವಾರಿ ಸಮರ್ಪಕವಾಗಿ ಆಗದೆ ಚರಂಡಿಯಲ್ಲಿ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ತುಂಬಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಈ ಬಗ್ಗೆ ಸ್ಥಳೀಯರು ಹಲವು ಬಾರಿ ನಗರಸಭೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಗರಸಭೆ ಅಧಿಕಾರಿಗಳು ಕೇವಲ ಭರವಸೆ ನೀಡುವುದನ್ನು ಬಿಟ್ಟು, ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಹದಗೆಟ್ಟಿರುವ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರ ಆರೋಗ್ಯ ಕಾಪಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-1482202907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಸಾವಿರಾರು ಪ್ರಯಾಣಿಕರು ಮತ್ತು ಸ್ಥಳೀಯರು ನಿತ್ಯವೂ ಸಂಚರಿಸುವ ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜೊತೆಗೆ ಅಲ್ಲಲ್ಲಿ ಬಾಯಿ ತೆರೆದಿದ್ದು, ಸಾರ್ವಜನಿಕರ ಜೀವಕ್ಕೆ ಕಂಟಕವಾಗಿವೆ.</p>.<p>ಅಷ್ಟೇ ಅಲ್ಲದೆ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದ್ದು, ಗಬ್ಬು ನಾರುತ್ತಿದೆ. ಇದರಿಂದ ದಾರಿಹೋಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ನಿತ್ಯವೂ ಸಾವಿರಾರು ಮಂದಿ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ಬದಿಯಲ್ಲೇ ಸಾಗುತ್ತಾರೆ. ಬಾಯಿ ತೆರೆದಿರುವ ಚರಂಡಿಯಲ್ಲಿ ನಿಂತಿರುವ ಕೊಳಚೆ ನೀರಿನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಜೊತೆಗೆ ವ್ಯಾಪಾರಸ್ಥರು ಈ ದುರ್ವಾಸನೆಯ ನಡುವೆಯೇ ವ್ಯಾಪಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಜನನಿಬಿಡ ರಸ್ತೆಗಳಲ್ಲೇ ಚರಂಡಿ ಬಾಯ್ತೆರೆದಿದ್ದು, ರಾತ್ರಿ ವೇಳೆ ಪಾದಚಾರಿಗಳು ಹಾಗೂ ಬೈಕ್ ಸವಾರರು ಬಿದ್ದು ಗಾಯಗೊಳ್ಳುವ ಆತಂಕ ಎದುರಾಗಿದೆ. ಕಸದ ವಿಲೇವಾರಿ ಸಮರ್ಪಕವಾಗಿ ಆಗದೆ ಚರಂಡಿಯಲ್ಲಿ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ತುಂಬಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಈ ಬಗ್ಗೆ ಸ್ಥಳೀಯರು ಹಲವು ಬಾರಿ ನಗರಸಭೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಗರಸಭೆ ಅಧಿಕಾರಿಗಳು ಕೇವಲ ಭರವಸೆ ನೀಡುವುದನ್ನು ಬಿಟ್ಟು, ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಹದಗೆಟ್ಟಿರುವ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರ ಆರೋಗ್ಯ ಕಾಪಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-1482202907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>