<p>ಬಂಗಾರಪೇಟೆ: ಕಾಮಸಮುದ್ರ ರೈಲ್ವೆ ಗೇಟ್ ಸಾರ್ವಜನಿಕರ ಪಾಲಿಗೆ ಶಾಪವಾಗಿದ್ದು, ಕಳೆದ ಎರಡು ದಶಕಗಳಿಂದ ಮೇಲ್ಸೇತುವೆ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದ್ದರೂ, ಸರ್ಕಾರ ಮತ್ತು ರೈಲ್ವೆ ಇಲಾಖೆಯ ಮೌನ ರೈತ ಸಂಘದ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ತಾಲ್ಲೂಕಿನ ಕಾಮಸಮುದ್ರ ರೈಲ್ವೆ ಗೇಟ್ ಬಳಿ ಗುರುವಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ಚೆನ್ನೈ ನಗರಗಳನ್ನು ಸಂಪರ್ಕಿಸುವ ಈ ಮಾರ್ಗದಲ್ಲಿ ನಿರಂತರವಾಗಿ ರೈಲುಗಳ ಸಂಚಾರವಿರುತ್ತದೆ. ಹಾಗಾಗಿ ದಿನದ ಬಹುಪಾಲು ಸಮಯ ರೈಲ್ವೆ ಗೇಟ್ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರು ಸಕಾಲಕ್ಕೆ ತಮ್ಮ ಕೆಲಸ ಕಾರ್ಯಗಳಿಗೆ ತಲುಪಲಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವಂತಾಗಿದೆ. ಆಂಬುಲೆನ್ಸ್ ಸಂಚಾರಕ್ಕೆ ಈ ಗೇಟ್ ದೊಡ್ಡ ತಡೆಗೋಡೆಯಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಪ್ರಾಣಾಪಾಯ ಸಂಭವಿಸುವ ಭೀತಿಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಸದರು ಹಾಗೂ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಈವರೆಗೂ ಪ್ರಯೋಜನವಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳು ಮೇಲ್ಸೇತುವೆ ನಿರ್ಮಾಣದ ಭರವಸೆ ನೀಡುತ್ತಾರೆ. ಆದರೆ, ಗೆದ್ದ ನಂತರ ಈ ಭಾಗದ ಕಡೆಗೆ ತಿರುಗಿಯೂ ನೋಡುವುದಿಲ್ಲ ಎಂದು ದೂರಿದರು.</p>.<p>ಸರ್ಕಾರ ಮತ್ತು ರೈಲ್ವೆ ಇಲಾಖೆ ಕೂಡಲೇ ಎಚ್ಚೆತ್ತು ಮೇಲ್ಸೇತುವೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ಎಲ್ಲಾ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಅಪ್ಪೋಜಿರಾವ್, ಮುನಿಕೃಷ್ಣ, ಬೀಮಗಾನಹಳ್ಳಿ ಮುನಿರಾಜು, ಗೋವಿಂದಪ್ಪ, ಪುತ್ತೇರಿರಾಜು, ಗಿರೀಶ್, ಕಿರಣ್, ಚಾಂದ್ ಪಾಷ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-1080464468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಕಾಮಸಮುದ್ರ ರೈಲ್ವೆ ಗೇಟ್ ಸಾರ್ವಜನಿಕರ ಪಾಲಿಗೆ ಶಾಪವಾಗಿದ್ದು, ಕಳೆದ ಎರಡು ದಶಕಗಳಿಂದ ಮೇಲ್ಸೇತುವೆ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದ್ದರೂ, ಸರ್ಕಾರ ಮತ್ತು ರೈಲ್ವೆ ಇಲಾಖೆಯ ಮೌನ ರೈತ ಸಂಘದ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ತಾಲ್ಲೂಕಿನ ಕಾಮಸಮುದ್ರ ರೈಲ್ವೆ ಗೇಟ್ ಬಳಿ ಗುರುವಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ಚೆನ್ನೈ ನಗರಗಳನ್ನು ಸಂಪರ್ಕಿಸುವ ಈ ಮಾರ್ಗದಲ್ಲಿ ನಿರಂತರವಾಗಿ ರೈಲುಗಳ ಸಂಚಾರವಿರುತ್ತದೆ. ಹಾಗಾಗಿ ದಿನದ ಬಹುಪಾಲು ಸಮಯ ರೈಲ್ವೆ ಗೇಟ್ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರು ಸಕಾಲಕ್ಕೆ ತಮ್ಮ ಕೆಲಸ ಕಾರ್ಯಗಳಿಗೆ ತಲುಪಲಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವಂತಾಗಿದೆ. ಆಂಬುಲೆನ್ಸ್ ಸಂಚಾರಕ್ಕೆ ಈ ಗೇಟ್ ದೊಡ್ಡ ತಡೆಗೋಡೆಯಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಪ್ರಾಣಾಪಾಯ ಸಂಭವಿಸುವ ಭೀತಿಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಸದರು ಹಾಗೂ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಈವರೆಗೂ ಪ್ರಯೋಜನವಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳು ಮೇಲ್ಸೇತುವೆ ನಿರ್ಮಾಣದ ಭರವಸೆ ನೀಡುತ್ತಾರೆ. ಆದರೆ, ಗೆದ್ದ ನಂತರ ಈ ಭಾಗದ ಕಡೆಗೆ ತಿರುಗಿಯೂ ನೋಡುವುದಿಲ್ಲ ಎಂದು ದೂರಿದರು.</p>.<p>ಸರ್ಕಾರ ಮತ್ತು ರೈಲ್ವೆ ಇಲಾಖೆ ಕೂಡಲೇ ಎಚ್ಚೆತ್ತು ಮೇಲ್ಸೇತುವೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ಎಲ್ಲಾ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಅಪ್ಪೋಜಿರಾವ್, ಮುನಿಕೃಷ್ಣ, ಬೀಮಗಾನಹಳ್ಳಿ ಮುನಿರಾಜು, ಗೋವಿಂದಪ್ಪ, ಪುತ್ತೇರಿರಾಜು, ಗಿರೀಶ್, ಕಿರಣ್, ಚಾಂದ್ ಪಾಷ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-1080464468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>