<p>ಬೇತಮಂಗಲ: ಇಲ್ಲಿನ ಕರಗ ಮಹೋತ್ಸವ ಹಾಗೂ ರಾಮ ನವಮಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ರಾಜಕೀಯ ಪಕ್ಷರ ಮುಖಂಡರ ಬ್ಯಾನರ್ ಹಾವಳಿ ಹೆಚ್ಚಾಗಿದೆ.</p>.<p>ಗ್ರಾಮದ ಬಸ್ ನಿಲ್ದಾಣ ಮತ್ತು ಮುಖ್ಯ ರಸ್ತೆಗಳಲ್ಲಿ ವಿವಿಧ ಪಕ್ಷಗಳ ಮುಖಂಡರು ತಾ ಮುಂದು, ನಾ ಮುಂದು ಎನ್ನುವಂತೆ ಬ್ಯಾನರ್ ಹಾಕಲಾಗಿದೆ. ಇದು ಕೇವಲ ಹಬ್ಬದ ಶುಭಾಶಯಕ್ಕೆ ಸೀಮಿತವಾಗದೆ, ರಾಜಕೀಯ ಬಲಪ್ರದರ್ಶನದ ವೇದಿಕೆಯಂತಾಗಿವೆ.</p>.<p>ರಸ್ತೆ ತಿರುವು ಮತ್ತು ರಸ್ತೆಗೆ ಅಡ್ಡಲಾಗಿ ಅಳವಡಿಸಿರುವ ಬ್ಯಾನರ್ಗಳಿಂದಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬ್ಯಾನರ್ಗಳಿಂದ ಪಾದಚಾರಿಗಳು ಸಂಚರಿಸಲು ಕಷ್ಟವಾಗುತ್ತಿದೆ.</p>.<p>ಬ್ಯಾನರ್ ಹಾವಳಿ ಹೆಚ್ಚಾಗಿದರೂ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಜಾರಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯಿಂದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-144199397</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಇಲ್ಲಿನ ಕರಗ ಮಹೋತ್ಸವ ಹಾಗೂ ರಾಮ ನವಮಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ರಾಜಕೀಯ ಪಕ್ಷರ ಮುಖಂಡರ ಬ್ಯಾನರ್ ಹಾವಳಿ ಹೆಚ್ಚಾಗಿದೆ.</p>.<p>ಗ್ರಾಮದ ಬಸ್ ನಿಲ್ದಾಣ ಮತ್ತು ಮುಖ್ಯ ರಸ್ತೆಗಳಲ್ಲಿ ವಿವಿಧ ಪಕ್ಷಗಳ ಮುಖಂಡರು ತಾ ಮುಂದು, ನಾ ಮುಂದು ಎನ್ನುವಂತೆ ಬ್ಯಾನರ್ ಹಾಕಲಾಗಿದೆ. ಇದು ಕೇವಲ ಹಬ್ಬದ ಶುಭಾಶಯಕ್ಕೆ ಸೀಮಿತವಾಗದೆ, ರಾಜಕೀಯ ಬಲಪ್ರದರ್ಶನದ ವೇದಿಕೆಯಂತಾಗಿವೆ.</p>.<p>ರಸ್ತೆ ತಿರುವು ಮತ್ತು ರಸ್ತೆಗೆ ಅಡ್ಡಲಾಗಿ ಅಳವಡಿಸಿರುವ ಬ್ಯಾನರ್ಗಳಿಂದಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬ್ಯಾನರ್ಗಳಿಂದ ಪಾದಚಾರಿಗಳು ಸಂಚರಿಸಲು ಕಷ್ಟವಾಗುತ್ತಿದೆ.</p>.<p>ಬ್ಯಾನರ್ ಹಾವಳಿ ಹೆಚ್ಚಾಗಿದರೂ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಜಾರಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯಿಂದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-144199397</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>