<p>ಕೆಜಿಎಫ್: ಖಾಸಗಿ ಶಾಲೆಯೊಂದರ ವಾರ್ಷಿಕ ಮಾನ್ಯತೆ ನವೀಕರಣಕ್ಕೆ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಲಂಚ ಕೇಳಿದ್ದಾರೆ ಎನ್ನಲಾದ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಈ ಸಂಬಂಧ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರು ಅಧಿಕಾರಿಗೆ ನೋಟಿಸ್ ನೀಡಿದ್ದಾರೆ. </p>.<p>ಖಾಸಗಿ ಶಾಲೆಯೊಂದರ ಮುಖ್ಯಸ್ಥರೊಡನೆ ಈ ಸಂಭಾಷಣೆ ನಡೆಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕಾದ ಲಂಚದ ಮೊತ್ತವನ್ನು ಅಧಿಕಾರಿ ತಿಳಿಸಿದ್ದಾರೆ. ಖಾಸಗಿ ಶಾಲೆಯ ವಾರ್ಷಿಕ ನವೀಕರಣ ಸಂಬಂಧ ಈ ಸಂಭಾಷಣೆ ನಡೆದಿರುವುದು ಗೊತ್ತಾಗಿದೆ.</p>.<p>‘ಉಪ ನಿರ್ದೇಶಕರ ಕಚೇರಿಯಲ್ಲಿ ಎಷ್ಟು ಕೊಡಬೇಕು? ನವೀಕರಣದ ಗುಮಾಸ್ತನಿಗೆ ಹೇಗೆ ಹಣ ಕೊಡಬೇಕು? ಅದರಲ್ಲಿ ತನ್ನ ಪಾತ್ರವೇನು?’ ಎಂದು ಸಂಭಾಷಣೆಯಲ್ಲಿ ತೊಡಗಿದ ಅಧಿಕಾರಿ<br />ಹೇಳುತ್ತಾರೆ.</p>.<p>‘ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಮನ್ವಯ ಅಧಿಕಾರಿ (ಇಸಿಒ) ಗಂಗಿರೆಡ್ಡಿ ಧ್ವನಿ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಖಾಸಗಿ ಶಾಲೆಯ ಮಾನ್ಯತೆ ನವೀಕರಣಕ್ಕೆ ಹಣ ಕೇಳಿರುವುದು ಆಡಿಯೊದಲ್ಲಿದೆ. ಈ ಸಂಬಂಧ ಬಿಇಒ ಮೂಲಕವೇ ನೋಟಿಸ್ ಕೊಡಿಸಿದ್ದು, ಸೋಮವಾರದೊಳಗೆ ಉತ್ತರ ನೀಡಲು ಹೇಳಿದ್ದೇನೆ. ಇನ್ನೊಂದು ಬದಿಯಿಂದ ಸಂಭಾಷಣೆ ನಡೆಸಿದ ಖಾಸಗಿ ಶಾಲೆಯ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ’ ಎಂದು ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಖಾಸಗಿ ಶಾಲೆಯೊಂದರ ವಾರ್ಷಿಕ ಮಾನ್ಯತೆ ನವೀಕರಣಕ್ಕೆ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಲಂಚ ಕೇಳಿದ್ದಾರೆ ಎನ್ನಲಾದ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಈ ಸಂಬಂಧ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರು ಅಧಿಕಾರಿಗೆ ನೋಟಿಸ್ ನೀಡಿದ್ದಾರೆ. </p>.<p>ಖಾಸಗಿ ಶಾಲೆಯೊಂದರ ಮುಖ್ಯಸ್ಥರೊಡನೆ ಈ ಸಂಭಾಷಣೆ ನಡೆಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕಾದ ಲಂಚದ ಮೊತ್ತವನ್ನು ಅಧಿಕಾರಿ ತಿಳಿಸಿದ್ದಾರೆ. ಖಾಸಗಿ ಶಾಲೆಯ ವಾರ್ಷಿಕ ನವೀಕರಣ ಸಂಬಂಧ ಈ ಸಂಭಾಷಣೆ ನಡೆದಿರುವುದು ಗೊತ್ತಾಗಿದೆ.</p>.<p>‘ಉಪ ನಿರ್ದೇಶಕರ ಕಚೇರಿಯಲ್ಲಿ ಎಷ್ಟು ಕೊಡಬೇಕು? ನವೀಕರಣದ ಗುಮಾಸ್ತನಿಗೆ ಹೇಗೆ ಹಣ ಕೊಡಬೇಕು? ಅದರಲ್ಲಿ ತನ್ನ ಪಾತ್ರವೇನು?’ ಎಂದು ಸಂಭಾಷಣೆಯಲ್ಲಿ ತೊಡಗಿದ ಅಧಿಕಾರಿ<br />ಹೇಳುತ್ತಾರೆ.</p>.<p>‘ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಮನ್ವಯ ಅಧಿಕಾರಿ (ಇಸಿಒ) ಗಂಗಿರೆಡ್ಡಿ ಧ್ವನಿ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಖಾಸಗಿ ಶಾಲೆಯ ಮಾನ್ಯತೆ ನವೀಕರಣಕ್ಕೆ ಹಣ ಕೇಳಿರುವುದು ಆಡಿಯೊದಲ್ಲಿದೆ. ಈ ಸಂಬಂಧ ಬಿಇಒ ಮೂಲಕವೇ ನೋಟಿಸ್ ಕೊಡಿಸಿದ್ದು, ಸೋಮವಾರದೊಳಗೆ ಉತ್ತರ ನೀಡಲು ಹೇಳಿದ್ದೇನೆ. ಇನ್ನೊಂದು ಬದಿಯಿಂದ ಸಂಭಾಷಣೆ ನಡೆಸಿದ ಖಾಸಗಿ ಶಾಲೆಯ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ’ ಎಂದು ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>