ಬಜರಂಗದಳ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್ ಸದಸ್ಯರು ಕ್ಲಾಕ್ಟವರ್ ಮಾರ್ಗವಾಗಿ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕ್ಲಾಕ್ಟವರ್ ಸುತ್ತಮುತ್ತಲಿನ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಹಾಗೂ ಜನರ ಓಡಾಟ ನಿರ್ಬಂಧಿಸಲಾಯಿತು. ಹಿಂದೂಪರ ಸಂಘಟನೆಗಳ ಸದಸ್ಯರು ಧಾರಾಕಾರ ಮಳೆ ನಡುವೆಯೂ ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿದರು.