<p><strong>ಮಾಲೂರು:</strong> ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಇಗಲೂರು ಗ್ರಾಮದ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದು, ವೈದ್ಯರೊಬ್ಬರ ಎಡವಟ್ಟು ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾನವಿ ಮೃತ ಬಾಲಕಿ. ಸೆ.30ರಂದು ಜ್ವರ ಕಾಣಿಸಿಕೊಂಡ ಕಾರಣ ಪೋಷಕರು ಪಕ್ಕದ ಸಂತೇಹಳ್ಳಿ ಗ್ರಾಮದಲ್ಲಿರುವ ಕ್ಲಿನಿಕ್ವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.</p>.<p>ಆಗ ವೈದ್ಯರು ಚುಚ್ಚುಮದ್ದು ನೀಡಿದ್ದಾರೆ. ನಂತರ ಬಾಲಕಿ ನೋವಿನಿಂದ ನರಳಾಡಿದ್ದಾಳೆ. ಪೋಷಕರು ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಇನ್ನೊಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಗುರುವಾರ ನಸುಕಿನಲ್ಲಿ ವಾಂತಿ ಮಾಡಿಕೊಂಡು ಬಾಲಕಿ ಮೃತಪಟ್ಟಿದ್ದಾಳೆ.</p>.<p>ಪೋಷಕರಾದ ರಾಜೇಂದ್ರ ಹಾಗೂ ರೇಣುಕಾ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯರೊಬ್ಬರು ನೀಡಿದ ಚುಚ್ಚುಮದ್ದಿನಿಂದ ಈ ಎಡವಟ್ಟು ಸಂಭವಿಸಿದೆ ಎಂದು ದೂರಿದ್ದಾರೆ. ಚುಚ್ಚು ಮದ್ದು ನೀಡಿದ್ದು ನಕಲಿ ವೈದ್ಯ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ರಕ್ತವನ್ನು ಪರೀಕ್ಷೆಗೆ ಕಳಿಸಲಾಗಿದೆ ಎಂಬುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಇಗಲೂರು ಗ್ರಾಮದ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದು, ವೈದ್ಯರೊಬ್ಬರ ಎಡವಟ್ಟು ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾನವಿ ಮೃತ ಬಾಲಕಿ. ಸೆ.30ರಂದು ಜ್ವರ ಕಾಣಿಸಿಕೊಂಡ ಕಾರಣ ಪೋಷಕರು ಪಕ್ಕದ ಸಂತೇಹಳ್ಳಿ ಗ್ರಾಮದಲ್ಲಿರುವ ಕ್ಲಿನಿಕ್ವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.</p>.<p>ಆಗ ವೈದ್ಯರು ಚುಚ್ಚುಮದ್ದು ನೀಡಿದ್ದಾರೆ. ನಂತರ ಬಾಲಕಿ ನೋವಿನಿಂದ ನರಳಾಡಿದ್ದಾಳೆ. ಪೋಷಕರು ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಇನ್ನೊಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಗುರುವಾರ ನಸುಕಿನಲ್ಲಿ ವಾಂತಿ ಮಾಡಿಕೊಂಡು ಬಾಲಕಿ ಮೃತಪಟ್ಟಿದ್ದಾಳೆ.</p>.<p>ಪೋಷಕರಾದ ರಾಜೇಂದ್ರ ಹಾಗೂ ರೇಣುಕಾ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯರೊಬ್ಬರು ನೀಡಿದ ಚುಚ್ಚುಮದ್ದಿನಿಂದ ಈ ಎಡವಟ್ಟು ಸಂಭವಿಸಿದೆ ಎಂದು ದೂರಿದ್ದಾರೆ. ಚುಚ್ಚು ಮದ್ದು ನೀಡಿದ್ದು ನಕಲಿ ವೈದ್ಯ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ರಕ್ತವನ್ನು ಪರೀಕ್ಷೆಗೆ ಕಳಿಸಲಾಗಿದೆ ಎಂಬುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>