<p>ಕೋಲಾರ: ನಿವೇಶನ ವಿಚಾರವಾಗಿ ನಗರಸಭೆ ಕಚೇರಿ ಆವರಣದಲ್ಲಿ ₹ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕೋಲಾರ ನಗರಸಭೆಯ ರಾಜಸ್ವ ನಿರೀಕ್ಷಕ ಕಿರಣ್ ಕುಮಾರ್ ಎನ್., ಬಿಲ್ ಕಲೆಕ್ಟರ್ ನಟರಾಜ್ ಹಾಗೂ ಅವರ ಪರವಾಗಿ ಅನಧಿಕೃತವಾಗಿ ಕೆಲಸ ಮಾಡುತ್ತಿದ್ದ ವೆಂಕಟೇಶಪ್ಪ ಎಂಬುವರು ಬಂಧಿತ ಆರೋಪಿಗಳು. ಇವರ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರಡಿ (ತಿದ್ದುಪಡಿ-2018) ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಸುಲ್ತಾನ್ ತಿಪ್ಪಸಂದ್ರದ ವ್ಯಕ್ತಿಗೆ ಸೇರಿದ ಬಾಬತ್ತು ಗ್ರಾಮದ ಸರ್ವೆ ನಂ.81 ರಲ್ಲಿ 100x70 ಅಡಿಗಳ ನಿವೇಶನದ ಸ್ಥಳವನ್ನು ಪರಿಶೀಲಿಸಿ ವರದಿ ನೀಡಲು ತಿಂಗಳ ಹಿಂದೆ ಬಲವಂತವಾಗಿ ದೂರುದಾರ ಮತ್ತು ಅವರ ಅಳಿಯ ಮುನಾವರ್ ಅವರಿಂದ ₹ 8 ಸಾವಿರ ಪಡೆದಿದ್ದ ಆರೋಪಿಗಳು ಕೆಲಸ ಮಾಡಿಕೊಟ್ಟಿರಲಿಲ್ಲ.</p>.<p>ಅಲ್ಲದೆ, ಪುನಃ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಾಲೀಕರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ₹ 15 ಸಾವಿರವನ್ನು ಕೋಲಾರ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಅಧಿಕಾರಿಗಳ ಪರವಾಗಿ ವೆಂಕಟೇಶಪ್ಪ ಎಂಬುವರು ತೆಗೆದುಕೊಂಡಿದ್ದಾರೆ.</p>.<p>ಆಗ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧೀಕ್ಷಕ ಆ್ಯಂಟೋನಿ ಜಾನ್ ಜೆ.ಕೆ. ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಅಂಜನಪ್ಪ ಈ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆಯು ಮುಂದುವರಿದಿದೆ ಎಂದು ಆ್ಯಂಟೋನಿ ಜಾನ್ ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ವಾಸು, ಮಂಜಪ್ಪ, ಎಸ್.ಆರ್.ದೇವಪ್ಪ, ಕಿಶೋರ್, ರಮೇಶ್, ನಾಗಭೂಷಣ, ಅಜಯ್, ನಫೀಜ್, ಶ್ರೀಧರ್ ಇ ದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-18-448548647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಿವೇಶನ ವಿಚಾರವಾಗಿ ನಗರಸಭೆ ಕಚೇರಿ ಆವರಣದಲ್ಲಿ ₹ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕೋಲಾರ ನಗರಸಭೆಯ ರಾಜಸ್ವ ನಿರೀಕ್ಷಕ ಕಿರಣ್ ಕುಮಾರ್ ಎನ್., ಬಿಲ್ ಕಲೆಕ್ಟರ್ ನಟರಾಜ್ ಹಾಗೂ ಅವರ ಪರವಾಗಿ ಅನಧಿಕೃತವಾಗಿ ಕೆಲಸ ಮಾಡುತ್ತಿದ್ದ ವೆಂಕಟೇಶಪ್ಪ ಎಂಬುವರು ಬಂಧಿತ ಆರೋಪಿಗಳು. ಇವರ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರಡಿ (ತಿದ್ದುಪಡಿ-2018) ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಸುಲ್ತಾನ್ ತಿಪ್ಪಸಂದ್ರದ ವ್ಯಕ್ತಿಗೆ ಸೇರಿದ ಬಾಬತ್ತು ಗ್ರಾಮದ ಸರ್ವೆ ನಂ.81 ರಲ್ಲಿ 100x70 ಅಡಿಗಳ ನಿವೇಶನದ ಸ್ಥಳವನ್ನು ಪರಿಶೀಲಿಸಿ ವರದಿ ನೀಡಲು ತಿಂಗಳ ಹಿಂದೆ ಬಲವಂತವಾಗಿ ದೂರುದಾರ ಮತ್ತು ಅವರ ಅಳಿಯ ಮುನಾವರ್ ಅವರಿಂದ ₹ 8 ಸಾವಿರ ಪಡೆದಿದ್ದ ಆರೋಪಿಗಳು ಕೆಲಸ ಮಾಡಿಕೊಟ್ಟಿರಲಿಲ್ಲ.</p>.<p>ಅಲ್ಲದೆ, ಪುನಃ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಾಲೀಕರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ₹ 15 ಸಾವಿರವನ್ನು ಕೋಲಾರ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಅಧಿಕಾರಿಗಳ ಪರವಾಗಿ ವೆಂಕಟೇಶಪ್ಪ ಎಂಬುವರು ತೆಗೆದುಕೊಂಡಿದ್ದಾರೆ.</p>.<p>ಆಗ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧೀಕ್ಷಕ ಆ್ಯಂಟೋನಿ ಜಾನ್ ಜೆ.ಕೆ. ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಅಂಜನಪ್ಪ ಈ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆಯು ಮುಂದುವರಿದಿದೆ ಎಂದು ಆ್ಯಂಟೋನಿ ಜಾನ್ ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ವಾಸು, ಮಂಜಪ್ಪ, ಎಸ್.ಆರ್.ದೇವಪ್ಪ, ಕಿಶೋರ್, ರಮೇಶ್, ನಾಗಭೂಷಣ, ಅಜಯ್, ನಫೀಜ್, ಶ್ರೀಧರ್ ಇ ದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-18-448548647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>