<p><strong>ಕೋಲಾರ:</strong> ತಮ್ಮ ಬೆಂಬಲಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಕೆಳಗಿಳಿಸಿದ ಬೆನ್ನಲೇ ಜಿಲ್ಲೆಯ ಒಂದು ಬಣದ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.</p>.<p>ಮುಖಂಡ ಹಾಗೂ ಗುತ್ತಿಗೆದಾರ ಮಾರ್ಜೇನಹಳ್ಳಿ ಬಾಬು ಅವರನ್ನು ಜಿಲ್ಲಾ ಕಾಂಗ್ರೆಶ್ ನೀತಿ ಸಂಶೋಧನೆ ಅಧ್ಯಕ್ಷರಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಮುನಿಯಪ್ಪ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಲಾಯಿತು ಎಂಬುದಾಗಿ ಈ ಬಣದ ಮುಖಂಡರು ಹೇಳಿಕೊಂಡಿದ್ದಾರೆ.</p>.<p>ಆದರೆ, ಆ ನೆಪದಲ್ಲಿ ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<p>ಈಚೆಗೆ ಮುನಿಯಪ್ಪ ಬೆಂಬಲಿಗರೂ ಆಗಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಸಾದ್ ಬಾಬು ಹಾಗೂ ಉದಯ್ ಶಂಕರ್ ಅವರನ್ನು ಕೆಳಗಿಳಿಸಲಾಗಿತ್ತು. ಬದಲಾಗಿ ಘಟಬಂಧನ್ ಬೆಂಬಲಿತ ಮೈಲಾಂಡಹಳ್ಳಿ ಮುರಳಿ ಹಾಗೂ ಸೈಯದ್ ಅಪ್ಸರ್ ಅವರನ್ನು ಆ ಸ್ಥಾನಗಳಿಗೆ ನೇಮಿಸಲಾಗಿತ್ತು. ಈ ಸಂಬಂಧ ಮುನಿಯಪ್ಪ ಅವರಿಗೆ ಮುಖಂಡರು ದೂರು ಹೇಳಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಭೇಟಿ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಮುದ್ದು ಗಂಗಾಧರ್, ಮುಖಂಡರಾದ ಸೋಮಶೇಖರ್, ಕೆ.ಜಯದೇವ್, ನವೀನ್, ಸುಧೀರ್, ಪ್ರಸಾದ್ಬಾಬು, ಉದಯ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಮ್ಮ ಬೆಂಬಲಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಕೆಳಗಿಳಿಸಿದ ಬೆನ್ನಲೇ ಜಿಲ್ಲೆಯ ಒಂದು ಬಣದ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.</p>.<p>ಮುಖಂಡ ಹಾಗೂ ಗುತ್ತಿಗೆದಾರ ಮಾರ್ಜೇನಹಳ್ಳಿ ಬಾಬು ಅವರನ್ನು ಜಿಲ್ಲಾ ಕಾಂಗ್ರೆಶ್ ನೀತಿ ಸಂಶೋಧನೆ ಅಧ್ಯಕ್ಷರಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಮುನಿಯಪ್ಪ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಲಾಯಿತು ಎಂಬುದಾಗಿ ಈ ಬಣದ ಮುಖಂಡರು ಹೇಳಿಕೊಂಡಿದ್ದಾರೆ.</p>.<p>ಆದರೆ, ಆ ನೆಪದಲ್ಲಿ ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<p>ಈಚೆಗೆ ಮುನಿಯಪ್ಪ ಬೆಂಬಲಿಗರೂ ಆಗಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಸಾದ್ ಬಾಬು ಹಾಗೂ ಉದಯ್ ಶಂಕರ್ ಅವರನ್ನು ಕೆಳಗಿಳಿಸಲಾಗಿತ್ತು. ಬದಲಾಗಿ ಘಟಬಂಧನ್ ಬೆಂಬಲಿತ ಮೈಲಾಂಡಹಳ್ಳಿ ಮುರಳಿ ಹಾಗೂ ಸೈಯದ್ ಅಪ್ಸರ್ ಅವರನ್ನು ಆ ಸ್ಥಾನಗಳಿಗೆ ನೇಮಿಸಲಾಗಿತ್ತು. ಈ ಸಂಬಂಧ ಮುನಿಯಪ್ಪ ಅವರಿಗೆ ಮುಖಂಡರು ದೂರು ಹೇಳಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಭೇಟಿ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಮುದ್ದು ಗಂಗಾಧರ್, ಮುಖಂಡರಾದ ಸೋಮಶೇಖರ್, ಕೆ.ಜಯದೇವ್, ನವೀನ್, ಸುಧೀರ್, ಪ್ರಸಾದ್ಬಾಬು, ಉದಯ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>