<p><strong>ಕೋಲಾರ</strong>: ದೇಶದಲ್ಲೇ ಮೊದಲ ಬಾರಿ ಅಡುಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ. ಈ ಸಂಬಂಧ ಫೆ.16ರಂದು ಮಧ್ಯಾಹ್ನ 2 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷ ಕೆ.ವಿ.ಸುರೇಶ್ ಕುಮಾರ್ ತಿಳಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸಲಾಯಿತು. ಈ ಮೂಲಕ ಪಿಂಚಣಿ, ವಿದ್ಯಾಭ್ಯಾಸ ಸೌಲಭ್ಯ ಸೇರಿದಂತೆ ವಿವಿಧ ಸವಲತ್ತುಗಳು ದೊರಕಿತು. ರಾಜ್ಯ ಅಡುಗೆ ಕಾರ್ಮಿಕರ ಸಂಘಕ್ಕೆ 2025ರಲ್ಲಿ ಮಾನ್ಯತೆ ಸಿಕ್ಕಿದೆ’ ಎಂದರು.</p>.<p>ಅಡುಗೆ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಮಂಡಳಿ ರಚನೆ ಮಾಡಬೇಕು. ಈ ಮೂಲಕ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿರಿಸಿದ್ದು, ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಶೇ 1 ಸೆಸ್ ಹಾಕುವಂತೆ ಕೋರಿದ್ದೇವೆ. ಈ ನಿಧಿಯನ್ನು ಅಡುಗೆ ಕಾರ್ಮಿಕರ ಮಂಡಳಿಗೆ ನೀಡಬಹುದು. ಈ ಬಗ್ಗೆ ಕಾರ್ಮಿಕ ಸಚಿವರ ಗಮನ ಸೆಳೆದಿದ್ದೇವೆ ಎಂದು ಹೇಳಿದರು.</p>.<p>ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಬಿ.ಎಸ್.ರಮೇಶ್ ಬಾಬು ಮಾತನಾಡಿ, ‘1 ಲಕ್ಷ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುವ ಗುರಿ ಇಟ್ಟುಕೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 10 ಲಕ್ಷ ಅಡುಗೆ ಕಾರ್ಮಿಕರು ಇದ್ದಾರೆ. ಪ್ರತಿ ಜಿಲ್ಲೆಯಲ್ಲಿ 3 ಸಾವಿರ ಇದ್ದಾರೆ’ ಎಂದರು.</p>.<p>ಅಡುಗೆ ಕಾರ್ಮಿಕರಿಗೆ ಅಪಘಾತವಾದರೆ, ಗಾಯಗೊಂಡು ಅಂಗವಿಕಲರಾದರೆ ₹ 1ಲಕ್ಷ ವಿಮೆ ಸಿಗುತ್ತಿದೆ. ಸಹಜ ಮರಣ ಹೊಂದಿದರೆ ₹ 10 ಸಾವಿರ ಸಿಗುತ್ತಿದೆ ಎಂದು ತಿಳಿಸಿದರು.</p>.<p>16ರಂದು ಕೋಲಾರಮ್ಮ ದೇವಾಲಯದ ಎದುರು ಇರುವ ಅನ್ನಪೂರ್ಣೇಶ್ವರಿ ದೇವಾಲಯದ ಬಳಿಕ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್ 27 ರಿಂದ ನಮ್ಮ ಟ್ರಸ್ಟ್ ವತಿಯಿಂದ ಪ್ರತಿ ಶುಕ್ರವಾರ ಅನ್ನದಾನವನ್ನು ಇಟಿಸಿಎಂ ವೃತ್ತದ ಬಳಿ ಇರುವ ಟ್ರಸ್ಟ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದರು.</p>.<p>ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕ ಕೊತ್ತೂರು ಮಂಜುನಾಥ್ ವಹಿಸಲಿದ್ದು, ಸಂಸದ ಎಂ.ಮಲ್ಲೇಶ್ ಬಾಬು, ಜಿಲ್ಲಾಧಿಕಾರಿ ಎಂ.ಆರ್.ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಶ್ಯಾಮ್ ಕುಮಾರ್, ಕ್ಯಾಲನೂರು ಮಂಜುನಾಥ್, ನಾಗರಾಜ್, ಶ್ರೀಕಾಂತ್, ಮಾಲೂರು ಶ್ರೀನಾಥ್, ವೆಂಕಟನಾರಾಯಣ, ಶ್ಯಾಮಕುಮಾರ್ ಹೋಳೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ದೇಶದಲ್ಲೇ ಮೊದಲ ಬಾರಿ ಅಡುಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ. ಈ ಸಂಬಂಧ ಫೆ.16ರಂದು ಮಧ್ಯಾಹ್ನ 2 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷ ಕೆ.ವಿ.ಸುರೇಶ್ ಕುಮಾರ್ ತಿಳಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸಲಾಯಿತು. ಈ ಮೂಲಕ ಪಿಂಚಣಿ, ವಿದ್ಯಾಭ್ಯಾಸ ಸೌಲಭ್ಯ ಸೇರಿದಂತೆ ವಿವಿಧ ಸವಲತ್ತುಗಳು ದೊರಕಿತು. ರಾಜ್ಯ ಅಡುಗೆ ಕಾರ್ಮಿಕರ ಸಂಘಕ್ಕೆ 2025ರಲ್ಲಿ ಮಾನ್ಯತೆ ಸಿಕ್ಕಿದೆ’ ಎಂದರು.</p>.<p>ಅಡುಗೆ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಮಂಡಳಿ ರಚನೆ ಮಾಡಬೇಕು. ಈ ಮೂಲಕ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿರಿಸಿದ್ದು, ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಶೇ 1 ಸೆಸ್ ಹಾಕುವಂತೆ ಕೋರಿದ್ದೇವೆ. ಈ ನಿಧಿಯನ್ನು ಅಡುಗೆ ಕಾರ್ಮಿಕರ ಮಂಡಳಿಗೆ ನೀಡಬಹುದು. ಈ ಬಗ್ಗೆ ಕಾರ್ಮಿಕ ಸಚಿವರ ಗಮನ ಸೆಳೆದಿದ್ದೇವೆ ಎಂದು ಹೇಳಿದರು.</p>.<p>ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಬಿ.ಎಸ್.ರಮೇಶ್ ಬಾಬು ಮಾತನಾಡಿ, ‘1 ಲಕ್ಷ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುವ ಗುರಿ ಇಟ್ಟುಕೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 10 ಲಕ್ಷ ಅಡುಗೆ ಕಾರ್ಮಿಕರು ಇದ್ದಾರೆ. ಪ್ರತಿ ಜಿಲ್ಲೆಯಲ್ಲಿ 3 ಸಾವಿರ ಇದ್ದಾರೆ’ ಎಂದರು.</p>.<p>ಅಡುಗೆ ಕಾರ್ಮಿಕರಿಗೆ ಅಪಘಾತವಾದರೆ, ಗಾಯಗೊಂಡು ಅಂಗವಿಕಲರಾದರೆ ₹ 1ಲಕ್ಷ ವಿಮೆ ಸಿಗುತ್ತಿದೆ. ಸಹಜ ಮರಣ ಹೊಂದಿದರೆ ₹ 10 ಸಾವಿರ ಸಿಗುತ್ತಿದೆ ಎಂದು ತಿಳಿಸಿದರು.</p>.<p>16ರಂದು ಕೋಲಾರಮ್ಮ ದೇವಾಲಯದ ಎದುರು ಇರುವ ಅನ್ನಪೂರ್ಣೇಶ್ವರಿ ದೇವಾಲಯದ ಬಳಿಕ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್ 27 ರಿಂದ ನಮ್ಮ ಟ್ರಸ್ಟ್ ವತಿಯಿಂದ ಪ್ರತಿ ಶುಕ್ರವಾರ ಅನ್ನದಾನವನ್ನು ಇಟಿಸಿಎಂ ವೃತ್ತದ ಬಳಿ ಇರುವ ಟ್ರಸ್ಟ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದರು.</p>.<p>ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕ ಕೊತ್ತೂರು ಮಂಜುನಾಥ್ ವಹಿಸಲಿದ್ದು, ಸಂಸದ ಎಂ.ಮಲ್ಲೇಶ್ ಬಾಬು, ಜಿಲ್ಲಾಧಿಕಾರಿ ಎಂ.ಆರ್.ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಶ್ಯಾಮ್ ಕುಮಾರ್, ಕ್ಯಾಲನೂರು ಮಂಜುನಾಥ್, ನಾಗರಾಜ್, ಶ್ರೀಕಾಂತ್, ಮಾಲೂರು ಶ್ರೀನಾಥ್, ವೆಂಕಟನಾರಾಯಣ, ಶ್ಯಾಮಕುಮಾರ್ ಹೋಳೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>