<p><strong>ಕೋಲಾರ:</strong> ರೈತರನ್ನು ಈ ದೇಶದ ಬೆನ್ನೆಲುಬು, ಅನ್ನದಾತರು ಎಂಬುದಾಗಿ ಬಿಂಬಿಸುತ್ತಾರೆ. ಆದರೆ ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವ ಪ್ರತಿಯೊಬ್ಬರಲ್ಲೂ ಬರಬೇಕೆಂದು ಭೂ ಸಂತ್ರಸ್ತರ ಹೋರಾಟ ಸಮಿತಿಯ ಸಂಚಾಲಕ ಸಿಪಿಎಂ ಗೋಪಾಲ್ ಅಭಿಪ್ರಾಯಪಟ್ಟರು</p>.<p>ತಾಲ್ಲೂಕಿನ ಅರಿನಾಗನಹಳ್ಳಿ ಹತ್ತಿರವಿರುವ ಸಭಾಂಗಣದಲ್ಲಿ ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ಒಳಗಾದ ಮೂರು ತಾಲ್ಲೂಕಿನ ರೈತರನ್ನು ಉದ್ದೇಶಿಸಿ ಮಾತನಾಡಿದರು.</p>.<p>ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಒಳಗೊಂಡಂತೆ ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಆದಾಗ್ಯೂ ರೈತರ ಭೂಮಿಗಳ ಮೇಲೆ ಒತ್ತುವರಿ ಹೆಸರಿನಲ್ಲಿ ರೈತರಿಗೆ ಕಿರುಕುಳ, ಪೊಲೀಸ್ ಠಾಣೆಗಳಲ್ಲಿ ಎಫ್ ಐ ಆರ್ ದಾಖಲು ಮಾಡುವುದು ನಿಂತಿಲ್ಲ. ಆದ್ದರಿಂದ ಮುಂದಿನ ಹೋರಾಟ, ಪ್ರತಿಭಟನೆಗೆ ಎಲ್ಲರೂ ಸಿದ್ದರಾಗಬೇಕು. ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ತಿಳಿಸಿದರು.</p>.<p>ಮತ್ತೊಬ್ಬ ಸಂಚಾಲಕ ಆರ್.ಶ್ರೀನಿವಾಸನ್ ಮಾತನಾಡಿ, 'ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಕಂದಾಯ ಇಲಾಖೆಯ ಸರ್ಕಾರಿ ಗೋಮಾಳ ಜಮೀನುಗಳಲ್ಲಿನ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು' ಎಂದರು.</p>.<p>ಮುಖಂಡ ಪಾಪೇಗೌಡರು ಮಾತನಾಡಿ, ‘ಅರಣ್ಯ ಇಲಾಖೆಯವರು ತಮ್ಮ ಇಲಾಖೆಗೆ ಬಂದಂತಹ ಅನುದಾನಗಳನ್ನು ಸರಿಯಾಗಿ ಬಳಕೆ ಮಾಡಿದ್ದರೆ ವಾತಾವರಣದಲ್ಲಿ ಯಾವುದೇ ಏರುಪೇರು ಆಗುತ್ತಿರಲಿಲ್ಲ. ಎಲ್ಲಿಯೂ ಸರಿಯಾಗಿ ಗಿಡಮರಗಳನ್ನು ನೆಟ್ಟು ಅದನ್ನು ಪೋಷಿಸಿರುವುದು ಕಂಡು ಬರುತ್ತಿಲ್ಲ’ ಎಂದು ಹೇಳಿದರು.</p>.<p>ಗೋವಿಂದಪ್ಪ ಮಾತನಾಡಿ, ‘ಕಿರು ಅರಣ್ಯ, ಗ್ರಾಮ ಅರಣ್ಯ, ಜಿಲ್ಲಾ ಅರಣ್ಯಗಳು ಸ್ವಾತಂತ್ರ ಪೂರ್ವದಲ್ಲಿ ಮಾರ್ಪಾಡಾಗಿವೆ. ಇದು ಅರಣ್ಯ ಇಲಾಖೆಯವರಿಗೆ ಅರ್ಥವೇ ಆಗುತ್ತಿಲ್ಲ’ ಎಂದರು.</p>.<p>ಪಾತಕೋಟೆ ನವೀನ್ ಮಾತನಾಡಿ, ‘ರೈತರ ಭೂಮಿ ಕಂದಾಯ ಇಲಾಖೆಯವರು ಸಕ್ಷಮ ಪ್ರಾಧಿಕಾರದಿಂದ ಕಾನೂನು ರೀತಿಯಲ್ಲಿ ನೀಡಿರುವುದರಿಂದ ನಮ್ಮ ಭೂಮಿ ನಮ್ಮ ಹಕ್ಕು ಮುಂದಿನ ಹೋರಾಟಕ್ಕೆ ಜಿಲ್ಲೆ ಎಲ್ಲಾ ರೈತರು ಸಜ್ಜಾಗಬೇಕು’ ಎಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಹರಟಿ ಪ್ರಕಾಶ್, ಲೋಕೇಶ್, ಸೈಯದ್ ಫಾರೂಕ್, ಗಂಗಮ್ಮ ಮಂಜುಳಾ, ಶಂಕರಪ್ಪ, ವೆಂಕಟರಮಣಪ್ಪ, ಚಲಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರೈತರನ್ನು ಈ ದೇಶದ ಬೆನ್ನೆಲುಬು, ಅನ್ನದಾತರು ಎಂಬುದಾಗಿ ಬಿಂಬಿಸುತ್ತಾರೆ. ಆದರೆ ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವ ಪ್ರತಿಯೊಬ್ಬರಲ್ಲೂ ಬರಬೇಕೆಂದು ಭೂ ಸಂತ್ರಸ್ತರ ಹೋರಾಟ ಸಮಿತಿಯ ಸಂಚಾಲಕ ಸಿಪಿಎಂ ಗೋಪಾಲ್ ಅಭಿಪ್ರಾಯಪಟ್ಟರು</p>.<p>ತಾಲ್ಲೂಕಿನ ಅರಿನಾಗನಹಳ್ಳಿ ಹತ್ತಿರವಿರುವ ಸಭಾಂಗಣದಲ್ಲಿ ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ಒಳಗಾದ ಮೂರು ತಾಲ್ಲೂಕಿನ ರೈತರನ್ನು ಉದ್ದೇಶಿಸಿ ಮಾತನಾಡಿದರು.</p>.<p>ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಒಳಗೊಂಡಂತೆ ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಆದಾಗ್ಯೂ ರೈತರ ಭೂಮಿಗಳ ಮೇಲೆ ಒತ್ತುವರಿ ಹೆಸರಿನಲ್ಲಿ ರೈತರಿಗೆ ಕಿರುಕುಳ, ಪೊಲೀಸ್ ಠಾಣೆಗಳಲ್ಲಿ ಎಫ್ ಐ ಆರ್ ದಾಖಲು ಮಾಡುವುದು ನಿಂತಿಲ್ಲ. ಆದ್ದರಿಂದ ಮುಂದಿನ ಹೋರಾಟ, ಪ್ರತಿಭಟನೆಗೆ ಎಲ್ಲರೂ ಸಿದ್ದರಾಗಬೇಕು. ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ತಿಳಿಸಿದರು.</p>.<p>ಮತ್ತೊಬ್ಬ ಸಂಚಾಲಕ ಆರ್.ಶ್ರೀನಿವಾಸನ್ ಮಾತನಾಡಿ, 'ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಕಂದಾಯ ಇಲಾಖೆಯ ಸರ್ಕಾರಿ ಗೋಮಾಳ ಜಮೀನುಗಳಲ್ಲಿನ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು' ಎಂದರು.</p>.<p>ಮುಖಂಡ ಪಾಪೇಗೌಡರು ಮಾತನಾಡಿ, ‘ಅರಣ್ಯ ಇಲಾಖೆಯವರು ತಮ್ಮ ಇಲಾಖೆಗೆ ಬಂದಂತಹ ಅನುದಾನಗಳನ್ನು ಸರಿಯಾಗಿ ಬಳಕೆ ಮಾಡಿದ್ದರೆ ವಾತಾವರಣದಲ್ಲಿ ಯಾವುದೇ ಏರುಪೇರು ಆಗುತ್ತಿರಲಿಲ್ಲ. ಎಲ್ಲಿಯೂ ಸರಿಯಾಗಿ ಗಿಡಮರಗಳನ್ನು ನೆಟ್ಟು ಅದನ್ನು ಪೋಷಿಸಿರುವುದು ಕಂಡು ಬರುತ್ತಿಲ್ಲ’ ಎಂದು ಹೇಳಿದರು.</p>.<p>ಗೋವಿಂದಪ್ಪ ಮಾತನಾಡಿ, ‘ಕಿರು ಅರಣ್ಯ, ಗ್ರಾಮ ಅರಣ್ಯ, ಜಿಲ್ಲಾ ಅರಣ್ಯಗಳು ಸ್ವಾತಂತ್ರ ಪೂರ್ವದಲ್ಲಿ ಮಾರ್ಪಾಡಾಗಿವೆ. ಇದು ಅರಣ್ಯ ಇಲಾಖೆಯವರಿಗೆ ಅರ್ಥವೇ ಆಗುತ್ತಿಲ್ಲ’ ಎಂದರು.</p>.<p>ಪಾತಕೋಟೆ ನವೀನ್ ಮಾತನಾಡಿ, ‘ರೈತರ ಭೂಮಿ ಕಂದಾಯ ಇಲಾಖೆಯವರು ಸಕ್ಷಮ ಪ್ರಾಧಿಕಾರದಿಂದ ಕಾನೂನು ರೀತಿಯಲ್ಲಿ ನೀಡಿರುವುದರಿಂದ ನಮ್ಮ ಭೂಮಿ ನಮ್ಮ ಹಕ್ಕು ಮುಂದಿನ ಹೋರಾಟಕ್ಕೆ ಜಿಲ್ಲೆ ಎಲ್ಲಾ ರೈತರು ಸಜ್ಜಾಗಬೇಕು’ ಎಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಹರಟಿ ಪ್ರಕಾಶ್, ಲೋಕೇಶ್, ಸೈಯದ್ ಫಾರೂಕ್, ಗಂಗಮ್ಮ ಮಂಜುಳಾ, ಶಂಕರಪ್ಪ, ವೆಂಕಟರಮಣಪ್ಪ, ಚಲಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>