<p><strong>ಕೋಲಾರ</strong>: ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿರುವ ಜಿಲ್ಲೆಯ ಪೊಲೀಸರು ಸುಮಾರು ₹ 4.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕೋಲಾರದ ವಿವಿಧ ಠಾಣೆಗಳ ಪೊಲೀಸರು ₹ 31.69 ಲಕ್ಷ ಮೌಲ್ಯದ 76 ಬೈಕ್, ₹ 24.53 ಲಕ್ಷ ಬೆಲೆ ಬಾಳುವ ಕಾರು, ₹ 36.67 ಲಕ್ಷ ಮೌಲ್ಯದ ಚಿನ್ನಾಭರಣ, ₹ 2.16 ಲಕ್ಷ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ₹ 15.11 ಲಕ್ಷ ನಗದು ಜಪ್ತಿ ಮಾಡಿದ್ದಾರೆ.</p>.<p>ಕೆಜಿಎಫ್ ಪೊಲೀಸ್ ಜಿಲ್ಲಾ ಸಿಬ್ಬಂದಿಯು ₹ 21 ಲಕ್ಷ ಬೆಲೆ ಬಾಳವು 45 ಬೈಕ್, ₹ 3 ಲಕ್ಷ ಬೆಲೆ ಬಾಳುವ ಕಾರು, ₹ 37.38 ಲಕ್ಷ ಮೌಲ್ಯದ ಆಭರಣಗಳು, ₹ 10 ಲಕ್ಷ ಬೆಲೆ ಬಾಳುವ ರಕ್ತಚಂದನ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಅವರು ಪೊಲೀಸರು ವಶಪಡಿಸಿಕೊಂಡ ಹಣ, ಆಭರಣ ಹಾಗೂ ವಾಹನಗಳನ್ನು ಗುರುವಾರ ವಾರಸುದಾರರಿಗೆ ಹಸ್ತಾಂತರಿಸಿದರು.</p>.<p><strong>ಗಾಂಜಾ ಮಾರಾಟ: ಬಂಧನ</strong></p>.<p>ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ತಾಲ್ಲೂಕಿನ ವೇಮಗಲ್ ಪೊಲೀಸರು ₹ 5 ಲಕ್ಷ ಮೌಲ್ಯದ 20 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮೂಲದ ಮಾರೀಶ್ವರನ್ ಮತ್ತು ಶ್ಯಾಮ್ ಬಂಧಿತರು. ಆರೋಪಿಗಳು ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಗಾಂಜಾ ತಂದು ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಜೋಡಿಕೃಷ್ಣಾಪುರದ ಬಳಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿರುವ ಜಿಲ್ಲೆಯ ಪೊಲೀಸರು ಸುಮಾರು ₹ 4.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕೋಲಾರದ ವಿವಿಧ ಠಾಣೆಗಳ ಪೊಲೀಸರು ₹ 31.69 ಲಕ್ಷ ಮೌಲ್ಯದ 76 ಬೈಕ್, ₹ 24.53 ಲಕ್ಷ ಬೆಲೆ ಬಾಳುವ ಕಾರು, ₹ 36.67 ಲಕ್ಷ ಮೌಲ್ಯದ ಚಿನ್ನಾಭರಣ, ₹ 2.16 ಲಕ್ಷ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ₹ 15.11 ಲಕ್ಷ ನಗದು ಜಪ್ತಿ ಮಾಡಿದ್ದಾರೆ.</p>.<p>ಕೆಜಿಎಫ್ ಪೊಲೀಸ್ ಜಿಲ್ಲಾ ಸಿಬ್ಬಂದಿಯು ₹ 21 ಲಕ್ಷ ಬೆಲೆ ಬಾಳವು 45 ಬೈಕ್, ₹ 3 ಲಕ್ಷ ಬೆಲೆ ಬಾಳುವ ಕಾರು, ₹ 37.38 ಲಕ್ಷ ಮೌಲ್ಯದ ಆಭರಣಗಳು, ₹ 10 ಲಕ್ಷ ಬೆಲೆ ಬಾಳುವ ರಕ್ತಚಂದನ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಅವರು ಪೊಲೀಸರು ವಶಪಡಿಸಿಕೊಂಡ ಹಣ, ಆಭರಣ ಹಾಗೂ ವಾಹನಗಳನ್ನು ಗುರುವಾರ ವಾರಸುದಾರರಿಗೆ ಹಸ್ತಾಂತರಿಸಿದರು.</p>.<p><strong>ಗಾಂಜಾ ಮಾರಾಟ: ಬಂಧನ</strong></p>.<p>ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ತಾಲ್ಲೂಕಿನ ವೇಮಗಲ್ ಪೊಲೀಸರು ₹ 5 ಲಕ್ಷ ಮೌಲ್ಯದ 20 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮೂಲದ ಮಾರೀಶ್ವರನ್ ಮತ್ತು ಶ್ಯಾಮ್ ಬಂಧಿತರು. ಆರೋಪಿಗಳು ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಗಾಂಜಾ ತಂದು ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಜೋಡಿಕೃಷ್ಣಾಪುರದ ಬಳಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>