<p><strong>ಕೋಲಾರ:</strong> ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಸವಾಲಾಗಿ ಸ್ವೀಕರಿಸಿರುವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ (ಡಿಡಿಪಿಐ) ಅಲ್ಮಾಸ್ ಫರ್ವೀನ್ ತಾಜ್, ಶಾಲೆಗೆ ಗೈರಾಗುವ ಮಕ್ಕಳ ಮನೆಗಳಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ರಾತ್ರಿ ವೇಳೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮನೆಯಲ್ಲಿ ವಿದ್ಯಾರ್ಥಿಗಳ ಕಲಿಗೆ ರೀತಿ, ಪೋಷಕರ ಮಾರ್ಗದರ್ಶದ ರೀತಿ ರಿವಾಜುಗಳನ್ನು ಪರಿಶೀಲಿಸಿದರು. ಮಕ್ಕಳು ಕಲಿಕಾ ಚಟುವಟಿಕೆಗಳಲ್ಲಿ ನಿರತಾಗಿರುವಂತೆ ಮಾಡಲು ಪೋಷಕರಲ್ಲಿ ಜಾಗೃತಿ ಮೂಡಿಸಿದರು.</p>.<p>ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದಾಖಲಾಗಿದ್ದು, ಶಾಲೆಗೆ ಗೈರಾಗುವ, ನಿಧಾನ ಕಲಿಕೆ, ಕಲಿಕೆಯಲ್ಲಿ ಹಿಂದುಳಿದಿರುವಿಕೆಯ ಸಂಬಂಧ ರಹಮತ್ ನಗರ ವ್ಯಾಪ್ತಿಯ ಹಲವು ಮಕ್ಕಳ ಮನೆಗಳಿಗೆ ಭೇಟಿ ನೀಡಿದರು. ಮಕ್ಕಳೊಂದಿಗೆ ಕುಳಿತು ಅವರ ಕಲಿಕೆ ಮಟ್ಟ ಪರಿಶೀಲಿಸಿದರು.</p>.<p>ಶಾಲೆಯಿಂದ ಮನೆಗೆ ಹೋಗುವ ಮಕ್ಕಳು, ರಾತ್ರಿ ಸರಿಯಾಗಿಯೇ ಓದುತ್ತಿದ್ದಾರೆಯೇ ಎಂಬುದನ್ನು ಶಿಕ್ಷಕರು ಪರಿಶೀಲಿಸಲು ಮನೆ ಭೇಟಿ ಕಾರ್ಯಕ್ರಮ ಹೆಚ್ಚು ಪರಿಣಾಮಕಾರಿ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಗಳನ್ನು ಇಲಾಖೆ ನಡೆಸಲಿದೆ ಎಂದರು.</p>.<p>ಪೋಷಕರ ಸಹಕಾರವಿಲ್ಲದೇ ಶೈಕ್ಷಣಿಕ ಪ್ರಗತಿ ಅಸಾಧ್ಯ. ಶಿಕ್ಷಕರ ಪ್ರಯತ್ನಕ್ಕೆ ತಾವು ಕೈಜೋಡಿಸಬೇಕು. ಶಾಲೆಯಿಂದ ಮನೆಗೆ ಬಂದ ಮಕ್ಕಳು ಮನೆಯಲ್ಲಿ ಕುಳಿತು ಓದಲು ಪ್ರೇರೇಪಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಮಕ್ಕಳು ತಪ್ಪು ಹಾದಿ ತುಳಿಯುತ್ತಿದ್ದಾರೆಯೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆಯೇ ಎಂಬುದರ ಕುರಿತೂ ಗಮನಹರಿಸಬೇಕು. ಓದುವ ಸಂದರ್ಭದಲ್ಲಿ ಮಕ್ಕಳನ್ನು ಸಂಪಾದನೆ, ದುಡಿಮೆಗೆ ಕಳುಹಿಸುವುದು ಸರಿಯಲ್ಲ. ಇದು ಕಾನೂನು ರೀತಿಯಲ್ಲೂ ಅಪರಾಧ ಎಂದು ಎಚ್ಚರಿಸಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನು ಕೇವಲ 72 ದಿನಗಳಿವೆ. ಇಂತಹ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಗೈರಾದರೆ ಅವರ ಕಲಿಕೆಯ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂಬುದನ್ನು ಅರಿತು ಅವರಿಗೆ ಮಾರ್ಗದರ್ಶನ ನೀಡಿ ಎಂದರು.</p>.<p>ಯಾವುದೇ ಮಗು ಶಾಲೆಗೆ ಗೈರಾದರೆ ಶಾಲೆಯ ಮೊದಲ ಅವಧಿ ಮುಗಿಯುತ್ತಿದ್ದಂತೆ ಅವರ ಪೋಷಕರಿಗೆ ತರಗತಿಯ ಶಿಕ್ಷಕರು ದೂರವಾಣಿ ಕರೆ ಮಾಡಿ ಕಾರಣ ತಿಳಿದುಕೊಳ್ಳಬೇಕು. ಆ ಮಗುವನ್ನು ಶಾಲೆಗೆ ಕಳುಹಿಸಲು ಒತ್ತಡ ಹಾಕಬೇಕು ಎಂದು ಸೂಚನೆ ನೀಡಿದರು.</p>.<p>ಜೂನಿಯರ್ ಕಾಲೇಜುಗಳ ಕಳಪೆ ಫಲಿತಾಂಶವೇ ಜಿಲ್ಲೆಯ ಗುಣಮಟ್ಟದ ಫಲಿತಾಂಶಕ್ಕೆ ಪೆಟ್ಟು ನೀಡುತ್ತಿದೆ. ತಾವು ಉತ್ತಮ ಫಲಿತಾಂಶ ತರಲು ನಿರಂತರ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.</p>.<p>ಮನೆ ಭೇಟಿ ಸಂದರ್ಭದಲ್ಲಿ ಡಿಡಿಪಿಐ ಅವರೊಂದಿಗೆ ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿ ರಾಜೇಶ್ವರಿ, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ಉಪಪ್ರಾಂಶುಪಾಲೆ ರಾಧಮ್ಮ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ಕಚೇರಿಯ ತಾಂತ್ರಜ್ಞ ಶರಣಪ್ಪ ಜಮಾದಾರ್, ಸಿಆರ್ಪಿ ಮುಜಾಹಿದ್ ಪಾಷಾ, ಪೋಷಕರು, ವಿದ್ಯಾರ್ಥಿಗಳು ಇದ್ದರು.</p>.<p> <strong>ಜಿಲ್ಲೆಯಾದ್ಯಂತ ಮಕ್ಕಳ ಮನೆಗೆ ಭೇಟಿ</strong> </p><p>ಶಾಲೆಗೆ ಗೈರಾಗುವ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಮನೆಗಳಿಗೆ ಶಿಕ್ಷಕರು ಭೇಟಿ ನೀಡಿ ಪೋಷಕರಿಗೆ ಮಾರ್ಗದರ್ಶನ ನೀಡುವ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು ಇಡೀ ಜಿಲ್ಲೆಯಾದ್ಯಂತ ವಿಸ್ತರಣೆಯಾಗಲಿದೆ ಎಂದು ಅಲ್ಮಾಸ್ ಫರ್ವೀನ್ ತಾಜ್ ತಿಳಿಸಿದರು. ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮಪಡಿಸುವ ಪ್ರಯತ್ನ ಮಾತ್ರವಲ್ಲ; ಶಾಲೆಯಿಂದ ದೂರವುಳಿಯುವುದನ್ನು ತಪ್ಪಿಸುವ ಸದುದ್ದೇಶವೂ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಸವಾಲಾಗಿ ಸ್ವೀಕರಿಸಿರುವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ (ಡಿಡಿಪಿಐ) ಅಲ್ಮಾಸ್ ಫರ್ವೀನ್ ತಾಜ್, ಶಾಲೆಗೆ ಗೈರಾಗುವ ಮಕ್ಕಳ ಮನೆಗಳಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ರಾತ್ರಿ ವೇಳೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮನೆಯಲ್ಲಿ ವಿದ್ಯಾರ್ಥಿಗಳ ಕಲಿಗೆ ರೀತಿ, ಪೋಷಕರ ಮಾರ್ಗದರ್ಶದ ರೀತಿ ರಿವಾಜುಗಳನ್ನು ಪರಿಶೀಲಿಸಿದರು. ಮಕ್ಕಳು ಕಲಿಕಾ ಚಟುವಟಿಕೆಗಳಲ್ಲಿ ನಿರತಾಗಿರುವಂತೆ ಮಾಡಲು ಪೋಷಕರಲ್ಲಿ ಜಾಗೃತಿ ಮೂಡಿಸಿದರು.</p>.<p>ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದಾಖಲಾಗಿದ್ದು, ಶಾಲೆಗೆ ಗೈರಾಗುವ, ನಿಧಾನ ಕಲಿಕೆ, ಕಲಿಕೆಯಲ್ಲಿ ಹಿಂದುಳಿದಿರುವಿಕೆಯ ಸಂಬಂಧ ರಹಮತ್ ನಗರ ವ್ಯಾಪ್ತಿಯ ಹಲವು ಮಕ್ಕಳ ಮನೆಗಳಿಗೆ ಭೇಟಿ ನೀಡಿದರು. ಮಕ್ಕಳೊಂದಿಗೆ ಕುಳಿತು ಅವರ ಕಲಿಕೆ ಮಟ್ಟ ಪರಿಶೀಲಿಸಿದರು.</p>.<p>ಶಾಲೆಯಿಂದ ಮನೆಗೆ ಹೋಗುವ ಮಕ್ಕಳು, ರಾತ್ರಿ ಸರಿಯಾಗಿಯೇ ಓದುತ್ತಿದ್ದಾರೆಯೇ ಎಂಬುದನ್ನು ಶಿಕ್ಷಕರು ಪರಿಶೀಲಿಸಲು ಮನೆ ಭೇಟಿ ಕಾರ್ಯಕ್ರಮ ಹೆಚ್ಚು ಪರಿಣಾಮಕಾರಿ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಗಳನ್ನು ಇಲಾಖೆ ನಡೆಸಲಿದೆ ಎಂದರು.</p>.<p>ಪೋಷಕರ ಸಹಕಾರವಿಲ್ಲದೇ ಶೈಕ್ಷಣಿಕ ಪ್ರಗತಿ ಅಸಾಧ್ಯ. ಶಿಕ್ಷಕರ ಪ್ರಯತ್ನಕ್ಕೆ ತಾವು ಕೈಜೋಡಿಸಬೇಕು. ಶಾಲೆಯಿಂದ ಮನೆಗೆ ಬಂದ ಮಕ್ಕಳು ಮನೆಯಲ್ಲಿ ಕುಳಿತು ಓದಲು ಪ್ರೇರೇಪಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಮಕ್ಕಳು ತಪ್ಪು ಹಾದಿ ತುಳಿಯುತ್ತಿದ್ದಾರೆಯೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆಯೇ ಎಂಬುದರ ಕುರಿತೂ ಗಮನಹರಿಸಬೇಕು. ಓದುವ ಸಂದರ್ಭದಲ್ಲಿ ಮಕ್ಕಳನ್ನು ಸಂಪಾದನೆ, ದುಡಿಮೆಗೆ ಕಳುಹಿಸುವುದು ಸರಿಯಲ್ಲ. ಇದು ಕಾನೂನು ರೀತಿಯಲ್ಲೂ ಅಪರಾಧ ಎಂದು ಎಚ್ಚರಿಸಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನು ಕೇವಲ 72 ದಿನಗಳಿವೆ. ಇಂತಹ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಗೈರಾದರೆ ಅವರ ಕಲಿಕೆಯ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂಬುದನ್ನು ಅರಿತು ಅವರಿಗೆ ಮಾರ್ಗದರ್ಶನ ನೀಡಿ ಎಂದರು.</p>.<p>ಯಾವುದೇ ಮಗು ಶಾಲೆಗೆ ಗೈರಾದರೆ ಶಾಲೆಯ ಮೊದಲ ಅವಧಿ ಮುಗಿಯುತ್ತಿದ್ದಂತೆ ಅವರ ಪೋಷಕರಿಗೆ ತರಗತಿಯ ಶಿಕ್ಷಕರು ದೂರವಾಣಿ ಕರೆ ಮಾಡಿ ಕಾರಣ ತಿಳಿದುಕೊಳ್ಳಬೇಕು. ಆ ಮಗುವನ್ನು ಶಾಲೆಗೆ ಕಳುಹಿಸಲು ಒತ್ತಡ ಹಾಕಬೇಕು ಎಂದು ಸೂಚನೆ ನೀಡಿದರು.</p>.<p>ಜೂನಿಯರ್ ಕಾಲೇಜುಗಳ ಕಳಪೆ ಫಲಿತಾಂಶವೇ ಜಿಲ್ಲೆಯ ಗುಣಮಟ್ಟದ ಫಲಿತಾಂಶಕ್ಕೆ ಪೆಟ್ಟು ನೀಡುತ್ತಿದೆ. ತಾವು ಉತ್ತಮ ಫಲಿತಾಂಶ ತರಲು ನಿರಂತರ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.</p>.<p>ಮನೆ ಭೇಟಿ ಸಂದರ್ಭದಲ್ಲಿ ಡಿಡಿಪಿಐ ಅವರೊಂದಿಗೆ ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿ ರಾಜೇಶ್ವರಿ, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ಉಪಪ್ರಾಂಶುಪಾಲೆ ರಾಧಮ್ಮ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ಕಚೇರಿಯ ತಾಂತ್ರಜ್ಞ ಶರಣಪ್ಪ ಜಮಾದಾರ್, ಸಿಆರ್ಪಿ ಮುಜಾಹಿದ್ ಪಾಷಾ, ಪೋಷಕರು, ವಿದ್ಯಾರ್ಥಿಗಳು ಇದ್ದರು.</p>.<p> <strong>ಜಿಲ್ಲೆಯಾದ್ಯಂತ ಮಕ್ಕಳ ಮನೆಗೆ ಭೇಟಿ</strong> </p><p>ಶಾಲೆಗೆ ಗೈರಾಗುವ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಮನೆಗಳಿಗೆ ಶಿಕ್ಷಕರು ಭೇಟಿ ನೀಡಿ ಪೋಷಕರಿಗೆ ಮಾರ್ಗದರ್ಶನ ನೀಡುವ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು ಇಡೀ ಜಿಲ್ಲೆಯಾದ್ಯಂತ ವಿಸ್ತರಣೆಯಾಗಲಿದೆ ಎಂದು ಅಲ್ಮಾಸ್ ಫರ್ವೀನ್ ತಾಜ್ ತಿಳಿಸಿದರು. ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮಪಡಿಸುವ ಪ್ರಯತ್ನ ಮಾತ್ರವಲ್ಲ; ಶಾಲೆಯಿಂದ ದೂರವುಳಿಯುವುದನ್ನು ತಪ್ಪಿಸುವ ಸದುದ್ದೇಶವೂ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>