ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಕೋಲಾರ ಜಿಲ್ಲೆಗೆ ವಿಶೇಷ ಅನುದಾನ: ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ

ಸರ್ಕಾರಿ ಕಾಲೇಜು, ವಿ.ವಿ ಕಟ್ಟಡ ಕಾಮಗಾರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಶಂಕುಸ್ಥಾಪನೆ
Published : 30 ಅಕ್ಟೋಬರ್ 2025, 7:51 IST
Last Updated : 30 ಅಕ್ಟೋಬರ್ 2025, 7:51 IST
ಫಾಲೋ ಮಾಡಿ
Comments
ರಾಜ್ಯ ಸರ್ಕಾರ ಕೋಲಾರ ಜಿಲ್ಲೆಗೆ ಈವರೆಗೆ ಸಾವಿರ ಕೋಟಿ ಅನುದಾನ ನೀಡಿದೆ. ಇದೀಗ ₹ 100 ಕೋಟಿ ವೆಚ್ಚದಲ್ಲಿ ಅಂತರಗಂಗೆ-ಕೋಲಾರಮ್ಮ ಕೆರೆ ಮಧ್ಯೆ ಕಾಲುವೆ ಅಭಿವೃದ್ಧಿಪಡಿಸಲಾಗುತ್ತಿದೆ
ಬೈರತಿ ಸುರೇಶ್‌ ಜಿಲ್ಲಾ ಉಸ್ತುವಾರಿ ಸಚಿವ
ರೈತರಿಗೆ ಉತ್ತಮ ಬೆಲೆ ಆರೋಗ್ಯ ಶಿಕ್ಷಣ ಹಾಗೂ ಉದ್ಯೋಗಕ್ಕೆ ಒತ್ತು ನೀಡಿದರೆ ಯಾರೊಬ್ಬರೂ ಜನಪ್ರತಿನಿಧಿಗಳ ಬಳಿ ನೆರವಿಗೆ ಬರವುದಿಲ್ಲ
ಕೊತ್ತೂರು ಮಂಜುನಾಥ್‌ ಶಾಸಕ
ಉತ್ತರ ವಿ.ವಿ 24 ವಿಧಾನಸಭಾ ಕ್ಷೇತ್ರ ವ್ಯಾಪ್ತಿ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು 24 ವಿಧಾನಸಭಾ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಅಮರಾವತಿ ಬಳಿ 160 ಎಕರೆ ವಿಸ್ತೀರ್ಣದಲ್ಲಿ ಉತ್ತಮ ಕ್ಯಾಂಪಸ್ ನಿರ್ಮಾಣವಾಗುತ್ತಿದ್ದು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ನೆರವಾಗಲಿದೆ ಎಂದು ಡಾ.ಎಂ.ಸಿ.ಸುಧಾಕರ್‌ ಹೇಳಿದರು.
ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ
ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಸರ್ಕಾರ ಮತ್ತು ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಉತ್ತೀರ್ಣರಾಗುವ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷವೂ ₹30 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ 37 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು. ವಿದೇಶಿ ವ್ಯಾಸಂಗಕ್ಕೆ ಬೆಂಬಲ: ಪ್ರತಿ ವರ್ಷ 5 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲು ಯೋಜಿಸಲಾಗುತ್ತಿದೆ. ಕಾಲೇಜುಗಳ ಜೊತೆಗೆ ಜಿಲ್ಲೆಯ ಇತರೆ ಮೂಲಸೌಕರ್ಯಗಳಿಗೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT