<p>ಕೋಲಾರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಸೆಗೆ ಒಳಗಾಗಿದ್ದ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಡಳಿತದಲ್ಲೂ ಅವಕಾಶ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ.</p>.<p>ಅಭಿವೃದ್ಧಿ ವಿಚಾರದಲ್ಲಿ, ಸಚಿವ ಸ್ಥಾನ ಸಂಬಂಧ ಪದೇಪದೇ ನಿರ್ಲಕ್ಷಿಸುತ್ತಿರುವ ಹಾಗೂ ನಿರಂತರವಾಗಿ ಅನ್ಯಾಯ ಎಸಗುತ್ತಿರುವ ಬಗ್ಗೆ ಜಿಲ್ಲೆಯಲ್ಲಿ ಆಕ್ರೋಶ ಮಡುಗಟ್ಟಿದೆ.</p>.<p>ಕಾಂಗ್ರೆಸ್ ಪಕ್ಷದ ನಾಲ್ವರು ಜಿಲ್ಲೆಯಲ್ಲಿ ಶಾಸಕರಾಗಿದ್ದು, ಬುಧವಾರ ನಡೆದ ಸಚಿವ ಸಂಪುಟ ಪುನರ್ ರಚನೆಯಲ್ಲಿ ಒಬ್ಬರಿಗೂ ಮಂತ್ರಿ ಭಾಗ್ಯ ಸಿಕ್ಕಿಲ್ಲ. ಈ ಸಂಬಂಧ ಈ ಶಾಸಕರು ಪದೇಪದೇ ಬೇಸರ ಹೊರಹಾಕುತ್ತಲೇ ಇದ್ದಾರೆ.</p>.<p>ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸತತ ಎರಡನೇ ಬಾರಿ ಗೆದ್ದಿರುವ ಒಕ್ಕಲಿಗ ಸಮುದಾಯದ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆಜಿಎಫ್ ಮೀಸಲು ಕ್ಷೇತ್ರದ ಶಾಸಕಿ ರೂಪಕಲಾ ಎಂ.ಶಶಿಧರ್, ಎರಡನೇ ಬಾರಿ ಶಾಸಕರಾಗಿರುವ ಕೋಲಾರ ಕ್ಷೇತ್ರದ ಕೊತ್ತೂರು ಮಂಜುನಾಥ್ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ರೂಪಕಲಾ ಅವರಿಗೆ ಮಹಿಳಾ ಕೋಟದಲ್ಲೇ ಸಿಗುವ ಸಾಧ್ಯತೆ ಇತ್ತು. ಏಕೆಂದರೆ ಕಾಂಗ್ರೆಸ್ನಿಂದ ಗೆದ್ದ ಮಹಿಳೆಯರೇ ನಾಲ್ವರು. ಪರಿಶಿಷ್ಟ ಜಾತಿ ಎಡಗೈ ಸಮುದಾಯದ ರೂಪಕಲಾ ಸತತ ಎರಡನೇ ಬಾರಿ ಗೆದ್ದಿದ್ದಾರೆ. ಆದರೆ, ಅವರ ತಂದೆ ಕೆ.ಎಚ್.ಮುನಿಯಪ್ಪ ಅವರಿಗೆ ಎರಡನೇ ಬಾರಿ ಅವಕಾಶ ಸಿಕ್ಕಿದ್ದರಿಂದ ಇವರಿಗೆ ಸಚಿವ ಸ್ಥಾನ ಕೈತಪ್ಪಿದೆ.</p>.<p>ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಜಿಲ್ಲೆಯ ಕಾಂಗ್ರೆಸ್ನ ನಾಲ್ವರೂ ಶಾಸಕರು ವಿವಿಧ ಹಂತಗಳಲ್ಲಿ ಲಾಬಿ ನಡೆಸಿದ್ದರು. ನವದೆಹಲಿಗೆ ಹೋಗಿ ಹೈಕಮಾಂಡ್ಗೆ ಭೇಟಿಯಾಗಿ ಹಕ್ಕೊತ್ತಾಯ ಮಂಡಿಸಿದ್ದರು. ಅವರ ಅಭಿಮಾನಿಗಳು ಕ್ಷೇತ್ರದಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿದ್ದರು.</p>.<p>ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಕೋಲಾರ ಜಿಲ್ಲೆಗಿಂತ ಕಡಿಮೆ ಕಾಂಗ್ರೆಸ್ ಶಾಸಕರು ಗೆದ್ದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಒಂದು ಸಚಿವ ಸ್ಥಾನ ಸಿಕ್ಕಿತ್ತು. ಡಾ.ಎಂ.ಸಿ.ಸುಧಾಕರ್ ಉನ್ನತ ಶಿಕ್ಷಣ ಸಚಿವರಾಗಿದ್ದರು.</p>.<p>ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೂ ಜಿಲ್ಲೆಗೆ ಅವಕಾಶ ಸಿಕ್ಕಿರಲಿಲ್ಲ. ಕೊನೆಯ 17 ತಿಂಗಳ ಅವಧಿಗೆ ಕೆ.ಆರ್.ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದರು. 2018ರಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಲೂ ಜಿಲ್ಲೆಯ ಯಾರೊಬ್ಬರಿಗೆ ಸಚಿವ ಸ್ಥಾನ ಸಿಗಲಿಲ್ಲ. ಆಗ ರಮೇಶ್ ಕುಮಾರ್ ಎರಡನೇ ಬಾರಿ ವಿಧಾನಸಭೆ ಸಭಾಧ್ಯಕ್ಷರಾಗಿದ್ದರು.</p>.<p><strong>ಮತ್ತೆ ಮುನಿಯಪ್ಪಗೆ ಅವಕಾಶ</strong></p><p>ಕೋಲಾರ ಜಿಲ್ಲೆಯವರಾದ ಕೆ.ಎಚ್.ಮುನಿಯಪ್ಪ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಮೀಸಲು ಕ್ಷೇತ್ರದ ಶಾಸಕರಾಗಿರುವ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಆಹಾರ ಸಚಿವರಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದ ಕಾರಣ ಸಚಿವ ಸಂಪುಟ ಪುನರ್ ರಚನೆ ಆಗಿದ್ದು, ಮತ್ತೊಮ್ಮೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.</p><p>ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತ ಏಳು ಬಾರಿ ಸಂಸದರಾಗಿ, ಯುಪಿಎ ಸರ್ಕಾರದ ಅವಧಿಯಲ್ಲಿ ಹತ್ತು ವರ್ಷ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2023ರಲ್ಲಿ ರಾಜ್ಯ ರಾಜಕಾರಣಕ್ಕೆ ಬಂದಿದ್ದರು.</p><p>ಮುನಿಯಪ್ಪ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯವರು. ತಾಲ್ಲೂಕು ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿದ್ದರು. 1991ರಲ್ಲಿ ಲೋಕಸಭೆ ಪ್ರವೇಶಿಸಿದ್ದರು.</p><p><strong>ಅಪ್ಪ, ಮಗಳ ನಿರ್ಧಾರಕ್ಕೆ ಬಿಟ್ಟಿದ್ದ ಹೈಕಮಾಂಡ್</strong></p><p>ಸಚಿವ ಸ್ಥಾನಕ್ಕೆ ದೇವನಹಳ್ಳಿ ಶಾಸಕ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಸ್ಪರ್ಧೆಯಲ್ಲಿದ್ದರು. ಹಿರಿಯ ಮುಖಂಡರಾದ ಮುನಿಯಪ್ಪ ತಮಗೆ ಕೊನೆಯ ಅವಕಾಶ ಬೇಕೆಂದು ಪಟ್ಟು ಹಿಡಿದಿದ್ದರು.</p><p>ಏಕಕಾಲಕ್ಕೆ ಒಂದೇ ಕುಟುಂಬದ ಇಬ್ಬರಿಗೆ ಅವಕಾಶ ಕಷ್ಟವೆಂದು, ಈ ಬಗ್ಗೆ ತಾವೇ ಅಂತಿಮ ನಿರ್ಧಾರ ಕೈಗೊಂಡು ಒಬ್ಬರ ಹೆಸರನ್ನು ಸೂಚಿಸುವಂತೆ ಅಪ್ಪ ಹಾಗೂ ಪುತ್ರಿ ತೀರ್ಮಾನಕ್ಕೆ ಬಿಟ್ಟಿದ್ದರು. ಬುಧವಾರ ಮುನಿಯಪ್ಪ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.</p><p><strong>2ನೇ ಪಟ್ಟಿಯಲ್ಲಿ ಎಸ್ಎನ್ಗೆ ಅವಕಾಶ?</strong></p><p>ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಲೇ ಇರುವ ಬಂಗಾರಪೇಟೆ ಮೀಸಲು ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್.ಎನ್.ನಾರಾಯಣಸ್ವಾಮಿ ಈಗ ಸಚಿವ ಸಂಪುಟ ವಿಸ್ತರಣೆಯತ್ತ ಚಿತ್ತ ನೆಟ್ಟಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಬಳಿಕ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.</p><p>ಕೆ.ಎಚ್.ಮುನಿಯಪ್ಪ ಅವರಿಗೆ ಅವಕಾಶ ಸಿಕ್ಕಿದ್ದರಿಂದ ಕೆಜಿಎಫ್ ಶಾಸಕಿ ರೂಪಕಲಾ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ಸಾಧ್ಯತೆ ಕಡಿಮೆ. ಹೀಗಾಗಿ, ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಕೋಟಾದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿ ನಾರಾಯಣಸ್ವಾಮಿ ಇದ್ದಾರೆ. ಆದರೆ, ಬೇರೆ ಜಿಲ್ಲೆಗಳ ಈ ಸಮುದಾಯದ ಶಾಸಕರು ಮಂತ್ರಿ ಸ್ಥಾನಕ್ಕೆ ಸ್ಪರ್ಧಿಯಲ್ಲಿದ್ದು, ಹಾದಿ ಕಠಿಣವಾಗಿದೆ.</p><p><strong>ಕೋಲಾರ ಮೂಲದ ಕೃಷ್ಣಬೈರೇಗೌಡಗೆ ಸ್ಥಾನ</strong></p><p>ಕೋಲಾರ ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದವರಾದ ಕೃಷ್ಣಬೈರೇಗೌಡ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಅವರು ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರ ತಂದೆ ಸಿ.ಬೈರೇಗೌಡ ಜಿಲ್ಲೆಯ ವೇಮಗಲ್ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಸೆಗೆ ಒಳಗಾಗಿದ್ದ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಡಳಿತದಲ್ಲೂ ಅವಕಾಶ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ.</p>.<p>ಅಭಿವೃದ್ಧಿ ವಿಚಾರದಲ್ಲಿ, ಸಚಿವ ಸ್ಥಾನ ಸಂಬಂಧ ಪದೇಪದೇ ನಿರ್ಲಕ್ಷಿಸುತ್ತಿರುವ ಹಾಗೂ ನಿರಂತರವಾಗಿ ಅನ್ಯಾಯ ಎಸಗುತ್ತಿರುವ ಬಗ್ಗೆ ಜಿಲ್ಲೆಯಲ್ಲಿ ಆಕ್ರೋಶ ಮಡುಗಟ್ಟಿದೆ.</p>.<p>ಕಾಂಗ್ರೆಸ್ ಪಕ್ಷದ ನಾಲ್ವರು ಜಿಲ್ಲೆಯಲ್ಲಿ ಶಾಸಕರಾಗಿದ್ದು, ಬುಧವಾರ ನಡೆದ ಸಚಿವ ಸಂಪುಟ ಪುನರ್ ರಚನೆಯಲ್ಲಿ ಒಬ್ಬರಿಗೂ ಮಂತ್ರಿ ಭಾಗ್ಯ ಸಿಕ್ಕಿಲ್ಲ. ಈ ಸಂಬಂಧ ಈ ಶಾಸಕರು ಪದೇಪದೇ ಬೇಸರ ಹೊರಹಾಕುತ್ತಲೇ ಇದ್ದಾರೆ.</p>.<p>ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸತತ ಎರಡನೇ ಬಾರಿ ಗೆದ್ದಿರುವ ಒಕ್ಕಲಿಗ ಸಮುದಾಯದ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆಜಿಎಫ್ ಮೀಸಲು ಕ್ಷೇತ್ರದ ಶಾಸಕಿ ರೂಪಕಲಾ ಎಂ.ಶಶಿಧರ್, ಎರಡನೇ ಬಾರಿ ಶಾಸಕರಾಗಿರುವ ಕೋಲಾರ ಕ್ಷೇತ್ರದ ಕೊತ್ತೂರು ಮಂಜುನಾಥ್ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ರೂಪಕಲಾ ಅವರಿಗೆ ಮಹಿಳಾ ಕೋಟದಲ್ಲೇ ಸಿಗುವ ಸಾಧ್ಯತೆ ಇತ್ತು. ಏಕೆಂದರೆ ಕಾಂಗ್ರೆಸ್ನಿಂದ ಗೆದ್ದ ಮಹಿಳೆಯರೇ ನಾಲ್ವರು. ಪರಿಶಿಷ್ಟ ಜಾತಿ ಎಡಗೈ ಸಮುದಾಯದ ರೂಪಕಲಾ ಸತತ ಎರಡನೇ ಬಾರಿ ಗೆದ್ದಿದ್ದಾರೆ. ಆದರೆ, ಅವರ ತಂದೆ ಕೆ.ಎಚ್.ಮುನಿಯಪ್ಪ ಅವರಿಗೆ ಎರಡನೇ ಬಾರಿ ಅವಕಾಶ ಸಿಕ್ಕಿದ್ದರಿಂದ ಇವರಿಗೆ ಸಚಿವ ಸ್ಥಾನ ಕೈತಪ್ಪಿದೆ.</p>.<p>ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಜಿಲ್ಲೆಯ ಕಾಂಗ್ರೆಸ್ನ ನಾಲ್ವರೂ ಶಾಸಕರು ವಿವಿಧ ಹಂತಗಳಲ್ಲಿ ಲಾಬಿ ನಡೆಸಿದ್ದರು. ನವದೆಹಲಿಗೆ ಹೋಗಿ ಹೈಕಮಾಂಡ್ಗೆ ಭೇಟಿಯಾಗಿ ಹಕ್ಕೊತ್ತಾಯ ಮಂಡಿಸಿದ್ದರು. ಅವರ ಅಭಿಮಾನಿಗಳು ಕ್ಷೇತ್ರದಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿದ್ದರು.</p>.<p>ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಕೋಲಾರ ಜಿಲ್ಲೆಗಿಂತ ಕಡಿಮೆ ಕಾಂಗ್ರೆಸ್ ಶಾಸಕರು ಗೆದ್ದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಒಂದು ಸಚಿವ ಸ್ಥಾನ ಸಿಕ್ಕಿತ್ತು. ಡಾ.ಎಂ.ಸಿ.ಸುಧಾಕರ್ ಉನ್ನತ ಶಿಕ್ಷಣ ಸಚಿವರಾಗಿದ್ದರು.</p>.<p>ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೂ ಜಿಲ್ಲೆಗೆ ಅವಕಾಶ ಸಿಕ್ಕಿರಲಿಲ್ಲ. ಕೊನೆಯ 17 ತಿಂಗಳ ಅವಧಿಗೆ ಕೆ.ಆರ್.ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದರು. 2018ರಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಲೂ ಜಿಲ್ಲೆಯ ಯಾರೊಬ್ಬರಿಗೆ ಸಚಿವ ಸ್ಥಾನ ಸಿಗಲಿಲ್ಲ. ಆಗ ರಮೇಶ್ ಕುಮಾರ್ ಎರಡನೇ ಬಾರಿ ವಿಧಾನಸಭೆ ಸಭಾಧ್ಯಕ್ಷರಾಗಿದ್ದರು.</p>.<p><strong>ಮತ್ತೆ ಮುನಿಯಪ್ಪಗೆ ಅವಕಾಶ</strong></p><p>ಕೋಲಾರ ಜಿಲ್ಲೆಯವರಾದ ಕೆ.ಎಚ್.ಮುನಿಯಪ್ಪ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಮೀಸಲು ಕ್ಷೇತ್ರದ ಶಾಸಕರಾಗಿರುವ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಆಹಾರ ಸಚಿವರಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದ ಕಾರಣ ಸಚಿವ ಸಂಪುಟ ಪುನರ್ ರಚನೆ ಆಗಿದ್ದು, ಮತ್ತೊಮ್ಮೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.</p><p>ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತ ಏಳು ಬಾರಿ ಸಂಸದರಾಗಿ, ಯುಪಿಎ ಸರ್ಕಾರದ ಅವಧಿಯಲ್ಲಿ ಹತ್ತು ವರ್ಷ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2023ರಲ್ಲಿ ರಾಜ್ಯ ರಾಜಕಾರಣಕ್ಕೆ ಬಂದಿದ್ದರು.</p><p>ಮುನಿಯಪ್ಪ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯವರು. ತಾಲ್ಲೂಕು ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿದ್ದರು. 1991ರಲ್ಲಿ ಲೋಕಸಭೆ ಪ್ರವೇಶಿಸಿದ್ದರು.</p><p><strong>ಅಪ್ಪ, ಮಗಳ ನಿರ್ಧಾರಕ್ಕೆ ಬಿಟ್ಟಿದ್ದ ಹೈಕಮಾಂಡ್</strong></p><p>ಸಚಿವ ಸ್ಥಾನಕ್ಕೆ ದೇವನಹಳ್ಳಿ ಶಾಸಕ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಸ್ಪರ್ಧೆಯಲ್ಲಿದ್ದರು. ಹಿರಿಯ ಮುಖಂಡರಾದ ಮುನಿಯಪ್ಪ ತಮಗೆ ಕೊನೆಯ ಅವಕಾಶ ಬೇಕೆಂದು ಪಟ್ಟು ಹಿಡಿದಿದ್ದರು.</p><p>ಏಕಕಾಲಕ್ಕೆ ಒಂದೇ ಕುಟುಂಬದ ಇಬ್ಬರಿಗೆ ಅವಕಾಶ ಕಷ್ಟವೆಂದು, ಈ ಬಗ್ಗೆ ತಾವೇ ಅಂತಿಮ ನಿರ್ಧಾರ ಕೈಗೊಂಡು ಒಬ್ಬರ ಹೆಸರನ್ನು ಸೂಚಿಸುವಂತೆ ಅಪ್ಪ ಹಾಗೂ ಪುತ್ರಿ ತೀರ್ಮಾನಕ್ಕೆ ಬಿಟ್ಟಿದ್ದರು. ಬುಧವಾರ ಮುನಿಯಪ್ಪ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.</p><p><strong>2ನೇ ಪಟ್ಟಿಯಲ್ಲಿ ಎಸ್ಎನ್ಗೆ ಅವಕಾಶ?</strong></p><p>ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಲೇ ಇರುವ ಬಂಗಾರಪೇಟೆ ಮೀಸಲು ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್.ಎನ್.ನಾರಾಯಣಸ್ವಾಮಿ ಈಗ ಸಚಿವ ಸಂಪುಟ ವಿಸ್ತರಣೆಯತ್ತ ಚಿತ್ತ ನೆಟ್ಟಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಬಳಿಕ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.</p><p>ಕೆ.ಎಚ್.ಮುನಿಯಪ್ಪ ಅವರಿಗೆ ಅವಕಾಶ ಸಿಕ್ಕಿದ್ದರಿಂದ ಕೆಜಿಎಫ್ ಶಾಸಕಿ ರೂಪಕಲಾ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ಸಾಧ್ಯತೆ ಕಡಿಮೆ. ಹೀಗಾಗಿ, ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಕೋಟಾದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿ ನಾರಾಯಣಸ್ವಾಮಿ ಇದ್ದಾರೆ. ಆದರೆ, ಬೇರೆ ಜಿಲ್ಲೆಗಳ ಈ ಸಮುದಾಯದ ಶಾಸಕರು ಮಂತ್ರಿ ಸ್ಥಾನಕ್ಕೆ ಸ್ಪರ್ಧಿಯಲ್ಲಿದ್ದು, ಹಾದಿ ಕಠಿಣವಾಗಿದೆ.</p><p><strong>ಕೋಲಾರ ಮೂಲದ ಕೃಷ್ಣಬೈರೇಗೌಡಗೆ ಸ್ಥಾನ</strong></p><p>ಕೋಲಾರ ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದವರಾದ ಕೃಷ್ಣಬೈರೇಗೌಡ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಅವರು ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರ ತಂದೆ ಸಿ.ಬೈರೇಗೌಡ ಜಿಲ್ಲೆಯ ವೇಮಗಲ್ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>