<p><strong>ಕೋಲಾರ:</strong> ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ₹2.51 ಕೋಟಿ ಗ್ರಂಥಾಲಯ ಕರ ಬಾಕಿ ಇದ್ದು, ಶೀಘ್ರ ವಸೂಲು ಮಾಡುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಯೋಜನಾ ನಿರ್ದೇಶಕಿ ಅಂಬಿಕಾ ಅವರಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ 69 ನೇ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಗೆ ಬಂದು ಎಂಟು ತಿಂಗಳಾದರೂ ಇಷ್ಟೊಂದು ದೊಡ್ಡ ಮೊತ್ತದ ಗ್ರಂಥಾಲಯ ಕರ ಬಾಕಿ ಇರುವ ಬಗ್ಗೆ ತಮಗೆ ಮಾಹಿತಿ ನೀಡದಿರುವ ಬಗ್ಗೆ ಗ್ರಂಥಾಲಯ ಉಪನಿರ್ದೇಶಕ ಸಿ.ಗಣೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಯಾವ್ಯಾವ ವರ್ಷದಲ್ಲಿ ಎಷ್ಟು ಕರ ಬಾಕಿ ಇದೆ ಎಂಬ ಬಗ್ಗೆ ವಿವರಗಳನ್ನು ಯೋಜನಾ ನಿರ್ದೇಶಕರಿಗೆ ನೀಡಿ, ಶೀಘ್ರ ಬಾಕಿ ಕರ ವಸೂಲು ಮಾಡಿಸಿಕೊಳ್ಳುವಂತೆ ತಾಕೀತು ಮಾಡಿದರು.</p>.<p>ಇದೇ ಸಭೆಯಲ್ಲಿ 2025-26 ನೇ ಸಾಲಿಗೆ ₹1.45 ಕೋಟಿ ಮೊತ್ತದ ಬಜೆಟ್ಗೆ ಮತ್ತು ವಿವೇಚನಾ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಖರೀದಿಸಿರುವ ಪುಸ್ತಕಗಳ ಪಟ್ಟಿಗೆ ಅನುಮೋದನೆ ನೀಡಲಾಯಿತು. ಸ್ವಚ್ಛತಾ ಕೆಲಸ ಮಾಡುತ್ತಿರುವ ಶುಚಿಗಾರರು ಮತ್ತು ಗಣಕ ಯಂತ್ರ ನಿರ್ವಹಕರಾಗಿ ಕೆಲಸ ನಿರ್ವಹಿಸುತ್ತಿರುವವರ ಮಾಸಿಕ ₹1 ಸಾವಿರ ವೇತನ ಹೆಚ್ಚಿಸಲು ಒಪ್ಪಿಗೆ ಸೂಚಿಸಲಾಯಿತು. ಹಲವು ವರ್ಷಗಳಿಂದಲೂ ನನೆಗುದಿಗೆ ಬಿದ್ದಿರುವ ಹೈಟೆಕ್ ಗ್ರಂಥಾಲಯ ನಿರ್ಮಾಣದ ವಿಚಾರವಾಗಿಯೂ ಚರ್ಚೆ ನಡೆಯಿತು.</p>.<p>ಕೋಲಾರ ಹೊರವಲಯದ ಟಮಕ ಕೈಗಾರಿಕಾ ಪ್ರದೇಶದಲ್ಲಿ ಗ್ರಂಥಾಲಯ ಇಲಾಖೆಗೆ ನೀಡಿರುವ 4 ಶೆಡ್ಗಳಲ್ಲಿ 2 ಶೆಡ್ಗಳನ್ನು ಬಾಡಿಗೆ ನೀಡುವ ವಿಚಾರಕ್ಕೆ ಎಂ.ಆರ್.ರವಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗ್ರಂಥಾಲಯ ಬಳಕೆಗೆ ನೀಡಿರುವ ಶೆಡ್ಗಳನ್ನು ಬಾಡಿಗೆಗೆ ನೀಡುವುದು ಸರಿಯಾದ ನಿರ್ಧಾರವಲ್ಲ, ಶೆಡ್ಗಳ ಕುರಿತು ಸಂಪೂರ್ಣ ಮಾಹಿತಿ ಮತ್ತು ಜಾಗದ ಲಭ್ಯತೆ ಕುರಿತು ಮತ್ತೊಮ್ಮೆ ಮಾಹಿತಿ ನೀಡುವಂತೆ ಗ್ರಂಥಾಲಯ ಉಪನಿರ್ದೇಶಕರಿಗೆ ಸೂಚಿಸಿದರು.</p>.<p>ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಸಮಿತಿ ಸದಸ್ಯರಾದ ಬಿ.ವಿ.ಗೋಪಿನಾಥ್, ಕೆ.ಎಸ್.ಗಣೇಶ್, ಡಿಡಿಪಿಐ ಕೃಷ್ಣಮೂರ್ತಿ, ಬಿಇಒ ಮಧುಮಾಲತಿ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರರಾವ್ ಇದ್ದರು.</p>.<p>ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಸಿ.ಗಣೇಶ ಸ್ವಾಗತಿಸಿ, ಗ್ರಂಥಾಲಯಾಧಿಕಾರಿ ನಾಗಮಣಿ ವಂದಿಸಿದರು.</p>.<div><blockquote>ಹೈಟೆಕ್ ಗ್ರಂಥಾಲಯ ನಿರ್ಮಾಣ ಸಂಬಂಧ ಮೂರು ತಿಂಗಳೊಳಗಾಗಿ ಪರಿಷ್ಕೃತ ಯೋಜನಾ ವರದಿ ಸ್ವೀಕರಿಸಿ ಪ್ರಾಧಿಕಾರದ ಸಭೆ ಕರೆದು ಮಂಡಿಸಿದರೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ₹2.51 ಕೋಟಿ ಗ್ರಂಥಾಲಯ ಕರ ಬಾಕಿ ಇದ್ದು, ಶೀಘ್ರ ವಸೂಲು ಮಾಡುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಯೋಜನಾ ನಿರ್ದೇಶಕಿ ಅಂಬಿಕಾ ಅವರಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ 69 ನೇ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಗೆ ಬಂದು ಎಂಟು ತಿಂಗಳಾದರೂ ಇಷ್ಟೊಂದು ದೊಡ್ಡ ಮೊತ್ತದ ಗ್ರಂಥಾಲಯ ಕರ ಬಾಕಿ ಇರುವ ಬಗ್ಗೆ ತಮಗೆ ಮಾಹಿತಿ ನೀಡದಿರುವ ಬಗ್ಗೆ ಗ್ರಂಥಾಲಯ ಉಪನಿರ್ದೇಶಕ ಸಿ.ಗಣೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಯಾವ್ಯಾವ ವರ್ಷದಲ್ಲಿ ಎಷ್ಟು ಕರ ಬಾಕಿ ಇದೆ ಎಂಬ ಬಗ್ಗೆ ವಿವರಗಳನ್ನು ಯೋಜನಾ ನಿರ್ದೇಶಕರಿಗೆ ನೀಡಿ, ಶೀಘ್ರ ಬಾಕಿ ಕರ ವಸೂಲು ಮಾಡಿಸಿಕೊಳ್ಳುವಂತೆ ತಾಕೀತು ಮಾಡಿದರು.</p>.<p>ಇದೇ ಸಭೆಯಲ್ಲಿ 2025-26 ನೇ ಸಾಲಿಗೆ ₹1.45 ಕೋಟಿ ಮೊತ್ತದ ಬಜೆಟ್ಗೆ ಮತ್ತು ವಿವೇಚನಾ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಖರೀದಿಸಿರುವ ಪುಸ್ತಕಗಳ ಪಟ್ಟಿಗೆ ಅನುಮೋದನೆ ನೀಡಲಾಯಿತು. ಸ್ವಚ್ಛತಾ ಕೆಲಸ ಮಾಡುತ್ತಿರುವ ಶುಚಿಗಾರರು ಮತ್ತು ಗಣಕ ಯಂತ್ರ ನಿರ್ವಹಕರಾಗಿ ಕೆಲಸ ನಿರ್ವಹಿಸುತ್ತಿರುವವರ ಮಾಸಿಕ ₹1 ಸಾವಿರ ವೇತನ ಹೆಚ್ಚಿಸಲು ಒಪ್ಪಿಗೆ ಸೂಚಿಸಲಾಯಿತು. ಹಲವು ವರ್ಷಗಳಿಂದಲೂ ನನೆಗುದಿಗೆ ಬಿದ್ದಿರುವ ಹೈಟೆಕ್ ಗ್ರಂಥಾಲಯ ನಿರ್ಮಾಣದ ವಿಚಾರವಾಗಿಯೂ ಚರ್ಚೆ ನಡೆಯಿತು.</p>.<p>ಕೋಲಾರ ಹೊರವಲಯದ ಟಮಕ ಕೈಗಾರಿಕಾ ಪ್ರದೇಶದಲ್ಲಿ ಗ್ರಂಥಾಲಯ ಇಲಾಖೆಗೆ ನೀಡಿರುವ 4 ಶೆಡ್ಗಳಲ್ಲಿ 2 ಶೆಡ್ಗಳನ್ನು ಬಾಡಿಗೆ ನೀಡುವ ವಿಚಾರಕ್ಕೆ ಎಂ.ಆರ್.ರವಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗ್ರಂಥಾಲಯ ಬಳಕೆಗೆ ನೀಡಿರುವ ಶೆಡ್ಗಳನ್ನು ಬಾಡಿಗೆಗೆ ನೀಡುವುದು ಸರಿಯಾದ ನಿರ್ಧಾರವಲ್ಲ, ಶೆಡ್ಗಳ ಕುರಿತು ಸಂಪೂರ್ಣ ಮಾಹಿತಿ ಮತ್ತು ಜಾಗದ ಲಭ್ಯತೆ ಕುರಿತು ಮತ್ತೊಮ್ಮೆ ಮಾಹಿತಿ ನೀಡುವಂತೆ ಗ್ರಂಥಾಲಯ ಉಪನಿರ್ದೇಶಕರಿಗೆ ಸೂಚಿಸಿದರು.</p>.<p>ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಸಮಿತಿ ಸದಸ್ಯರಾದ ಬಿ.ವಿ.ಗೋಪಿನಾಥ್, ಕೆ.ಎಸ್.ಗಣೇಶ್, ಡಿಡಿಪಿಐ ಕೃಷ್ಣಮೂರ್ತಿ, ಬಿಇಒ ಮಧುಮಾಲತಿ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರರಾವ್ ಇದ್ದರು.</p>.<p>ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಸಿ.ಗಣೇಶ ಸ್ವಾಗತಿಸಿ, ಗ್ರಂಥಾಲಯಾಧಿಕಾರಿ ನಾಗಮಣಿ ವಂದಿಸಿದರು.</p>.<div><blockquote>ಹೈಟೆಕ್ ಗ್ರಂಥಾಲಯ ನಿರ್ಮಾಣ ಸಂಬಂಧ ಮೂರು ತಿಂಗಳೊಳಗಾಗಿ ಪರಿಷ್ಕೃತ ಯೋಜನಾ ವರದಿ ಸ್ವೀಕರಿಸಿ ಪ್ರಾಧಿಕಾರದ ಸಭೆ ಕರೆದು ಮಂಡಿಸಿದರೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>