<p><strong>ಕೋಲಾರ:</strong> ‘ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಶಾಲಾ ಆವರಣದಲ್ಲಿ ಗಿಡ ಮರ ಬೆಳೆಸಲು ಒತ್ತು ನೀಡಿ’ ಎಂದು ಮುಳಬಾಗಿಲು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಸಾಬ ಯಾದವಾಡ ಕಿವಿಮಾತು ಹೇಳಿದರು.</p>.<p>ಕಾನೂನು ಸೇವಾ ಸಮಿತಿ, ಮುಳಬಾಗಿಲು ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹನುಮನಹಳ್ಳಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿ, ‘ಮನುಷ್ಯನ ದುರಾಸೆ, ಸ್ವಾರ್ಥದಿಂದ ಅರಣ್ಯ ನಾಶವಾಗುತ್ತಿದೆ’ ಎಂದು ಕಳವಳ ವ್ಯಕ್ತಿಪಡಿಸಿದರು.</p>.<p>‘ಅರಣ್ಯ ನಾಶದಿಂದ ಪರಿಸರ ಅಸಮತೋಲನವಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಗಿಡ ಮರ ಬೆಳೆಸುವ ಮೂಲಕ ಮುನಿಸಿಕೊಂಡಿರುವ ಪ್ರಕೃತಿಯನ್ನು ಶಾಂತಗೊಳಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸುವುದರಿಂದ ಮಾಲಿನ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ’ ಎಂದರು.</p>.<p>‘ಪರಿಸರದಲ್ಲಿ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಟರಿಣಾಮವಾಗುತ್ತಿದೆ. ಇದನ್ನು ತಪ್ಪಿಸಲು ಗಿಡ ಮರ ಬೆಳೆಸಬೇಕು’ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎನ್.ಕಾಂತಮ್ಮ ಸಲಹೆ ನೀಡಿದರು.</p>.<p>‘ವಿಶ್ವದಲ್ಲಿ ಪ್ರಕೃತಿ ಸಮತೋಲನಕ್ಕೆ ಇರಬೇಕಾದ ಪ್ರಮಾಣದಲ್ಲಿ ಗಿಡ ಮರಗಳಿಲ್ಲ. ಜನ ಮರ ಗಿಡ ಹಾಳು ಮಾಡಿದ್ದಾರೆ. ಮನೆ, ರಸ್ತೆ, ಕೈಗಾರಿಕೆ, ಉರುವಲಿಗಾಗಿ ಮರ ಕಡಿದಿದ್ದೇವೆ. ಆದರೆ, ಅಷ್ಟೇ ಪ್ರಮಾಣದಲ್ಲಿ ಮರ ಬೆಳೆಸಬೇಕು’ ಎಂದು ಹೇಳಿದರು.</p>.<p>ಶಾಲೆ ಮುಖ್ಯ ಶಿಕ್ಷಕ ಬಿ.ಕೆ.ನಾಗರಾಜ್, ವಕೀಲರ ಸಂಘದ ಅಧ್ಯಕ್ಷ ಎಂ.ಎಲ್.ವೆಂಕಟೇಶ್, ಕಾರ್ಯದರ್ಶಿ ಕೆ.ಆರ್.ವೇಣುಗೋಪಾಲ್, ವಕೀಲರಾದ ಎಂ.ಪ್ರಭಾಕರ್, ಎನ್.ಸತೀಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಶಾಲಾ ಆವರಣದಲ್ಲಿ ಗಿಡ ಮರ ಬೆಳೆಸಲು ಒತ್ತು ನೀಡಿ’ ಎಂದು ಮುಳಬಾಗಿಲು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಸಾಬ ಯಾದವಾಡ ಕಿವಿಮಾತು ಹೇಳಿದರು.</p>.<p>ಕಾನೂನು ಸೇವಾ ಸಮಿತಿ, ಮುಳಬಾಗಿಲು ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹನುಮನಹಳ್ಳಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿ, ‘ಮನುಷ್ಯನ ದುರಾಸೆ, ಸ್ವಾರ್ಥದಿಂದ ಅರಣ್ಯ ನಾಶವಾಗುತ್ತಿದೆ’ ಎಂದು ಕಳವಳ ವ್ಯಕ್ತಿಪಡಿಸಿದರು.</p>.<p>‘ಅರಣ್ಯ ನಾಶದಿಂದ ಪರಿಸರ ಅಸಮತೋಲನವಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಗಿಡ ಮರ ಬೆಳೆಸುವ ಮೂಲಕ ಮುನಿಸಿಕೊಂಡಿರುವ ಪ್ರಕೃತಿಯನ್ನು ಶಾಂತಗೊಳಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸುವುದರಿಂದ ಮಾಲಿನ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ’ ಎಂದರು.</p>.<p>‘ಪರಿಸರದಲ್ಲಿ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಟರಿಣಾಮವಾಗುತ್ತಿದೆ. ಇದನ್ನು ತಪ್ಪಿಸಲು ಗಿಡ ಮರ ಬೆಳೆಸಬೇಕು’ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎನ್.ಕಾಂತಮ್ಮ ಸಲಹೆ ನೀಡಿದರು.</p>.<p>‘ವಿಶ್ವದಲ್ಲಿ ಪ್ರಕೃತಿ ಸಮತೋಲನಕ್ಕೆ ಇರಬೇಕಾದ ಪ್ರಮಾಣದಲ್ಲಿ ಗಿಡ ಮರಗಳಿಲ್ಲ. ಜನ ಮರ ಗಿಡ ಹಾಳು ಮಾಡಿದ್ದಾರೆ. ಮನೆ, ರಸ್ತೆ, ಕೈಗಾರಿಕೆ, ಉರುವಲಿಗಾಗಿ ಮರ ಕಡಿದಿದ್ದೇವೆ. ಆದರೆ, ಅಷ್ಟೇ ಪ್ರಮಾಣದಲ್ಲಿ ಮರ ಬೆಳೆಸಬೇಕು’ ಎಂದು ಹೇಳಿದರು.</p>.<p>ಶಾಲೆ ಮುಖ್ಯ ಶಿಕ್ಷಕ ಬಿ.ಕೆ.ನಾಗರಾಜ್, ವಕೀಲರ ಸಂಘದ ಅಧ್ಯಕ್ಷ ಎಂ.ಎಲ್.ವೆಂಕಟೇಶ್, ಕಾರ್ಯದರ್ಶಿ ಕೆ.ಆರ್.ವೇಣುಗೋಪಾಲ್, ವಕೀಲರಾದ ಎಂ.ಪ್ರಭಾಕರ್, ಎನ್.ಸತೀಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>